ಗೇರು ಬೀಜ ಆರಂಭಿಕ ಫಸಲು ಕಡಿಮೆ ಬೆಳೆಗಾರರಲ್ಲಿದೆ ನಿರೀಕ್ಷೆ


Team Udayavani, Feb 2, 2020, 5:11 AM IST

Gonku-1

ಈ ವರ್ಷವೂ ಗೇರು ಮರಗಳು ಹೂ ಬಿಡಲು ತಡವಾಗಿದೆ. ಜತೆಗೆ ಆರಂಭಿಕ ಫಸಲೂ ಕಡಿಮೆಯಾಗಿದೆ. ಗೇರು ಬೀಜ ಬೆಳೆಯುವ ಪ್ರಮಾಣ ಕಡಿಮೆ ಇರುವುದು ಮತ್ತು ಬೇಡಿಕೆ ಇರುವುದರಿಂದ ಮಾರುಕಟ್ಟೆಯಲ್ಲಿ ಸ್ಥಿರ ಧಾರಣೆಯ ಸಾಧ್ಯತೆಯೊಂದಿಗೆ ಹವಾಮಾನ ಗುಣಾತ್ಮಕವಾಗಿ ಪರಿಣಮಿಸಿದರೆ ಗೇರು ಬೆಳೆಗಾರರಿಗೆ ಲಾಭವಾಗುವ ನಿರೀಕ್ಷೆ ಇದೆ.
ಸಾಮಾನ್ಯವಾಗಿ ಡಿಸೆಂಬರ್‌ ತಿಂಗಳ ಅಂತ್ಯದಲ್ಲಿ ಹೂ ಬಿಟ್ಟು ಜನವರಿ ತಿಂಗಳಲ್ಲಿ ಫಸಲು ತುಂಬಿಕೊಳ್ಳುವ ಗೇರು ಹಣ್ಣಿನ ಮರಗಳು ಕಳೆದ ವರ್ಷದಂತೆ ಈ ಬಾರಿಯೂ ತಡವಾಗಿ ಹೂಬಿಟ್ಟು ಈಗ ನಿಧಾನವಾಗಿ ಫಸಲು ತುಂಬಿಕೊಳ್ಳುತ್ತಿವೆ. ಈ ಕಾರಣದಿಂದ ಗೇರು ಕೃಷಿಕರಲ್ಲಿ ಒಂದಷ್ಟು ಆತಂಕವಿದ್ದರೂ ಮುಂದೆ ಫಸಲು ಉಳಿದುಕೊಳ್ಳುವ ನಿರೀಕ್ಷೆಯೂ ಇದೆ.

ಸಾಮಾನ್ಯವಾಗಿ ಗೇರು ಕೃಷಿ ಚಳಿಗಾಲ ಹಾಗೂ ಮಳೆಗಾಲದ ಮಧ್ಯೆ ಫಲ ನೀಡುತ್ತದೆ. ಮೇ ತಿಂಗಳ ಅಂತ್ಯದಲ್ಲಿ ಹತ್ತನಾವಧಿಯ ಸಮಯಕ್ಕೆ ಗೇರು ಫಸಲು ಮುಗಿಯುವುದು ಕ್ರಮ. ಗೇರು ಕೃಷಿಯ ಲಾಭ -ನಷ್ಟ ಮಳೆಯನ್ನು ಅವಲಂಭಿಸಿರುವುದರಿಂದ ಮಾರ್ಚ್‌, ಎಪ್ರಿಲ್‌ ತಿಂಗಳಲ್ಲಿ ಮಳೆ ಬಿರುಸು ಪಡೆದುಕೊಳ್ಳಲಿದ್ದರೆ, ನಿರೀಕ್ಷಿತ ಗೇರು ಬೀಜ ಫಸಲು ಕೈಗೆ ಸಿಗುವ ಹಾಗೂ ಉತ್ತಮ ದರ ಲಭಿಸುವ ನಿರೀಕ್ಷೆಯಲ್ಲಿ ಗೇರು ಕೃಷಿಕರಿದ್ದಾರೆ.

ವಾತಾವರಣದ ವ್ಯತ್ಯಾಸ
ಕಳೆದ ವರ್ಷ ಹವಾಮಾನದಲ್ಲಿ ಉಂಟಾದ ವೈಪರೀತ್ಯ, ಡಿಸೆಂಬರ್‌ ತಿಂಗಳವರೆಗೂ ಸುರಿದ ಮಳೆಯಿಂದ ಗೇರು ಮರಗಳು ಹೂ ಬಿಡಲು ತಡವಾಗಿತ್ತು. ಈ ವರ್ಷವೂ ಅದೇ ಸ್ಥಿತಿ ನಿರ್ಮಾಣವಾಗಿದೆ. ಅನಂತರದಲ್ಲಿ ವಾತಾವರಣ ಇನ್ನೂ ಮುಂದುವರಿದಿರುವುದರಿಂದ ಗೇರು ಮರಗಳು ಹೂ ಬಿಡಲು ತಡವಾಗಿದೆ. ಆರಂಭದಲ್ಲಿ ಚಳಿ, ಅನಂತರದಲ್ಲಿ ಸೆಕೆಯ ವಾತಾವರಣ ಗೇರು ಫಸಲಿಗೆ ಪೂರಕ. ಫೆಬ್ರವರಿ ತಿಂಗಳಲ್ಲಿ ವಾತಾವರಣ ಬಿಸಿ ಏರಿದಂತೆ ಗೇರು ಫಸಲು ಕುದುರಿಕೊಳ್ಳುತ್ತದೆ ಎನ್ನುವುದು ಗೇರು ಕೃಷಿ ತಜ್ಞರ ಅಭಿಪ್ರಾಯ.

ಚಹಾ ಸೊಳ್ಳೆಗೆ ಔಷಧಿ
ಗೇರು ಕೃಷಿಗೆ ಚಹಾ ಸೊಳ್ಳೆಯ ಕಾಟ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಔಷಧಿಯಾಗಿ ಬಳಕೆಯಾಗುತ್ತಿದ್ದ ಮೊನೋಪೊಟಸ್‌ಗಿಂತಲೂ ಕರಾಟೆ ಎಂಬ ಔಷಧ ಬಳಕೆಗೆ ಗೇರು ಕೃಷಿಕರು ಇಂದು ಆಸಕ್ತಿ ತೋರುತ್ತಿದ್ದಾರೆ.

100 ಲೀ. ನೀರಿಗೆ 125 ಮಿಲಿ ಕರಾಟೆ ಔಷಧದ ಬಳಕೆ ಹಾಗೂ ಇದರ ಜತೆಗೆ 15; 15; 15 ಎನ್ನುವ ಔಷಧಿಯನ್ನು 100 ಲೀ. ಗೆ ಅರ್ಧ ಕೆ.ಜಿ.ಯಂತೆ ಬಳಕೆ ಮಾಡಿದರೆ ಚಹಾ ಸೊಳ್ಳೆಯ ಕಾಟದ ವಿರುದ್ಧ ಪರಿಣಾಮಗಾರಿ ಎನ್ನುವುದು ಬೆಳೆಗಾರರ ಅಭಿಪ್ರಾಯ.

ಏರಿಕೆಯ ಬೆಲೆ
2015ನೇ ಸಾಲಿನಲ್ಲಿ ಕೆ.ಜಿ.ಗೆ 80ರಿಂದ 90 ರೂ.ಗೆ ಖರೀದಿಯಾಗಿದ್ದ ಗೇರುಬೀಜ 2016ನೇ ಸಾಲಿನಲ್ಲಿ ಗರಿಷ್ಠ 120-130 ರೂ., 2017ರಿಂದ 2019ರ ತನಕದ ಸಾಲಿನಲ್ಲಿ ಸಾಲಿನಲ್ಲಿ 130-150 ರೂ. ತನಕ ಮಾರುಕಟ್ಟೆಯಲ್ಲಿ ಖರೀದಿಯಾಗಿದೆ ಮತ್ತು ಧಾರಣೆಯಲ್ಲಿ ಸ್ಥಿರತೆಯನ್ನೂ ಉಳಿಸಿಕೊಂಡಿತ್ತು. ಕಳೆದ ಕೆಲವು ವರ್ಷಗಳಿಂದ 50 ರೂ. ಗಡಿ ದಾಟಲು ಆರಂಭವಾಗಿದ್ದ ಗೇರು ಬೀಜದ ದರ 150 ರೂ. ಮೀರಿ ದಾಖಲೆಯೊಂದಿಗೆ ರಬ್ಬರ್‌, ಅಡಿಕೆಯ ಮಧ್ಯೆ ಅಳಿದುಳಿದ ಗೇರು ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿಸುತ್ತಿದೆ. ಬೇಡಿಕೆ ಏರುತ್ತಿರುವುದು ಮತ್ತು ಇಳುವರಿಯಲ್ಲಿ ಇಳಿಕೆಯಾಗುತ್ತಿರುವುದರಿಂದ ಈ ಬಾರಿಯೂ 150 ರೂ. ತನಕ ಧಾರಣೆ ಲಭಿಸುವ ನಿರೀಕ್ಷೆ ಇದೆ.

ಮಳೆಗೆ ಫಲ
ಗೇರು ಮರ ಹೂಬಿಟ್ಟ ಬಳಿಕ ಅಂದರೆ ಮಾರ್ಚ್‌ ಹಾಗೂ ಎಪ್ರಿಲ್‌ ತಿಂಗಳಲ್ಲಿ ಒಂದೆರಡು ಸಾಮಾನ್ಯ ಮಳೆಯಾದರೆ ಗೇರು ಬೀಜ ಫಸಲು ಹೆಚ್ಚಾಗುತ್ತದೆ. ಆದರೆ ನಿರಂತರ ಮಳೆ ಸುರಿದರೆ ಅಥವಾ ಮಂಜಿನ ವಾತಾವರಣ ಹೆಚ್ಚಿದ್ದರೆ ಮಾತ್ರ ಫಸಲು ಕರಟುವ ಜತೆಗೆ ಒದ್ದೆಯಾದ ಗೇರು ಬೀಜಕ್ಕೆ ಬೆಲೆಯೂ ಕಡಿಮೆಯಾಗುತ್ತದೆ.

-ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.