ಜ. 31, ಫೆ. 1ಕ್ಕೆ ಬ್ಯಾಂಕ್ ನೌಕರರ ಮುಷ್ಕರ
Team Udayavani, Jan 30, 2020, 3:02 AM IST
ಬೆಂಗಳೂರು: ಹೊಸ ಪಿಂಚಣಿ ಯೋಜನೆ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜ.31 ಮತ್ತು ಫೆ.1ರಂದು ಎರಡು ದಿನಗಳ ಕಾಲ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬ್ಯಾಂಕ್ ಸಂಘಟನೆಗಳ ಐಕ್ಯ ವೇದಿಕೆಯು ಧರಣಿ ಹಮ್ಮಿಕೊಂಡಿದೆ.
ಸುದ್ದಿಗೋಷ್ಠಿಯಲ್ಲಿ ಸಂಚಾಲಕ ಎಚ್.ವಿ.ರೈ ಮಾತನಾಡಿ, ನವೆಂಬರ್ 2017ರಿಂದ ಜಾರಿಗೆ ಬರಬೇಕಾಗಿರುವ ಬ್ಯಾಂಕ್ ನೌಕರರ ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆ ಒಪ್ಪಂದ, ಭಾರತೀಯ ಬ್ಯಾಂಕುಗಳ ಸಂಘದಿಂದ ಅಸಮರ್ಥನೀಯ ನಿರ್ವಹಣೆ ಮತ್ತು ನಿರ್ಲಕ್ಷ್ಯ ಧೋರಣೆಯಿಂದ ಬ್ಯಾಂಕ್ ನೌಕರರು ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದರು.
ಪಿಂಚಣಿ ಪರಿಷ್ಕರಣೆ, ನಿವೃತ್ತಿ ಸೌಲಭ್ಯಗಳ ಮೇಲೆ ಮಿತಿರಹಿತ ವರಮಾನ ತೆರಿಗೆ ವಿನಾಯ್ತಿ, ಅಧಿಕಾರಿಗಳ ಕೆಲಸದ ನಿಗದಿತ ಅವಧಿ, ಐದು ದಿನಗಳು ಬ್ಯಾಂಕಿಂಗ್, ಗುತ್ತಿಗೆ ಕಾರ್ಮಿಕರು ಮತ್ತು ವ್ಯವಹಾರ ಪ್ರತಿನಿಧಿಗಳಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನಿಗದಿ ಜಾರಿ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮುಷ್ಕರದ ಮೂಲಕ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ