ಪ್ರಾಣಿಜನ್ಯ ರೋಗಗಳೇಕೆ ಮನುಷ್ಯರನ್ನು ಕಾಡುತ್ತಿವೆ?


Team Udayavani, Feb 1, 2020, 6:44 AM IST

kat-9

ಚೀನದಲ್ಲಿ ಮರಣ ಮೃದಂಗ ಮುಂದುವರಿಸಿರುವ ಕೊರೊನಾ ವೈರಸ್‌ ದಾಳಿಯಿಂದ ಜನರು ಬೆಚ್ಚಿದ್ದಿದ್ದಾರೆ. ಏಕೆ ಮಾನವರು ಪ್ರಾಣಿಜನ್ಯ ರೋಗಗಳ ಮೂಲಕ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ, ಈ ಹಿಂದೆ ಯಾವೆಲ್ಲ ಪ್ರಾಣಿಜನ್ಯ ರೋಗಗಳು ಹರಡಿದ್ದವು ಎಂಬ ಮಾಹಿತಿ ಇಲ್ಲಿದೆ.

ಕಾಲಘಟ್ಟಕ್ಕೆ ತಕ್ಕಂತೆ ಆಗುತ್ತಿರುವ ಬದಲಾವಣೆಗಳು ಪರಿಸ ರದ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುತ್ತಿವೆ. ಹೆಚ್ಚಿದ ನಗರ ಜೀವನದ ಗೀಳು ಜನರನ್ನು ಅನಾರೋಗ್ಯಕ್ಕೀಡು ಮಾಡುತ್ತಿದ್ದು, ಜನಸಾಂದ್ರತೆ ಹೆಚ್ಚಾದಾಗ ಇಂತಹ ಸಾಂಕ್ರಾಮಿಕ ರೋಗಗಳು ವೇಗವಾಗಿ ಹರಡುತ್ತವೆ ಎಂದು ತಜ್ಞರು ಹೇಳಿದ್ದಾರೆ.

= ಹೆಚ್ಚಿನ ಪ್ರಾಣಿಗಳಲ್ಲಿ ರೋಗ ಕಾರಕವಾದ ಬ್ಯಾಕ್ಟೀರಿಯ ಮತ್ತು ವೈರಸ್‌ಗಳು ಇರುತ್ತವೆ. ಈ ವೈರಸ್‌ಗಳು ಬದುಕುಳಿಯುವ ಸಲುವಾಗಿ ಹೊಸ ದೇಹಗಳನ್ನು ಹುಡುಕುತ್ತಿರುತ್ತವೆ. ದೇಹದಲ್ಲಿರುವ ರೋಗ ನಿರೋಧಕ ವ್ಯವಸ್ಥೆ ಹೊಸದಾಗಿ ಬಂದ ವೈರಸ್‌ನ್ನು ವಿರೋಧಿಸುತ್ತದೆ. ಈ ಎರಡು ವ್ಯವಸ್ಥೆಗಳ ನಡುವೆ ಬದುಕುಳಿಯಲು ದೊಡ್ಡ ಹೋರಾಟವೇ ನಡೆಯುತ್ತದೆ. ಅಂತಿಮವಾಗಿ ವೈರಸ್‌ ಗೆದ್ದರೆ ಅಂಥ ದೇಹ ರೋಗಗ್ರಸ್ತವಾಗುತ್ತದೆ.

= ಇಂತಹ ರೋಗಗಳು ಕಾಣಿಸಿಕೊಂಡಾಗ ಮೊದಲು ಬಲಿಯಾಗುವವರು ಬಡ ನಗರವಾಸಿಗಳು, ಸ್ವತ್ಛತೆ ಮತ್ತು ನೈರ್ಮಲ್ಯ ಕೆಲಸದಲ್ಲಿ ನಿರತರಾದವರು.

= 1980ರ ದಶಕದಲ್ಲಿ ಕಾಣಿಸಿಕೊಂಡ ಏಡ್ಸ್‌ ಸೋಂಕು ಹರಡುವುದಕ್ಕೆ ಮುಖ್ಯ ಕಾರಣ ಚಿಂಪಾಂಜಿಗಳು.ಹಲವಾರು ವರ್ಷಗಳಿಂದ ಕರ್ನಾಟಕದ ಮಲೆನಾಡಿನಲ್ಲಿ ಹಾವಳಿಯಿಡುತ್ತಿರುವ ಮಂಗನ ಕಾಯಿಲೆಯ ಮೂಲ ಮಂಗಗಳು.

= 2004 – 2007ರವರೆಗೆ ಕಾಣಿಸಿಕೊಂಡ ಏವಿ ಯನ್‌ ಫ‌ೂÉ (ಪಕ್ಷಿ ಜ್ವರ) ಸೋಂಕು ಹರಡಿದ್ದು ಪಕ್ಷಿಗಳಿಂದ.

= 2009ರಲ್ಲಿ ಸಾರ್ಸ್‌ ರೋಗ ಬಂದದ್ದು ಪುನುಗು ಬೆಕ್ಕು ಮತ್ತು ಬಾವಲಿಗಳಿಂದ. ಇಡೀ ವಿಶ್ವವನ್ನೇ ಕಾಡಿದ ಎಬೋಲ ಮತ್ತು ಕೇರಳದಲ್ಲಿ 2018ರಲ್ಲಿ ಹಾವಳಿಯಿಟ್ಟ ನಿಫಾ ವೈರಸ್‌ ಬಾವಲಿಯಿಂದ ಮಾನವರಿಗೆ ಹರಡಿತ್ತು.

ಹರಡುವುದು ಹೇಗೆ?
= ಪೌಷ್ಟಿಕಾಂಶಗಳ ಕೊರತೆ, ಅಶುದ್ಧ ಗಾಳಿ ಸೇವನೆ , ಕೊಳಚೆ ಪ್ರದೇಶಗಳಲ್ಲಿ ವಾಸವಾಗಿರುವುದು.
= ವೈದ್ಯಕೀಯ ಸೌಲಭ್ಯದ ಅಲಭ್ಯತೆ.
= ನಗರಗಳಲ್ಲಿನ ಅತಿಯಾದ ಜನಸಾಂದ್ರತೆ.
= ಮನುಷ್ಯನ ರೋಗ ನಿರೋಧಕ ಶಕ್ತಿ ದುರ್ಬಲಗೊಂಡಿರುವುದು.
= ಬದಲಾದ ಆಹಾರ ಪದ್ಧತಿ. ಕಾಡುಪ್ರಾಣಿಗಳ ಮಾಂಸ ಸೇವನೆ.

ನಾವು ಏನು ಮಾಡಬೇಕು?
= ಸಮಾಜಗಳು ಮತ್ತು ಸರಕಾರಗಳು ಪ್ರತಿ ಹೊಸ ಸಾಂಕ್ರಾಮಿಕ ರೋಗವನ್ನು ಪ್ರತ್ಯೇಕ ಬಿಕ್ಕಟ್ಟು ಎಂದು ಪರಿಗಣಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜಗತ್ತು ಬದಲಾಗುತ್ತಿದೆ, ಹವಾಮಾನ ಬದಲಾಗುತ್ತಿದೆ.. ಹೀಗಾಗಿ ಹೊಸ ಹೊಸ ರೋಗಗಳು ಹುಟ್ಟಿಕೊಳ್ಳುತ್ತವೆ ಎಂಬ ಸಾರ್ವತ್ರೀಕರಣ ಸಲ್ಲ.

= ಪರಿಸರಕ್ಕೆ ಹೆಚ್ಚು ಹಾನಿಯಾದಂತೆ ಜೈವಿಕ ವ್ಯವಸ್ಥೆ ಅಸ್ತವ್ಯಸ್ತವಾಗುತ್ತಾ ಹೋಗುತ್ತದೆ. ಇದು ಹೊಸ ರೋಗಗಳ ಹುಟ್ಟಿಗೆ ಅವಕಾಶ ಕೊಡುತ್ತದೆ.

= ಇಷ್ಟರ ತನಕ ಶೇ. 10ರಷ್ಟು ವೈರಸ್‌ ಮತ್ತು ಬ್ಯಾಕ್ಟೀರಿಯಾಗಳನ್ನು ಮಾತ್ರ ಗುರುತಿಸಲಾಗಿದೆ. ಉಳಿದ ವೈರಸ್‌ಗಳನ್ನು ಹಾಗೂ ಅವುಗಳ ಮೂಲವನ್ನು ಗುರುತಿಸಿ ದಾಖಲಿಸುವ ಕೆಲಸಕ್ಕೆ ಹೆಚ್ಚಿನ ಸಂಪನ್ಮೂಲಗಳನ್ನು ಒದಗಿಸುವತ್ತ ಗಮನ ಹರಿಸಬೇಕಾಗಿದೆ.

= ನಗರವಾಸಿಗಳಲ್ಲಿ ಪ್ರಾಣಿಗಳನ್ನು ಸಾಕುವ ಖಯಾಲಿ ಇರುತ್ತದೆ. ಕೆಲವು ಪ್ರಾಣಿಗಳು ರೋಗಗಳ ಮೂಲವಾಗಿರಬಹುದು. ಈ ಬಗ್ಗೆ ಸರಿಯಾದ ತಿಳಿವಳಿಕೆ ಹೊಂದಿರಬೇಕು.

= ನಗರಕ್ಕೆ ಹೊಸದಾಗಿ ತರುವ ಪ್ರಾಣಿಗಳ ಮೇಲೆ ನಿಗಾ ಇರಿಸುವುದು ಅಗತ್ಯ.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.