ಬೇಡಿಕೆ ಈಡೇರಿಕೆಗೆ ಅಗ್ರಹ
ಅಕ್ಷರ ದಾಸೋಹ ನೌಕರರಿಂದ ಪ್ರತಿಭಟನಾ ರ್ಯಾಲಿ
Team Udayavani, Jan 30, 2020, 12:04 PM IST
ವಿಜಯಪುರ: ರಾಜ್ಯದ ಅಕ್ಷರ ದಾಸೋಹ ನೌಕರರ ಗೌರವ ಧನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ನಡೆಯಿತು.
ಜಿಪಂ ಮಹಾದ್ವಾರದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಸಿಇಒ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಮಾಸಿಕ ವೇತನ 12 ಸಾವಿರ ರೂ. ನಿಗದಿ ಮಾಡಿ, ಕಾರ್ಮಿಕ ವಿರೋಧಿ ಸರಕಾರಕ್ಕೆ ಧಿಕ್ಕಾರ, ಕಾರ್ಮಿಕರೇ ಒಂದಾಗಿ ಹೋರಾಟಕ್ಕೆ ಮುಂದಾಗಿ, ಪುಡಿಗಾಸಿನಲ್ಲಿ ದುಡಿಸುಕೊಳ್ಳುತ್ತಿರುವ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆಗಳನ್ನು ಪ್ರತಿಭಟನಾಕಾರರು ಮೊಳಗಿಸಿದರು.
ಪ್ರತಿಭಟನೆಯನ್ನು ಬೆಂಬಬಲಿಸಿ ಎಐಟಿಯುಸಿ ಜಿಲ್ಲಾಧ್ಯಕ್ಷ ಎಚ್.ಟಿ. ಮಲ್ಲಿಕಾರ್ಜುನ ಮಾತನಾಡಿ, ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆ ಮತ್ತು ರಾಜ್ಯ ಸರ್ಕಾರದ
ಶಿಕ್ಷಣ ಇಲಾಖೆ ಜಂಟಿ ಸಹಭಾಗಿತ್ವದಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮ ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಿರುವುದು ಎಲ್ಲರಿಗೂ ತಿಳಿದ ವಿಷಯ. ಬಿಸಿಯೂಟದ ಜೊತೆಗೆ ಕ್ಷೀರ ಭಾಗ್ಯದ ಯೋಜನೆಯಿಂದಾಗಿ ಮಕ್ಕಳ ಅಪೌಷ್ಟಿಕತೆ ಕಡಿಮೆಯಾಗಿದೆ ಹಾಗೂ ಶಾಲೆ ಬಿಡುವ ಮಕ್ಕಳ ಸಂಖ್ಯೆ ಕೂಡ ಕಡಿಮೆಯಾಗಿರುವುದಾಗಿ ಸರಕಾರದ ಅಂಕಿ ಅಂಶಗಳು ತಿಳಿಸುತ್ತವೆ ಎಂದರು.
ಪ್ರತಿಭಟನೆ ಬೆಂಬಲಿಸಿದ ಎಸ್ ಯುಸಿಐ ಜಿಲ್ಲಾ ಕಾರ್ಯದರ್ಶಿ ಬಿ.ಭಗವಾನರೆಡ್ಡಿ ಮಾತನಾಡಿ, ಕಾರ್ಮಿಕರ ಶೊಷಣೆಗೆ ಇಲ್ಲಿವರೆಗೆ ಆಡಳಿತ ನಡೆಸಿರುವ ಎಲ್ಲ
ಸರಕಾರಗಳು ಮತ್ತು ಈ ದೇಶದ ಬಂಡವಾಳಶಾಹಿ ಪರವಾದ ನೀತಿ ಜಾರಿಗೋಳಿಸಿರುವುದರಿಂದ ಎಲ್ಲ ಕ್ಷೇತ್ರದ ಕಾರ್ಮಿಕರ ಸ್ಥಿತಿ ದುಸ್ತರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಸುನೀಲ ಸಿದ್ರಾಮಶೆಟ್ಟಿ ಮಾತನಾಡಿ, ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ಹಾಸ್ಟೆಲ್ಗಳಲ್ಲಿ ಅಡುಗೆ ಮಾಡುವವರಿಗೆ 12 ಸಾವಿರ ರೂ. ನಿಗ ದಿಗೊಳಿಸಿದೆ. ಆದರೆ, ಬಿಸಿಯೂಟ ಕಾರ್ಮಿಕರಿಗೆ ಇದು ಅನ್ವಯವಾಗುತ್ತಿಲ್ಲ. ಪರ್ಯಾಯ ಕೆಲಸಕ್ಕೂ ಹೋಗಲು ಸಾಧ್ಯವಾಗುತ್ತಿಲ್ಲ. ಆರೋಗ್ಯ ಸೌಲಭ್ಯವಾಗಲಿ, ವಿಮಾ ಸೌಲಭ್ಯಗಳು ಇವರಿಗೆ ದೊರಕುತ್ತಿಲ್ಲ ಎಂದರು.
ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ಕಾಯ್ದೆಯಡಿ ಬಿಸಿಯೂಟ ಸಿಬ್ಬಂದಿಗೆ 12 ಸಾವಿರ ರೂ. ವೇತನ ನೀಡುವುದು, ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್
ಪಿಂಚಣಿ ಯೋಜನೆಯ ಕಂತುಗಳನ್ನು ಸರ್ಕಾರವೇ ಭರಿಸಿ ಬಿಸಿಯೂಟ ಕಾರ್ಯಕರ್ತರಿಗೆ ನೀಡುವುದು ವಾಜಪೇಯಿ ಆರೋಗ್ಯಶ್ರೀ ವೈದ್ಯಕೀಯ ಸೌಲಭ್ಯದ ಕಾರ್ಡ್ ಒದಗಿಸುವುದು ಹಾಗೂ ವಯೋನಿವೃತ್ತಿ ಹೊಂದಿದ ನೌಕರರಿಗೆ ಇಡಿಗಂಟಿನ ಗೌರವ ಧನ ನೀಡುವುದು ಸೇರಿದಂತೆ ಬಿಸಿಯೂಟ ನೌಕರರ ಪರವಾದ ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಯಿತು.
ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ, ಅಕ್ಷಯ, ಶಶಿಕಲಾ ಮ್ಯಾಗೆರಿ, ಬಸಮ್ಮ ಆಲಮಟ್ಟಿ, ಪಾರ್ವತಿ ಪಠಪತಿ, ಗಂಗು ಉಳಾಗಡ್ಡಿ, ಜಾಮಕ್ಕಾ ಹಟ್ಟಿ, ಸಂಗಿತಾ ಹೊನವಾಡ, ಭಾಗೀರಥಿ ಬಡಿಗೇರ, ಸುಲೋಚನಾ ಬೆಲ್ಲದ, ಚನ್ನಮ್ಮ ಪೆಂಟದ, ಪ್ರೇಮಾ ಇಂಗಳೇಶ್ವರ, ಅಮೀನಾ ಬಾಗೇವಾಡಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ