ಕೊರತೆ ನೀಗಿಸುವ ಉತ್ತಮ ಪ್ರಯತ್ನ
Team Udayavani, Feb 2, 2020, 4:06 AM IST
ನೀರು ಸರಬರಾಜು, ಸೌರವಿದ್ಯುತ್, ಸ್ಮಾರ್ಟ್ ಯೋಜನೆಗಳು ಸೇರಿದಂತೆ ಸಾರಿಗೆಯೇತರ ಹಲವು ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ. ಇದಲ್ಲದೆ, ರೈಲು, ವಿಮಾನ ನಿಲ್ದಾಣಗಳು, ರಸ್ತೆ ನಿರ್ಮಾಣದಂತಹ ಇ-ವಾಹನಗಳ ತಯಾರಿಕೆಗೆ ಒತ್ತು ಸೇರಿದಂತೆ ಸಾರಿಗೆ ಸಂಪರ್ಕಕ್ಕೆ ಸಂಬಂಧಿಸಿದ ಯೋಜನೆಗಳನ್ನೂ ಕೈಗೆತ್ತಿಕೊಳ್ಳುವ ಭರವಸೆ ನೀಡಿದ್ದು, ಇದಕ್ಕಾಗಿ ಹಣ ಮೀಸಲಿಡಲಾಗಿದೆ. ಇದೆಲ್ಲದರಿಂದ ಪರೋಕ್ಷವಾಗಿ ಸಾವಿರಾರು ಉದ್ಯೋಗ ಸೃಷ್ಟಿ ಕೂಡ ಆಗಲಿದೆ.
ಸ್ವಾತಂತ್ರ್ಯ ಬಂದು ಹಲವು ದಶಕಗಳು ಕಳೆದರೂ ಗ್ರಾಮೀಣ ಭಾಗಗಳಲ್ಲಿ ಮೂಲಸೌಕರ್ಯ ಕೊರತೆ ಕಾಡುತ್ತಿತ್ತು. ಹಾಗೂ ಆಗಾಗ್ಗೆ ಒತ್ತು ನೀಡಿದ್ದರೂ ಅದು ಕೇವಲ ರಸ್ತೆ ನಿರ್ಮಾಣಕ್ಕೆ ಸೀಮಿತವಾಗಿತ್ತು. ಈಗ ಆ ಕೊರತೆ ನೀಗಿಸುವ ಪ್ರಯತ್ನ ಈ ಬಜೆಟ್ನಲ್ಲಿ ಆಗಿದೆ. ನೀರು ಸರಬರಾಜು, ಸೌರವಿದ್ಯುತ್, ಸ್ಮಾರ್ಟ್ ಯೋಜನೆಗಳು ಸೇರಿದಂತೆ ಸಾರಿಗೆಯೇತರ ಹಲವು ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ.
ಇದಲ್ಲದೆ, ರೈಲು, ವಿಮಾನ ನಿಲ್ದಾಣಗಳು, ರಸ್ತೆ ನಿರ್ಮಾಣದಂತಹ ಇ-ವಾಹನಗಳ ತಯಾರಿಕೆಗೆ ಒತ್ತು ಸೇರಿದಂತೆ ಸಾರಿಗೆ ಸಂಪರ್ಕಕ್ಕೆ ಸಂಬಂಧಿಸಿದ ಯೋಜನೆಗಳನ್ನೂ ಕೈಗೆತ್ತಿಕೊಳ್ಳುವ ಭರವಸೆ ನೀಡಿದ್ದು, ಇದಕ್ಕಾಗಿ ಹಣ ಮೀಸಲಿಡಲಾಗಿದೆ. ಇದೆಲ್ಲದರಿಂದ ಪರೋಕ್ಷವಾಗಿ ಸಾವಿರಾರು ಉದ್ಯೋಗ ಸೃಷ್ಟಿ ಕೂಡ ಆಗಲಿದೆ. ಈ ನಿಟ್ಟಿನಲ್ಲಿ ಸ್ವಾಗತಾರ್ಹ ಕ್ರಮವಾಗಿದೆ.
ದೇಶಾದ್ಯಂತ ನೂರು ವಿಮಾನ ನಿಲ್ದಾಣ ನಿರ್ಮಿಸುವುದಾಗಿ ಪ್ರಕಟಿಸಲಾಗಿದೆ. ಒಂದು ನಿಲ್ದಾಣದಿಂದ ನೂರಾರು ಜನರಿಗೆ ಉದ್ಯೋಗ ದೊರೆಯುತ್ತದೆ. ಜತೆಗೆ ಹೊರರಾಜ್ಯ ಮತ್ತು ವಿದೇಶದಿಂದ ಬರುವ ಉದ್ಯಮಿಗಳಿಗೆ ಸಂಪರ್ಕ ವ್ಯವಸ್ಥೆ ಮತ್ತಷ್ಟು ಸುಧಾರಣೆ ಆಗಲಿದೆ. ಇದು ಭವಿಷ್ಯದಲ್ಲಿ ಎರಡು ಮತ್ತು ಮೂರನೇ ಹಂತದ ನಗರಗಳತ್ತ ಉದ್ಯಮಿಗಳು ಮುಖಮಾಡಲಿಕ್ಕೂ ನೆರವಾಗಲಿದೆ. ಪ್ರವಾಸೋದ್ಯಮ ಬೆಳವಣಿಗೆಗೂ ಪೂರಕವಾಗಲಿದೆ.
ವೇಗದ ರೈಲುಗಳು ಮತ್ತು ರೈಲು ಸಂಪರ್ಕ ಜಾಲ ವಿಸ್ತರಣೆ ಮಾಡಲಾಗಿದೆ. ಬೆಂಗಳೂರು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತುಕೊಟ್ಟಿದ್ದು ವಿಶೇಷ. ಉಪನಗರ ರೈಲು ಯೋಜನೆಗೆ 18,600 ಕೋಟಿ ರೂ. ಮೀಸಲಿಡಲಾಗಿದೆ. ಮೆಟ್ರೋ ಯೋಜನೆ ಪ್ರಸ್ತಾಪವೂ ಆಗಿದೆ. ಹಾಗಂತ, ಎಲ್ಲವೂ ಈ ಬಜೆಟ್ನಲ್ಲಿ ಆಗಿಬಿಟ್ಟಿದೆ ಎಂದೇನೂ ಅಲ್ಲ; ಒಮ್ಮೆಲೆ ಎಲ್ಲವನ್ನೂ ನಿರೀಕ್ಷಿಸಲಿಕ್ಕೂ ಆಗದು. ಒಟ್ಟಾರೆಯಾಗಿ ಹಿಂದಿನ ಬಜೆಟ್ಗಿಂತ ಈ ಸಲ ತುಸು ಆದ್ಯತೆ ನೀಡಿರುವುದು ತೃಪ್ತಿಕರ ಸಂಗತಿ.
* ಪ್ರೊ.ಎಂ.ಎನ್. ಶ್ರೀಹರಿ, ಮೂಲಸೌಕರ್ಯ ತಜ್ಞರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು
Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ
Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!
ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
MUST WATCH
ಹೊಸ ಸೇರ್ಪಡೆ
ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ