2020ರ ಕೇಂದ್ರ ಬಜೆಟ್ “ಈ ಮೂರು ಅಂಶಗಳ” ಮೇಲೆ ಸಿದ್ಧಪಡಿಸಲಾಗಿದೆ; ನಿರ್ಮಲಾ ಸೀತಾರಾಮನ್
ಕೇಂದ್ರ ಸರ್ಕಾರ 2020ರಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸಲು ಬದ್ಧವಾಗಿದೆ.
Team Udayavani, Feb 1, 2020, 12:51 PM IST
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಲೋಕಸಭೆಯಲ್ಲಿ 2020-21ನೇ ಸಾಲಿನ ಬಜೆಟ್ ಅನ್ನು ಮಂಡಿಸಿದ್ದು, ಈ ಬಾರಿಯ ಕೇಂದ್ರ ಬಜೆಟ್ ಮೂರು ಅಂಶಗಳ ಮೇಲೆ ನಿಂತಿದೆ ಎಂದು ವಿಶ್ಲೇಷಿಸಿದರು.
“ ಪ್ರಸಕ್ತ ಸಾಲಿನ ನನ್ನ ಬಜೆಟ್ ಮೂರು ಅಂಶಗಳ ಮೇಲೆ ನಿಂತಿದೆ. ಆಕಾಂಕ್ಷೆಯ ಭಾರತ ಅಂದರೆ ಗುಣಮಟ್ಟದ ಬದುಕಿಗೆ ಆದ್ಯತೆ, ಪ್ರತಿಯೊಬ್ಬರ ಆರ್ಥಿಕ ಅಭಿವೃದ್ದಿ. ಸಮಾಜದ ಮಾನವೀಯತೆ ಮತ್ತು ಸಹಾನುಭೂತಿಯ ಏಳಿಗೆಗೆ ಒತ್ತು ಕೊಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ಆಕಾಂಕ್ಷೆಯ ಭಾರತ ಮೊದಲ ಅಂಶದಲ್ಲಿ ಕೌಶಲ್ಯ, ಶಿಕ್ಷಣ ಮತ್ತು ಕೃಷಿ ಕ್ಷೇತ್ರಕ್ಕೆ ಆದ್ಯತೆ ನೀಡಲಾಗಿದೆ ಎಂದರು. ಕೇಂದ್ರ ಸರ್ಕಾರ 2020ರಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸಲು ಬದ್ಧವಾಗಿದೆ. ಅಲ್ಲದೇ ರೈತರ ಬರಡು ಭೂಮಿಯಲ್ಲಿ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆಗೆ ಉತ್ತೇಜನ ನೀಡಲಾಗುವುದು ಎಂದರು.
ಎರಡನೇ ಅಂಶ ಆರ್ಥಿಕ ಬೆಳವಣಿಗೆ ಮತ್ತು ಮೂರನೇ ಬೆಳವಣಿಗೆ ಸಾಮಾಜಿಕ ಕಾಳಜಿ ಆಧಾರದ ಮೇಲೆ ಈ ಬಾರಿಯ ಬಜೆಟ್ ಸಿದ್ಧ ಪಡಿಸಲಾಗಿದೆ ಎಂದು ಸೀತಾರಾಮನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!
Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ
Budget 2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು
Expert’s Opinion: ಗ್ಯಾರಂಟಿ ಭಾರ ಇಲ್ಲದಿದ್ದರೆ ಇನ್ನೂ ಉತ್ತಮ ಆಗಿರುತ್ತಿತ್ತು
Start-up Sector; ನವ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್ ಅಪ್
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ