ರಾಜ್ಯಕ್ಕೆ 5,000 ಕೋಟಿ ಖೋತಾ?


Team Udayavani, Feb 1, 2020, 3:09 AM IST

rajyakke

ಬೆಂಗಳೂರು: ಕೇಂದ್ರ ಸರ್ಕಾರದ ತೆರಿಗೆ ಬಾಬ್ತಿನಲ್ಲಿ ರಾಜ್ಯ ಸರ್ಕಾರಗಳಿಗೆ 14ನೇ ಹಣಕಾಸು ಆಯೋಗದ ಶಿಫಾರಸಿನಡಿ ನಿಗದಿಪಡಿಸಲಾದ ಶೇ.42ರಷ್ಟು ಪಾಲಿನ ಪ್ರಮಾಣ, 2021-2025ರ ಅವಧಿಗೆ ಕಡಿಮೆಯಾಗುವ ಸಾಧ್ಯತೆ ಇದೆ. ಹದಿನಾಲ್ಕನೇ ಹಣಕಾಸು ಆಯೋಗದ ಶಿಫಾರಸಿನಡಿ ಪ್ರಸಕ್ತ ವರ್ಷದಲ್ಲಿ ರಾಜ್ಯ ನಿರೀಕ್ಷಿಸಿದ ಅನುದಾನದಲ್ಲಿ 5,000 ಕೋಟಿ ರೂ.ಖೋತಾ ಆಗುವ ಅಂದಾಜು ಇರುವುದು ಇದಕ್ಕೆ ಪುಷ್ಠಿ ನೀಡುವಂತಿದೆ. ಒಂದೊಮ್ಮೆ ರಾಜ್ಯಗಳಿಗೆ ನೀಡುವ ಪಾಲಿನ ಮೊತ್ತ ಶೇ.40ಕ್ಕಿಂತ ಕಡಿಮೆಯಾದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಹಣಕಾಸಿನ ವಿಚಾರದಲ್ಲಿ ಸಂಘರ್ಷ ಶುರುವಾಗುವ ಆತಂಕ ಮೂಡಿದೆ.

ಈಗಾಗಲೇ 14ನೇ ಹಣಕಾಸು ಆಯೋಗದ ಶಿಫಾರಸಿನಡಿ ಕಳೆದ ನಾಲ್ಕು ವರ್ಷಗಳಲ್ಲಿ ಸುಮಾರು 26,000 ಕೋಟಿ ರೂ.ಅನುದಾನ ಖೋತಾ ಆಗಿದೆ. ಪ್ರಸಕ್ತ 2019-20ನೇ ಸಾಲಿನಲ್ಲಿ ರಾಜ್ಯ ಸರ್ಕಾರಕ್ಕೆ 39,806 ಕೋಟಿ ರೂ.ಬರಬೇಕಿದ್ದು, ಇದರಲ್ಲಿ ಕನಿಷ್ಠ 5,000 ಕೋಟಿ ರೂ.ನಿಂದ 10,000 ಕೋಟಿ ರೂ.ಖೋತಾ ಆಗುವ ಲಕ್ಷಣ ಕಾಣುತ್ತಿದೆ. ಮುಂದೆ ರಾಜ್ಯಗಳಿಗೆ ಹಂಚಿಕೆಯಾಗುವ ಪಾಲಿನ ಪ್ರಮಾಣವೂ ಇಳಿಕೆಯಾದರೆ ರಾಜ್ಯ ಸರ್ಕಾರಕ್ಕೆ ಇನ್ನಷ್ಟು ಅನುದಾನ ಖೋತಾ ಆಗಿ, ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ಭೀತಿ ಶುರುವಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಾನಾ ತೆರಿಗೆ ಮೂಲದಡಿ ಸಂಗ್ರಹಿಸುವ ಮೊತ್ತದಲ್ಲಿ ನಿಗದಿತ ಪ್ರಮಾಣದ ಪಾಲು ರಾಜ್ಯ ಸರ್ಕಾರಗಳಿಗೆ ಸಿಗಲಿದೆ. ರಾಜ್ಯದಿಂದ ಸಂಗ್ರಹವಾಗುವ ಆದಾಯ ತೆರಿಗೆ, ಭೌಗೋಳಿಕ ಸ್ವರೂಪ, ಭೂಪ್ರದೇಶ, ಅರಣ್ಯ ಪ್ರಮಾಣ ಇತರ ಅಂಶಗಳನ್ನು ಆಧರಿಸಿ ರಾಜ್ಯವಾರು ಪಾಲಿನ ಮೊತ್ತ ನಿಗದಿಪಡಿಸಲಾಗುತ್ತದೆ. ಅದರಂತೆ 14ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ.42ರಷ್ಟು ಪಾಲು ನಿಗದಿಯಾಗಿದ್ದು, ಆಯಾ ರಾಜ್ಯ ಗಳ ಸ್ವರೂಪಕ್ಕೆ ತಕ್ಕಂತೆ ನಿರ್ದಿಷ್ಟ ಪ್ರಮಾಣದ ತೆರಿಗೆ ಪಾಲು ಹಂಚಿಕೆಯಾಗುತ್ತಿದೆ.

ತೆರಿಗೆ ಆದಾಯ ಖೋತಾ: ಕೇಂದ್ರ ಸರ್ಕಾರ ಪ್ರಸ್ತುತ ಹಣಕಾಸು ವರ್ಷದಲ್ಲಿ ನಿರೀಕ್ಷಿಸಿದಷ್ಟು ತೆರಿಗೆ ಆದಾಯ ಸಂಗ್ರಹಿಸುವಲ್ಲಿ ಹಿನ್ನಡೆ ಅನುಭವಿಸುವ ಲಕ್ಷಣ ಕಾಣುತ್ತಿದೆ. ಆರ್ಥಿಕ ಹಿಂಜರಿಕೆ ಸ್ಥಿತಿ, ಜಿಎಸ್‌ಟಿ ಮೂ ಲದ ತೆರಿಗೆ ಪ್ರಮಾಣದಲ್ಲಿ ಇಳಿಕೆ, ಗ್ರಾಹಕರ ಖರೀದಿ ಸಾಮರ್ಥಯದಲ್ಲಿ ಇಳಿಕೆ ಸೇರಿದಂತೆ ಇನ್ನಿತರ ಅಂಶಗಳ ಹಿನ್ನೆಲೆಯಲ್ಲಿ ಅಂದಾಜಿಸಿದಷ್ಟು ತೆರಿಗೆ ಸಂಗ್ರಹದ ಗುರಿ ತಲುಪಲು ಸಾಧ್ಯವಾದಂತಿಲ್ಲ. ಪ್ರಸಕ್ತ ವರ್ಷದಲ್ಲಿ ಕೇಂದ್ರ ಸರ್ಕಾರ 17 ಲಕ್ಷ ಕೋಟಿ ರೂ. ತೆರಿಗೆ ಆದಾಯ ಸಂಗ್ರಹಿಸುವ ಅಂದಾಜು ಇದ್ದು, ಇದರಲ್ಲಿ 2.75 ಲಕ್ಷ ಕೋಟಿ ರೂ.ನಷ್ಟು ಖೋತಾ ಆಗುವ ಅಂದಾಜು ಇದೆ. ಈ ಹಿನ್ನೆಲೆಯಲ್ಲಿ ಮುಂದಿನ ಐದು ವರ್ಷಗಳಲ್ಲಿ ರಾಜ್ಯಗಳಿಗೆ ನೀಡುವ ತೆರಿಗೆ ಪಾಲಿನ ಮೊತ್ತವೂ ಕಡಿಮೆ ಯಾಗುವ ಸಂಭವವಿದೆ ಎಂದು ಮೂಲಗಳು ಹೇಳಿವೆ.

ರಾಜ್ಯಗಳ ಪಾಲು ಇಳಿಕೆ ಸಾಧ್ಯತೆ: 14ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕೇಂದ್ರ ತೆರಿಗೆ ಆದಾಯ ದಲ್ಲಿ ಶೇ.42ರಷ್ಟು ಪಾಲನ್ನು ರಾಜ್ಯಗಳಿಗೆ ನಿಗದಿಪಡಿಸ ಲಾಗಿತ್ತು. ಆದರೆ, ನಿರೀಕ್ಷಿತ ಪ್ರಮಾಣದಲ್ಲಿ ತೆರಿಗೆ ಆದಾಯ ಸಂಗ್ರಹವಾಗದ ಕಾರಣ 2021-25ರ ಐದು ವರ್ಷದ ಅವಧಿಗೆ ಇಷ್ಟೇ ಮೊತ್ತದ ಪಾಲು ನಿಗದಿ ಯಾಗುವ ನಿರೀಕ್ಷೆ ಇಲ್ಲ. ಶೇ.40ರಷ್ಟು ಪಾಲು ನಿಗದಿ ಯಾದರೂ ರಾಜ್ಯಗಳು ತಕ್ಕ ಮಟ್ಟಿಗೆ ಆರ್ಥಿಕತೆಯನ್ನು ನಿಭಾಯಿಸಿಕೊಳ್ಳಬಹುದು. ಆದರೆ, ಅದಕ್ಕಿಂತಲೂ ಇಳಿಕೆಯಾದರೆ ರಾಜ್ಯ ಸರ್ಕಾರಗಳಿಗೆ ಆರ್ಥಿಕ ನಷ್ಟ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು 14ನೇ ಹಣಕಾಸು ಆಯೋಗದ ಸದಸ್ಯರೊಬ್ಬರು “ಉದಯವಾಣಿ’ಗೆ ತಿಳಿಸಿದರು.

ಆರ್ಥಿಕ ಸಂಬಂಧಿ ಸಂಘರ್ಷ ಸಾಧ್ಯತೆ: 15ನೇ ಹಣಕಾಸು ಆಯೋಗ ಶಿಫಾರಸು ಮಾಡುವ ರಾಜ್ಯಗಳ ಪಾಲಿನ ಮೊತ್ತ ಶೇ.40ಕ್ಕಿಂತ ಕಡಿಮೆಯಾದರೆ ರಾಜ್ಯಗಳು ಕೇಂದ್ರ ಸರ್ಕಾರದ ವಿರುದ್ಧ ಆರ್ಥಿಕ ಸಂಬಂಧಿ ವಿಚಾರಗಳಲ್ಲಿ ಸಂಘರ್ಷಕ್ಕಿಳಿಯುವ ಸಾಧ್ಯತೆ ಇದೆ. ಏಕೆಂದರೆ, ಜಿಎಸ್‌ಟಿ ಜಾರಿ ಬಳಿಕ ನಾಲ್ಕು ಹಂತದ ತೆರಿಗೆ ಯಷ್ಟೇ ಸಂಗ್ರಹವಾಗಲಿದ್ದು, ಅದರಲ್ಲೇ ಹಂಚಿಕೆ ಮಾಡಿಕೊಳ್ಳಬೇಕಿದೆ. ಅಲ್ಲದೇ ರಾಜ್ಯ ಸರ್ಕಾರಗಳಿಗೆ ಯಾವುದೇ ರೀತಿಯಲ್ಲಿ ಸೇವಾ ಶುಲ್ಕ ವಿಧಿಸಲು ಅವಕಾಶವಿಲ್ಲ. ಹೀಗಾಗಿ, ಕೇಂದ್ರ ಸರ್ಕಾರ ತೆರಿಗೆ ಆದಾಯದಲ್ಲಿ ಹೆಚ್ಚಿನ ಪಾಲನ್ನು ರಾಜ್ಯಗಳಿಗೆ ನೀಡಬೇಕು ಎಂಬ ಆಗ್ರಹವಿದೆ. ಇಂತಹ ಹೊತ್ತಿನಲ್ಲಿ 15ನೇ ಹಣಕಾಸು ಆಯೋಗದ ಶಿಫಾರಸಿನಡಿ ರಾಜ್ಯಗಳ ಪಾಲನ್ನು ಕಡಿಮೆಗೊಳಿಸಿದರೆ ರಾಜ್ಯಗಳು ಕೇಂದ್ರ ಸರ್ಕಾರದ ಧೋರಣೆಗೆ ವಿರೋಧ ವ್ಯಕ್ತಪಡಿಸುವ ಸಂಭವವಿದೆ ಎಂಬುದು ಅಧಿಕಾರಿಯ ಅನಿಸಿಕೆ.

ಒಂದು ವರ್ಷ ಯಥಾಸ್ಥಿತಿ?: ರಾಜ್ಯ ಸರ್ಕಾರಗಳ ಪ್ರತಿರೋಧಕ್ಕೆ ಗುರಿಯಾಗದಂತೆ 2020-21ನೇ ಸಾಲಿನ ಒಂದು ವರ್ಷದ ಅವಧಿಗೆ ಶೇ.42ರಷ್ಟು ಪಾಲಿನ ಮೊತ್ತ ವನ್ನೇ ಕಾಯ್ದಿರಿಸುವುದು. ಬಳಿಕ, 2021-25ರ ಅವಧಿಗೆ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ರಾಜ್ಯಗಳು ಪಡೆಯುವ ಪಾಲಿನ ಮೊತ್ತ ಇಳಿಕೆ ಮಾಡಿದರೂ ಹೆಚ್ಚಿನ ಪ್ರತಿರೋಧ ತಲೆದೋರದಂತೆ ತಡೆಯಲು ಅವಕಾಶ ವಿದೆ. 2021-25ರ ಅವಧಿಗೆ ಸಂಬಂಧಪಟ್ಟಂತೆ ಮುಂದಿ ನ ಅಕ್ಟೋಬರ್‌ ಹೊತ್ತಿಗೆ ಅಂತಿಮ ಶಿಫಾರಸು ಸಲ್ಲಿಸಲು ಕಾಲಾವಕಾಶವಿರುವುದರಿಂದ ಸದ್ಯಕ್ಕೆ ಪ್ರತಿರೋಧಕ್ಕೆ ಗುರಿಯಾಗುವುದರಿಂದ ತಪ್ಪಿಸಿಕೊಳ್ಳಲು ಅವಕಾಶವಿದೆ ಎಂಬುದರ ಕುರಿತೂ 15ನೇ ಹಣಕಾಸು ಆಯೋಗದ ಸಭೆಯಲ್ಲಿ ಚರ್ಚೆಯಾಗಿದೆ ಎನ್ನಲಾಗಿದೆ.

ಸಂಸತ್‌ನ ಉಭಯ ಸದನಗಳಲ್ಲಿ ಶನಿವಾರ ಕೇಂದ್ರ ಬಜೆಟ್‌ ಮಂಡನೆಯಾಗಲಿದ್ದು, ಈ ಸಂದರ್ಭದಲ್ಲೇ 15ನೇ ಹಣಕಾಸು ಆಯೋಗದ ಶಿಫಾರಸು ಕೂಡ ಮಂಡನೆಯಾಗಲಿದೆ. ನೆರೆ ಪರಿಹಾರ ಕಾರ್ಯ, ರೈತರ ಸಾಲಮನ್ನಾ, ತೆರಿಗೆ ಆದಾಯ ಇಳಿಕೆಯಂತಹ ಕಾರಣ ಗಳಿಗೆ ರಾಜ್ಯ ಆರ್ಥಿಕತೆಯಲ್ಲಿ ವ್ಯತ್ಯಯ ಉಂಟಾಗಿದ್ದರೂ ಆರ್ಥಿಕ ವರ್ಷ ಅಂತ್ಯವಾಗುವುದರೊಳಗೆ ನಿಗದಿತ ಗುರಿ ತಲುಪುವ ವಿಶ್ವಾಸವಿದೆ. ಆದರೆ, 15ನೇ ಹಣಕಾಸು ಆಯೋಗದ ಶಿಫಾರಸಿನಡಿ ರಾಜ್ಯಗಳ ಅನುದಾನ ಪ್ರಮಾಣ ಇಳಿಕೆಯಾದರೆ ಆರ್ಥಿಕ ಸ್ಥಿತಿ ಏರುಪೇರಾಗುವ ಭೀತಿ ಮೂಡಿದೆ.

1.20 ಲಕ್ಷ ಕೋಟಿ ಬಿಡುಗಡೆ: 14ನೇ ಹಣಕಾಸು ಆಯೋಗದ ಶಿಫಾರಸಿನಡಿ ರಾಜ್ಯಕ್ಕೆ 2015ರಿಂದ 2020ರ ಅವಧಿಗೆ ಒಟ್ಟು 1.86 ಲಕ್ಷ ಕೋಟಿ ರೂ.ಬಿಡುಗಡೆಯಾಗುವ ನಿರೀಕ್ಷೆ ಇತ್ತು. ಕಳೆದ ನಾಲ್ಕು ವರ್ಷಗಳಲ್ಲಿ 1.20 ಲಕ್ಷ ಕೋಟಿ ರೂ. ಬಿಡುಗಡೆಯಾಗಿದ್ದು, ಈಗಾಗಲೇ 26,000 ಕೋಟಿ ರೂ.ಖೋತಾ ಆಗಿದೆ. 2019-20ನೇ ಸಾಲಿನಲ್ಲಿ 39,806 ಕೋಟಿ ರೂ.ಬರಬೇಕಿದ್ದು, ಇದರಲ್ಲಿ ಕನಿಷ್ಠ 5,000 ಕೋಟಿ ರೂ.ಖೋತಾ ಆಗುವ ಅಂದಾಜಿದೆ. ಹಾಗಾಗಿ, ಪ್ರಸಕ್ತ ಆಯವ್ಯಯದಲ್ಲಿ ಹಂಚಿಕೆ ಮಾಡಿದಷ್ಟು ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಿಡುಗಡೆ ಮಾಡುವಲ್ಲಿ ವ್ಯತ್ಯಯವಾದರೆ ಆಶ್ಚರ್ಯವಿಲ್ಲ ಎಂದು ಆರ್ಥಿಕ ಇಲಾಖೆಯ ಮೂಲಗಳು ಹೇಳಿವೆ.

ಐದು ವರ್ಷಗಳಲ್ಲಿ ರಾಜ್ಯಕ್ಕೆ ಬಿಡುಗಡೆಯಾದ ಎಸ್‌ಎಫ್ಸಿ ಅನುದಾನದ ವಿವರ
ಹಣಕಾಸು ವರ್ಷ ಬಿಡುಗಡೆಯಾದ ಅನುದಾನ (ಕೋಟಿ ರೂ.ಗಳಲ್ಲಿ)
2015- 16 23,983
2016- 17 28,760
2017- 18 31,908
2018- 19 36,215
2019- 20 39,806

* ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.