ಒಂದು ಕೊಲೆಯ ಸುತ್ತ ರೈಮ್ಸ್
ಹಾಡಿಲ್ಲ, ಫೈಟ್ ಇಲ್ಲ, ಕಥೆಯೇ ಎಲ್ಲಾ ...
Team Udayavani, Jan 31, 2020, 5:27 AM IST
“ರೈಮ್ಸ್’ – ಹೀಗೊಂದು ಸಿನಿಮಾದ ಹೆಸರನ್ನು ನೀವು ಕೇಳಿರಬಹುದು. ಈಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಚಿತ್ರದ ಟ್ರೇಲರ್ ಹಾಗೂ ಫಸ್ಟ್ಲುಕ್ ಅನ್ನು ಇತ್ತೀಚೆಗೆ ಮಾಧ್ಯಮದ ಮುಂದೆ ಚಿತ್ರತಂಡ ಬಿಡುಗಡೆ ಮಾಡಿತು. ಅಜಿತ್ ಜಯರಾಜ್ ನಾಯಕರಾಗಿರುವ ಈ ಚಿತ್ರದಲ್ಲಿ ಸುಷ್ಮಾ ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟಿ ಭವ್ಯಾ ಕೂಡಾ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಜ್ಞಾನಶೇಖರ್ ಹಾಗೂ ರಮೇಶ್ ಆರ್ಯ ಈ ಚಿತ್ರದ ನಿರ್ಮಾಪಕರು. ಇವರಿಗೆ ಸ್ನೇಹಿತರು ಕೂಡಾ ಸಾಥ್ ನೀಡಿದ್ದಾರೆ. ಅಜಿತ್ ಕುಮಾರ್ ಜೆ. ನಿರ್ದೇಶಕರು. ಅವರಿಗೆ ಇದು ಮೊದಲ ಸಿನಿಮಾ.
ಒಂದು ಕೊಲೆಯ ತನಿಖೆ ಸುತ್ತ ನಡೆಯುವ ಕಥೆ ಇದು. ಇಲ್ಲಿ ಸಾಂಗ್ಸ್ ಇಲ್ಲ, ಫೈಟ್ಸ್ ಕೂಡ ಇಲ್ಲ. ಹಾಗಂತ, ಕಲಾತ್ಮಕ ಸಿನಿಮಾ ಅಲ್ಲ, ನೋಡುಗರಿಗೆ ಕುತೂಹಲ ಕೆರಳಿಸುವ ಅಂಶಗಳು ಇಲ್ಲಿವೆ. “ರೈಮ್ಸ್’ ಶೀರ್ಷಿಕೆ ಯಾಕೆ ಎಂಬುದಕ್ಕೆ ಸಿನಿಮಾ ನೋಡಿದಾಗ ಗೊತ್ತಾಗುತ್ತೆ ಎನ್ನುವುದು ನಿರ್ದೇಶಕರ ಮಾತು. ಇನ್ನು, ನಾಯಕ ಅಜಿತ್ ಜಯರಾಜ್ ಅವರಿಗೆ ಈ ಪಾತ್ರ ತುಂಬಾ ಹೊಸದಾಗಿದೆಯಂತೆ. ಈ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಮತ್ತಷ್ಟು ಇಷ್ಟವಾಗುವ ವಿಶ್ವಾಸ ಅವರಿಗಿದೆ. “ರೈಮ್ಸ್ ಕಥೆಯಲ್ಲಿ ಸಾಕಷ್ಟು ವಿಶೇಷತೆ ಇತ್ತು. ಹಾಗಾಗಿ ಒಪ್ಪಿಕೊಂಡೆ. ಪಾತ್ರ ವಿಭಿನ್ನವಾಗಿದೆ. ಕಥೆ ಕೂಡ ಹೊಸತನದಿಂದ ಕೂಡಿದೆ. ನವೆಂಬರ್ನಿಂದ ಶುರುವಾಗಲಿದೆ. ಮೊದಲ ಸಲ ಬ್ರೈನ್ಗೆàಮ್ ಕುರಿತಾದ ಪಾತ್ರ ಮಾಡುತ್ತಿದ್ದೇನೆ. ಈ ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ’ ಎಂದು ಚಿತ್ರದ ಬಗ್ಗೆ ಹೇಳಿದರು ಅಜಿತ್. ಇನ್ನು ಅಜಿತ್ ಜಯರಾಜ್ ಚಿತ್ರರಂಗಕ್ಕೆ ಬಂದು ಐದು ವರ್ಷವಾಗಿದ್ದು, ಈ ಐದು ವರ್ಷಗಳಲ್ಲಿ ನಟಿಸಿದ ಸಿನಿಮಾಗಳಿಗಿಂತ “ರೈಮ್ಸ್’ ಹೊಸ ಬಗೆಯ ಸಿನಿಮಾವಂತೆ.
ನಾಯಕಿ ಸುಷ್ಮಾ ನಾಯರ್ ಅವರಿಗೆ ಇದು ಕನ್ನಡದ ಮೊದಲ ಸಿನಿಮಾ. ಹಿಂದೆ ತಮಿಳಿನ ಧಾರಾವಾಹಿಗಳಲ್ಲಿ ನೆಗೆಟಿವ್ ಪಾತ್ರ ಮಾಡಿದ್ದಾರೆ. ಆದರೆ, ಈಗ ಪಾಸಿಟಿವ್ ಪಾತ್ರದ ಮೂಲಕ ಕನ್ನಡಿಗರ ಮುಂದೆ ಬರುತ್ತಿದ್ದಾರೆ. ಅವರು ಕೂಡಾ ಸಿನಿಮಾ ಹಾಗೂ ಪಾತ್ರದ ಬಗ್ಗೆ ಖುಷಿ ಹಂಚಿಕೊಂಡರು.
ನಟಿ ಅಭಿನಯ ಅವರು ನಾಯಕ ಜಯರಾಜ್ ಅವರ ನಟನೆ ಹಾಗೂ ಅವರಿಂದ ಕಲಿತ ಕೆಲವು ಅಂಶಗಳ ಬಗ್ಗೆ ಮಾತನಾಡಿದರು. ಚಿತ್ರದಲ್ಲಿ ಅವರ ಪಾತ್ರ ಸಣ್ಣದಾಗಿದ್ದರೂ, ಪರಿಣಾಮಕಾರಿಯಾಗಿದೆಯಂತೆ. ಚಿತ್ರಕ್ಕೆ ಶಕ್ತಿ ಸಂಗೀತ, ಅರ್ಜುನ್ ಅಕೋಟ್ ಛಾಯಾಗ್ರಹಣವಿದೆ.
ರವಿ ರೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ
Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್
Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್ ನಿರ್ದೇಶನದ ಸಿನಿಮಾ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ