ರಾಜ್ಯದಲ್ಲಿ ಕೊರೋನಾ ಹರಡದಂತೆ ಕಟ್ಟೆಚ್ಚರ: ಸಚಿವ ಶ್ರೀರಾಮುಲು
Team Udayavani, Feb 2, 2020, 6:44 PM IST
ಬೆಳಗಾವಿ: ಮಾರಣಾಂತಿಕ ಕೊರೋನಾ ವೈರಸ್ ರಾಜ್ಯದಲ್ಲಿ ಹರಡದಂತೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದರು.
ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವೈರಸ್ ನೆರೆಯ ಚೀನಾ ದೇಶದಲ್ಲಿ ವ್ಯಾಪಕವಾಗಿ ಹರಡಿದೆ. ಅದು ನಮ್ಮ ದೇಶದೊಳಗೆ ವ್ಯಾಪಿಸದಂತೆ ತಡೆಗೆ ಕೇಂದ್ರ ಆರೋಗ್ಯ ಇಲಾಖೆಯ ಸೂಚನೆಯಂತೆ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.
ಜಿಲ್ಲಾಸ್ಪತ್ರೆಗಳೂ ಸೇರಿದಂತೆ ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ವೈದ್ಯಕೀಯ ತಪಾಸಣೆ, ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ವಿಶೇಷ ವಾರ್ಡ್ಗಳನ್ನು ತೆರೆಯಲಾಗಿದೆ ಎಂದರು.
ಚೀನಾದಿಂದ ರಾಜ್ಯಕ್ಕೆ ಬರುವ ಎಲ್ಲರನ್ನೂ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದೆ. ವಿಮಾನ ನಿಲ್ದಾಣಗಳಲ್ಲಿ ವೈದ್ಯಕೀಯ ತಪಾಸಣೆಗೆ ತಂಡ ರಚಿಸಲಾಗಿದೆ. ಮುಂಜಾಗ್ರತಾ ಕ್ರಮಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಕೇಂದ್ರದ ಆರೋಗ್ಯ ಸಚಿವರು ಈಗಾಗಲೇ ಚೀನಾ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದಾರೆ. ಈಗಾಗಲೇ 13 ಮಂದಿಗೆ ತಪಾಸಣೆ ನಡೆಸಿದ್ದು, ನೆಗೆಟಿವ್ ವರದಿ ಬಂದಿದೆ.
ಹಾಗೆಯೇ ರಾಜ್ಯದಲ್ಲಿ ಯಾವುದೇ ರೀತಿಯ ಮಾಸ್ಕ್ಗಳ ಕೊರತೆ ಇಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ
ICSE: ರಾಜ್ಯದ ವಿದ್ಯಾರ್ಥಿಗಳಿಗೆ ಶೇ. 99 ಮೀರಿದ ಫಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ
Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ
ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ
Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ