ಎಲ್ಲರ ಸಹಕಾರದಿಂದ ಯೋಜನೆಗಳು ಸಾಕಾರ


Team Udayavani, Feb 1, 2020, 3:00 AM IST

yellara-saha

ಚಾಮರಾಜನಗರ: ಜಿಲ್ಲೆಯಿಂದ ವರ್ಗಾವಣೆಗೊಂಡಿರುವ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರಿಗೆ ಬೀಳ್ಕೊಡುಗೆ ಹಾಗೂ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಾ. ಎಂ.ಆರ್‌.ರವಿ ಅವರನ್ನು ಸ್ವಾಗತಿಸಲಾಯಿತು. ನಗರದ ಜಿಪಂ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಹಾಗೂ ನೂತನ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಅವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಬಿ.ಬಿ.ಕಾವೇರಿ, ಚಾಮರಾಜನಗರಕ್ಕೆ ಬರುವ ಮುನ್ನ ಜಿಲ್ಲೆಯ ಬಗ್ಗೆ ಕೇಳಿದ್ದ ಎಲ್ಲಾ ನಕಾರಾತ್ಮಕ ಅಂಶಗಳು ಸುಳ್ಳು ಎಂಬುದನ್ನು ಇಲ್ಲಿ ಕೆಲಸ ನಿರ್ವಹಿದ ಅವಧಿಯಲ್ಲಿ ನಾನು ಮನಗಂಡಿದ್ದೇನೆ. ಇಲ್ಲಿನ ಜನರು ತೋರಿದ ಪ್ರೀತಿ, ಇದು ನನ್ನ ಜಿಲ್ಲೆ ಎಂಬ ಬಾಂಧವ್ಯ ಬೆಳೆಯುವಂತೆ ಮಾಡಿದೆ. ಇದಕ್ಕೆ ನಾನು ಸದಾ ಚಿರಋಣಿಯಾಗಿದ್ದೇನೆ ಎಂದರು.

ಎಲ್ಲರಿಗೂ ಆಭಾರಿ: ಜಿಲ್ಲೆಗೆ ಸಂಬಂಧಿಸಿದ ಎಲ್ಲಾ ಯೋಜನೆಗಳನ್ನು ಸಾಕಾರಗೊಳಿಸುವಲ್ಲಿ ಇಲ್ಲಿನ ಅಧಿಕಾರಿಗಳು ಸಹಕಾರ ನೀಡಿದ್ದಾರೆ. ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಪ್ರತಿಯೊಬ್ಬ ಅಧಿಕಾರಿಯ ನಿರಂತರ ಪರಿಶ್ರಮ ಹಾಗೂ ಸಮನ್ವಯ ಕಾರಣವಾಗಿದೆ. ಅಲ್ಲದೆ, ನನ್ನ ಆಪ್ತ ಸಹಾಯಕರ ತಂಡ ಸದಾ ಕಾಲ ನನ್ನ ಎಲ್ಲಾ ಕೆಲಸಗಳಲ್ಲೂ, ಸಮಯದ ಗಡಿ ಹಾಕಿಕೊಳ್ಳದೇ ಕಾರ್ಯನಿರ್ವಹಿಸಿದ್ದಾರೆ. ಇದಕ್ಕಾಗಿ ನಾನು ಎಲ್ಲರಿಗೂ ಆಭಾರಿಯಾಗಿದ್ದೇನೆ ಎಂದು ಭಾವುಕರಾದರು.

ಅಭಿವೃದ್ಧಿಗೆ ಆದ್ಯತೆ ನೀಡಿ: ಪ್ರತಿಯೊಬ್ಬ ಅಧಿಕಾರಿಯೂ, ಸರ್ಕಾರದ ಮುಖಪುಟವಾಗಿ ಕಾರ್ಯನಿರ್ವಹಿಸಬೇಕು. ಅಧಿಕಾರದ ಅಹಂ ತೋರದೇ, ಸಾಮಾನ್ಯ ಜನರನ್ನೂ ಪ್ರೀತಿಯಿಂದ ಕಾಣುವ, ಅವರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಯಾವುದೇ ಒತ್ತಡಗಳಿಗೆ ಮಣಿಯದೇ, ಅಭಿವೃದ್ಧಿಗೆ ಆದ್ಯತೆ ನೀಡಬೇಕು. ನಾವು ಪಾರದರ್ಶಕವಾಗಿ ಕೆಲಸ ಮಾಡಿದೇ ಆದಲ್ಲಿ, ಎಂಥಹ ಸನ್ನಿವೇಶ ಎದುರಿಸಲು ಶಕ್ತರಾಗುತ್ತೇವೆ ಎಂದು ಕಿವಿಮಾತು ಹೇಳಿದರು.

ಎಲ್ಲಾ ಜನಪ್ರತಿನಿಧಿಗಳು ಜಿಲ್ಲೆಯ ಅಭಿವೃದ್ಧಿ ಯೋಜನೆ ಕಾರ್ಯಗಳಿಗೆ ಪ್ರೋತ್ಸಾಹ ಹಾಗೂ ಬೆಂಬಲ ನೀಡಿದ್ದಾರೆ. ಅದರಂತೆ ಇಲ್ಲಿನ ಸಂಘ-ಸಂಸ್ಥೆಗಳೂ ಸಂಪೂರ್ಣ ಸಹಕಾರ ನೀಡಿದ್ದಾರೆ. ಜಿಲ್ಲೆ ಶೈಕ್ಷಣಿಕವಾಗಿ ಮತ್ತಷ್ಟು ಉತ್ತುಂಗಕ್ಕೇರಬೇಕು. ಸರ್ವತೋಮುಖ ಅಭಿವೃದ್ಧಿ ಸಾಧಿಸಬೇಕು ಎಂಬುದೇ ನನ್ನ ಆಶಯ ಎಂದು ತಿಳಿಸಿದರು.

ಕಾವೇರಿ ದಕ್ಷ, ಪ್ರಾಮಾಣಿಕ ಅಧಿಕಾರಿ: ಶಾಸಕ ಎನ್‌.ಮಹೇಶ್‌ ಮಾತನಾಡಿ, ಬಿ.ಬಿ.ಕಾವೇರಿ ಒಬ್ಬ ದಕ್ಷ, ಪ್ರಾಮಾಣಿಕ ಅಧಿಕಾರಿ. ನೆರೆ ಪ್ರವಾಹ ಹಾಗೂ ಸುಳ್ವಾಡಿ ವಿಷಪ್ರಸಾದ ಪ್ರಕರಣ ವೇಳೆ ಅವರು ತೋರಿದ ಕಾರ್ಯಕ್ಷಮತೆ ನಿಜಕ್ಕೂ ಮಾದರಿ. ನೆರೆ ಪ್ರವಾಹ ಸಮಯದಲ್ಲಿಯಾರೂ ಬೆರಳು ತೋರಿಸದ ರೀತಿಯಲ್ಲಿ ಕಾರ್ಯ ಮಾಡಿದ್ದರು. ಅಂತೆಯೇ ಸುಳ್ವಾಡಿ ಪ್ರಕರಣದಲ್ಲಿ ಮಾನವೀಯ ನೆಲೆಯಲ್ಲಿ ಕೆಲಸ ಮಾಡಿ ಕೊಡುವಲ್ಲಿ ಹಗಲಿರುಳೆನ್ನದೇ ಶ್ರಮಿಸಿದ್ದರು ಎಂದು ಪ್ರಶಂಸಿದರು.

ಜನಪರ ಕೆಲಸದಿಂದ ಜನಪ್ರಿಯ: ನೂತನ ಜಿಲ್ಲಾಧಿಕಾರಿ ಡಾ.ಎಂ.ಆರ್‌. ರವಿ ಮಾತನಾಡಿ, ಜನಪರ ಕೆಲಸ ಮಾಡಿದವರು ಜನಪ್ರಿಯರಾಗುತ್ತಾರೆ ಎನ್ನುವುದಕ್ಕೆ ಬಿ.ಬಿ.ಕಾವೇರಿ ಅವರು ಪ್ರಾಶಸ್ತ ನಿದರ್ಶನ. ತುಂಬಿದ ಕೊಡ ತುಳುಕುವುದಿಲ್ಲ ಎನ್ನುವಂತೆ ಅವರು ತಮ್ಮ ಕೆಲಸಗಳ ಮೂಲಕವೇ ಜನರನ್ನು ತಲುಪಿದ್ದಾರೆ. ಪ್ರತಿಯೊಬ್ಬರ ನೋವಿಗೆ ಸ್ಪಂದಿಸುವ ಗುಣ ಈ ಮಣ್ಣಿನಲ್ಲಿದೆ. ಒಬ ಅಧಿಕಾರಿ ಉತ್ತಮ ಕೆಲಸ ಮಾಡಿದರೆ, ಎಷ್ಟರ ಮಟ್ಟಿಗೆ ಜನಪ್ರೀತಿ ಗಳಿಸಬಹುದು ಎಂಬುದಕ್ಕೆ ಈ ಸಮಾರಂಭವೇ ಸಾಕ್ಷಿ. ನನಗೂ ಈ ಜಿಲ್ಲೆಗೂ ಅವಿನಾಭಾವ ಸಂಬಂಧವಿದೆ. ಅದೇರೀತಿ ಸಾಕಷ್ಟು ಕನಸುಗಳ ಜತೆ ನಾನು ಇಲ್ಲಿಗೆ ಬಂದಿದ್ದೇನೆ. ಅದಕ್ಕೆ ರೆಕ್ಕೆ ಮೂಡಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದರು.

ತಮ್ಮ ವಿಚಾರ, ನಿಲುವುಗಳಲ್ಲಿ ಸ್ಪಷ್ಟತೆ: ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌. ಆನಂದ್‌ ಮಾತನಾಡಿ, ಬಿ.ಬಿ.ಕಾವೇರಿ ಅವರು ತಮ್ಮ ವಿಚಾರ ಹಾಗೂ ನಿಲುವುಗಳಲ್ಲಿ ಸದಾ ಸ್ಪಷ್ಟತೆಯನ್ನು ಹೊಂದಿದ್ದರು. ಎಂಥಹದೇ ವಿಷಯ ಹಾಗೂ ಸನ್ನಿವೇಶಗಳನ್ನು ತಾಳ್ಮೆಯಿಂದ ಪರಾಮರ್ಶಿಸುವ ಗುಣ ಅವರಲ್ಲಿತ್ತು. ಸಾಮಾನ್ಯರ ಜನರ ಸಬಲೀಕರಣವೇ ಅವರ ಧ್ಯೇಯವಾಗಿತ್ತು. ಅದರಂತೆ ಅವರು ಕಾರ್ಯನಿರ್ವಹಿಸಿದರು ಎಂದರು.

ಈ ವೇಳೆ ವಿವಿಧ ಇಲಾಖೆಗಳು ಹಾಗೂ ಸಂಘ- ಸಂಸ್ಥೆಗಳ ವತಿಯಿಂದ ಬಿ.ಬಿ.ಕಾವೇರಿ ಅವರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು. ನೂತನ ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಅವರಿಗೂ ಹೂ ಗುತ್ಛ ನೀಡಿ ಸ್ವಾಗತ ಕೋರಲಾಯಿತು. ಕಾರ್ಯಕ್ರಮದಲ್ಲಿ ಜಿಪಂ ಅಧ್ಯಕ್ಷೆ ಶಿವಮ್ಮ, ಜಿಪಂ ಸಿಇಒ ಬಿ.ಎಚ್‌. ನಾರಾಯಣರಾವ್‌, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌, ಕೊಳ್ಳೇಗಾಲ ಉಪವಿಭಾಗಾಧಿಕಾರಿ ನಿಖೀತಾ. ಎಂ. ಚಿನ್ನಸ್ವಾಮಿ ಉಪಸ್ಥಿತರಿದ್ದರು.

ಬಿ.ಬಿ.ಕಾವೇರಿ ಅವರು ದಕ್ಷ ನಾಯಕತ್ವಕ್ಕೆ ಉತ್ತಮ ಉದಾಹರಣೆ. ಎಲ್ಲಾ ಸನ್ನಿವೇಶಗಳನ್ನು ಪೂರ್ವಾಗ್ರಹ ರಹಿತವಾಗಿ ವಿಶ್ಲೇಷಿಸಿ, ಅಗತ್ಯಕ್ರಮ ಕೈಗೊಳ್ಳುವ ಗುಣ ಅವರಲ್ಲಿ ಕಂಡಿದ್ದೇನೆ. ಯುವ ಅಧಿಕಾರಿಗಳಿಗೆ ಕಲಿಯುವ ಅವಕಾಶ ನೀಡಿ, ಮಾರ್ಗದರ್ಶನ ನೀಡುವಅವರ ನಡೆ ನಿಜಕ್ಕೂ ಅನುಕರಣೀಯ.
– ಬಿ.ಎಚ್‌. ನಾರಾಯಣರಾವ್‌, ಜಿಪಂ ಸಿಇಒ

ಪ್ರತಿಯೊಬ್ಬ ಮಹಿಳೆಗೂ ಬಿ. ಬಿ. ಕಾವೇರಿ ಮೇಡಂ ಪ್ರೇರಣಾದಾಯರಾಗಿದ್ದಾರೆ. ಉತ್ತಮ ಮಾರ್ಗದರ್ಶನ ಮೂಲಕ ನಮ್ಮಂಥ ಹೊಸಬರಿಗೆ ಸದಾ ಬೆನ್ನೆಲುಬಾಗಿ ನಿಂತಿದ್ದಾರೆ. ಅವರಿಂದ ಕಲಿಯಬೇಕಿರುವುದು ಬಹಳವಿದೆ. ಅವರ ಆಡಳಿತ ರೀತಿ ಎಲ್ಲರಿಗೂ ದಾರಿದೀಪ.
-ನಿಖೀತಾ. ಎಂ. ಚಿನ್ನಸ್ವಾಮಿ, ಉಪವಿಭಾಗಾಧಿಕಾರಿ, ಕೊಳ್ಳೇಗಾಲ

ಪ್ರತಿಯೊಬ್ಬರನ್ನೂ ಒಂದೇ ರೀತಿ ಕಾಣುತ್ತಿದ್ದರು. ಚುನಾವಣೆ ಸಂದರ್ಭಗಳಲ್ಲಿ ಯಾವುದೇ ಲೋಪದೋಷಗಳಾಗದ ರೀತಿಯಲ್ಲಿ, ಅಧಿಕಾರಿಗಳಿಂದ ಕೆಲಸ ಮಾಡಿಸುತ್ತಿದ್ದರು. ಎಲ್ಲಾ ಕೆಲಸಗಳಲ್ಲೂ ಸಂಪೂರ್ಣತೆ ಸಾಧಿಸುವುದು ಅವರ ನಿಲುವಾಗಿತ್ತು.
-ವೃಷಬೇಂದ್ರಕುಮಾರ್‌, ಉಪನಿರ್ದೇಶಕರು, ರೇಷ್ಮೆ ಇಲಾಖೆ

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.