ಸಾಮಾಜಿಕ ವಲಯಕ್ಕೆ ಸುಧಾರಣಾ ಕ್ರಮಗಳು


Team Udayavani, Feb 2, 2020, 4:05 AM IST

samajika

ಕೇಂದ್ರ ಬಜೆಟ್‌ನಲ್ಲಿ ಸಾಮಾಜಿಕ ವಲಯಕ್ಕೆ ನೀಡುವ ಆದ್ಯತೆಯು ಬಜೆಟ್‌ನ ಸಮಗ್ರತೆಗೆ ಸಾಕ್ಷಿಯಾಗಿದೆ. ಸಾಮಾಜಿಕ ವಲಯದ ಬೆಳವಣಿಗೆಯ ಜಿಡಿಪಿ ವೃದ್ಧಿಗೂ ಕಾರಣವಾಗಲಿದೆ. ಉದ್ಯೋಗ ಸೃಷ್ಟಿ, ಹೊಸ ಎಂಜಿನಿಯರುಗಳು, ಮಾರ್ಕೆಟಿಂಗ್‌ ಹೆಡ್‌ಗಳ ಸೃಷ್ಟಿ ಸೇರಿದಂತೆ ಕೌಶಲ್ಯಸಹಿತ ಸಂಪನ್ಮೂಲದ ಪ್ರಮಾಣ ಹೆಚ್ಚಾಗಲಿದೆ. ಇದು ಭವಿಷ್ಯದ ದೃಷ್ಟಿಯಿಂದ ಒಳ್ಳೆಯದು ಹಾಗೂ ಅಗತ್ಯವೂ ಹೌದು.

ಕೇಂದ್ರ ಬಜೆಟ್‌ನಲ್ಲಿ ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಅಪೌಷ್ಟಿಕತೆ ನಿವಾರಣೆ, ಎಸ್‌ಸಿ-ಎಸ್‌ಟಿ, ಆದಿವಾಸಿಗಳ ಕಲ್ಯಾಣ, ಸೇರಿದಂತೆ ಸಾಮಾಜಿಕ ವಲಯದ ಸುಧಾರಣಾ ಕ್ರಮಗಳು ಮುಂದಿನ ಎರಡು ವರ್ಷಗಳಲ್ಲಿ ಫ‌ಲಿತಾಂಶ ನೀಡಲಿವೆ. ಈಗಿನ ಸಂದಿಗ್ಧ ಸ್ಥಿತಿಯಲ್ಲಿ ಬಜೆಟ್‌ನಲ್ಲಿ ಕೈಗೊಂಡಿರುವ ಈ ವಲಯದ ಸುಧಾರಣಾ ಕ್ರಮಗಳು ಸ್ವಲ್ಪ ಮಟ್ಟಿಗೆ ಆಶಾದಾಯಕ ಎಂದೇ ಹೇಳಬಹುದು.

ಶಿಕ್ಷಣಕ್ಕೆ 99,300 ಕೋಟಿ ರೂ., ಆರೋಗ್ಯಕ್ಕೆ 69,000 ಕೋಟಿ ರೂ., ಎಸ್‌ಸಿ-ಎಸ್‌ಟಿ ಕಲ್ಯಾಣಕ್ಕೆ 1.33 ಲಕ್ಷ ಕೋಟಿ ರೂ., ಅಪೌಷ್ಟಿಕತೆ ನಿವಾರಣೆ ಕಾರ್ಯಕ್ರಮಗಳಿಗೆ 35,600 ಕೋಟಿ ರೂ., ಮಹಿಳಾ ಸಬಲೀಕರಣಕ್ಕೆ 28,600 ಕೋಟಿ ರೂ. ಮೀಸಲಿಟ್ಟಿರುವುದು ಸಾಮಾಜಿಕ ವಲಯದ ವೃದ್ಧಿಯ ಸಂಕೇತ. ಇದರಿಂದ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.

ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಪದವಿ ಯೋಜನೆ, ಕೌಶಲ್ಯ ಅಭಿವೃದ್ಧಿ, ಶಿಕ್ಷಕರು, ದಾದಿಯರು, ಅರೆವೈದ್ಯಕೀಯ ಸಿಬ್ಬಂದಿಗೆ ಕೌಶಲ್ಯಾಭಿವೃದ್ಧಿ ಬ್ರಿಡ್ಜ್ ಕೋರ್ಸ್‌ ಒದಗಿಸುವುದು ಉತ್ತಮ ನಿರ್ಧಾರವಾಗಿದೆ. ಇದರಿಂದ ನಾನಾ ಕ್ಷೇತ್ರಗಳಿಗೆ ಅಗತ್ಯವಾದ ಮಾನವ ಸಂಪನ್ಮೂಲ ದೊರಕುತ್ತದೆ. ಆದರೆ, ಈ ಎಲ್ಲ ಯೋಜನೆಗಳ ಲಾಭ ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಪಡೆಯಬೇಕು.

ಕೇಂದ್ರ ಬಜೆಟ್‌ನಲ್ಲಿ ರಾಜ್ಯ ಸರ್ಕಾರಗಳ ಅದರಲ್ಲೂ ಕರ್ನಾಟಕ ರಾಜ್ಯ ಇಂದು ಎದುರಿಸುತ್ತಿರುವ ಆರ್ಥಿಕ ಸಂಕಷ್ಟಕ್ಕೆ ಪರಿಹಾರೋಪಾಯಗಳನ್ನು ನೀಡಲಾಗಿದೆ. ಅದರ ಉಪಯೋಗಕ್ಕೆ ರಾಜ್ಯ ಸರ್ಕಾರ ಸೂಕ್ತ ರೀತಿಯಲ್ಲಿ ಮುಂದಾಗಬೇಕು. ಕ್ವಾಂಟಮ್‌ ಎಂಜಿನಿಯರಿಂಗ್‌ ಸೇರಿ ಐಟಿ-ಬಿಟಿ ವಲಯದ ಹೊಸ ಆವಿಷ್ಕಾರಗಳು ಬೆಂಗಳೂರಿಗೆ ಹೆಚ್ಚು ಲಾಭ ತರಬಲ್ಲದು. ಲಾಜೆಸ್ಟಿಕ್‌ ಸೇರಿ ಇತರೆ ವಲಯಗಳಿಗೆ ಒತ್ತು ನೀಡಿರುವುದರಿಂದ ಉದ್ಯಮಿಗಳಿಗೆ ಅನುಕೂಲವಾಗಿದೆ.

ಇದರಿಂದ ಉದ್ಯೋಗವೂ ಸೃಷ್ಟಿಯಾಗುವುದರಿಂದ ಬಡ ಹಾಗೂ ಮಧ್ಯಮ ವರ್ಗದವರಿಗೆ ಅವಕಾಶಗಳು ಹೆಚ್ಚಾಗಿ ಲಭಿಸುತ್ತವೆ. ಈ ಮೂಲಕ ಸಾಮಾಜಿಕ ವಲಯದ ವೃದ್ಧಿಯಾಗುತ್ತದೆ. ಒಟ್ಟಾರೆ ಹೇಳಬಹುದಾದರೆ ಮುಂದಿನ ಐದು ವರ್ಷ ಆರ್ಥಿಕ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಬಜೆಟ್‌ನಲ್ಲಿ ಸಾಮಾಜಿಕ ವಲಯಕ್ಕೆ ಒತ್ತು ನೀಡಲಾಗಿದೆ.

* ಆರ್‌.ಜಿ.ಮುರಳೀಧರ್‌ವಿಶ್ಲೇಷಕ, ಸಾಮಾಜಿಕ ಕ್ಷೇತ್ರ

ಟಾಪ್ ನ್ಯೂಸ್

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.