ನೆಟ್‌ವರ್ಕ್‌ ಸಮಸ್ಯೆ: ಹೈರಾಣಾದ ಬಿಎಸ್ಸೆನ್ನೆಲ್‌ ಗ್ರಾಹಕರು


Team Udayavani, Feb 3, 2020, 3:00 AM IST

network-sama

ಚನ್ನರಾಯಪಟ್ಟಣ: ಕನೆಕ್ಟಿಂಗ್‌ ಇಂಡಿಯಾ ಎಂಬ ಶಿರೋನಾಮೆಯಲ್ಲಿನ ಬಿಎಸ್ಸೆನ್ನೆಲ್‌ ಸಂಚಾರಿ ದೂರವಾಣಿ ಸಿಮ್‌ ಹೊಂದಿರುವವರ ಕರೆಗಳು ಏಕಾಏಕಿ ಕಡಿತಗೊಳ್ಳುತ್ತಿರುವುದರಿಂದ ಗ್ರಾಹಕರು ಹೈರಾಣಾಗುತ್ತಿದ್ದಾರೆ. ಒಂದು ಕಾಲದಲ್ಲಿ ಬಿಎಸ್ಸೆನ್ನೆಲ್‌ ದೂರವಾಣಿ ಸಂಪರ್ಕ ಪಡೆಯಲು ಅರ್ಜಿ ಹಾಕಿ ವರ್ಷಾನುಗಟ್ಟಲೆ ಕಾಯಬೇಕಿತ್ತು.

ಬಿಎಸ್ಸೆನ್ನೆಲ್‌ ಸಂಚಾರಿ ದೂರವಾಣಿಗೆ ಸಿಮ್‌ ಖರೀದಿಗೆ ಕಿ.ಮೀ.ಗಟ್ಟಲೆ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ಇತ್ತು. ಸಿಮ್‌ ನೀಡಬೇಕೆಂದರೆ ಸಾವಿರ ರೂ. ಕರೆನ್ಸಿ ಖರೀದಿಸುವಂತೆ ಸಂಸ್ಥೆಯಲ್ಲಿ ಬೇಡಿಕೆ ಇಡುತ್ತಿದ್ದರು. ಇಷ್ಟಾದರೂ ಗ್ರಾಹಕರು ತಾವು ಬಿಎಸ್ಸೆನ್ನೆಲ್‌ ಸಿಮ್‌ ಬಳಸಲೇಬೇಕೆಂಬ ಹಠಕ್ಕೆ ಬಿದ್ದು ಖರೀದಿಗೆ ನಾ ಮುಂದು ತಾ ಮುಂದು ಎಂದು ವಾರಗಟ್ಟಲೆ ಕಾಯ್ದು ಸಿಮ್‌ ಖರೀದಿಸುತ್ತಿದ್ದರು.

ಹೊಸ ಅಲೆ ಸೃಷ್ಟಿಸಿದ್ದ ಬಿಎಸ್ಸೆನ್ನೆಲ್‌: ನಂತರ ದಿನಗಳಲ್ಲಿ ಖಾಸಗಿಯವರು ಮಾರುಕಟ್ಟೆಗೆ ಲಗ್ಗೆ ಇಟ್ಟು ಕಡಿಮೆ ಬೆಲೆಗೆ ಸಿಮ್‌ ನೀಡಲು ಮುಂದಾದಾಗ ಬಿಎಸ್ಸೆನ್ನೆಲ್‌ ಸಂಸ್ಥೆ ಸಾರ್ವಜನಿಕರಿಗೆ ಉಚಿತ ಸಿಮ್‌ ಕೊಡುವ ಮೂಲಕ ಭಾರತದಲ್ಲಿ ಭಾರೀ ಸದ್ದು ಮಾಡುವ ಮೂಲಕ ಸಂಚಾರಿ ದೂರವಾಣಿ ಕ್ಷೇತ್ರದಲ್ಲಿ ಹೊಸ ಅಲೆಯನ್ನು ಸೃಷ್ಟಿಸಿತ್ತು. ಒಳ ಬರುವ ಕರೆಗಳನ್ನು ಸಂಪೂರ್ಣ ಉಚಿತ ಮಾಡಿದಲ್ಲದೇ ಸ್ಥಿರ ದೂರವಾಣಿ ಹೊಂದಿರುವವರಿಗೆ ಅನೇಕ ಸವಲತ್ತು ನೀಡುವ ಮೂಲಕ ಹೊರ ಕ್ರಾಂತಿಯನ್ನು ಸೃಷ್ಟಿ ಮಾಡಿದ್ದು ಇತಿಹಾಸ.

ಸ್ಥಿರ ದೂರವಾಣಿ ಬಳಕೆ ಕಡಿಮೆ: ಖಾಸಗಿ ಮೊಬೈಲ್‌ ಸಿಮ್‌ ಮಾರುಕಟ್ಟೆಯಲ್ಲಿ ಅನೇಕ ಸೌಲಭ್ಯವನ್ನು ನೀಡುತ್ತಿದ್ದು, ಉಚಿತವಾಗಿ ಹೈಸ್ಪೀಡ್‌ ಇಂಟರ್‌ನೆಟ್‌ ನೀಡುವ ಮೂಲಕ ಬಿಎಸ್ಸೆನ್ನೆಲ್‌ಗೆ ಸಡ್ಡು ಹೊಡೆಯುತ್ತಿರುವುದರಿಂದ ಖಾಸಗಿ ಸಂಸ್ಥೆಗೆ ಪೈಪೋಟಿ ಕೊಡಲು ಸಾಧ್ಯವಾಗದೇ ಸರ್ಕಾರಿ ಸ್ವಾಮ್ಯದ ಸಂಸ್ಥೆ ಬಿಎಸ್ಸೆನ್ನೆಲ್‌ ಹೈರಾಣಾಗಿದೆ. ಕಾಲಕ್ರಮೇಣ ಸಂಸ್ಥೆ ಜನರಿಂದ ದೂರವಾಗುತ್ತಲೇ ಬಂದಿದ್ದು, ಸ್ಥಿರ ದೂರವಾಣಿ ಬಳಕೆಯೂ ನಿಂತು ಹೋಗುತ್ತಿರುವುದಲ್ಲದೆ ನೆಟ್‌ವರ್ಕ್‌ ಸಮಸ್ಯೆ ಎದುರಿಸುತ್ತಿದೆ.

ಸರ್ಕಾರಿ ಕಚೇರಿಗೆ ಸೀಮಿತ: ತಾಲೂಕಿನಲ್ಲಿ ಸ್ಥಿರ ದೂರವಾಣಿಗಳು ಹುಡುಕಿದರೆ ಬೆರಳೆಣಿಕೆಯಷ್ಟು ಮನೆಯಲ್ಲಿ ಇರಬಹುದು. ನಗರ ಪ್ರದೇಶಗಳಲ್ಲಿ ಕೆಲ ಅಂಗಡಿಗಳು ಹಾಗೂ ಮನೆಯವರು ಮಾತ್ರ ಬಳಕೆ ಮಾಡುತ್ತಿದ್ದಾರೆ.ಇನ್ನು ಗ್ರಾಮೀಣ ಭಾಗದಲ್ಲಿ ಮನೆಯಲ್ಲಿ ಸ್ಥಿರ ದೂರವಾಣಿ ಕಣ್ಮರೆಯಾಗಿದೆ. ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು ಇಂದಿಗೂ ಬಿಎಸ್ಸೆನ್ನೆಲ್‌ ದೂರವಾಣಿಯನ್ನು ಹೊಂದಿದ್ದು ಇಂಟರ್‌ ನೆಟ್‌ ಬಳಕೆ ಮಾಡುತ್ತಿದ್ದು ಸರ್ಕಾರಿ ಸಂಸ್ಥೆ ಸರ್ಕಾರ ಕಚೇರಿಗೆ ಸೀಮಿತವಾಗಿದೆ.

ಹಲವು ತಿಂಗಳಿನಿಂದ ನಾಟ್‌ ರೀಚೆಬಲ್‌: ಹಲವು ತಿಂಗಳಿನಿಂದ ಬಿಎಸ್ಸೆನ್ನೆಲ್‌ ನಾಟ್‌ ರೀಚೆಬಲ್‌ ಆಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಸಂಪರ್ಕ ಕಡಿತಗೊಳ್ಳುತ್ತಿದೆ. ಪಟ್ಟಣದಲ್ಲಿ ಕಾಲ್‌ ಕನೆಕ್ಟ್ ಆದರೂ ಮಾತುಗಳು ಸ್ಪಷ್ಟವಾಗಿ ಕೇಳಿಸುವುದಿಲ್ಲ. ಬಿಎಸ್ಸೆನ್ನೆಲ್‌ ನಂಬರ್‌ಗೆ ಕರೆ ಮಾಡಿದಾಗ ಕೆಲವು ಸಮಯದಲ್ಲಿ ನಾಟ್‌ ರೀಚೆಬಲ್‌ ಎನ್ನುತ್ತದೆ. ಕಾಲ್‌ ಡ್ರಾಪ್‌ನಿಂದ ಹಲವು ಮಂದಿ ಗ್ರಾಹಕರು ಖಾಸಗಿ ಸಂಸ್ಥೆಗೆ ಪೋರ್ಟ್‌ ಆಗುತ್ತಿದ್ದಾರೆ.

ಸಂಸ್ಥೆ ಬಂದ್‌ ಆತಂಕ: ಗ್ರಾಮೀಣ ಪ್ರದೇಶದಲ್ಲಿ ಬಿಎಸ್ಸೆನ್ನೆಲ್‌ ನೆಟ್‌ವರ್ಕ್‌ ಸುಸೂತ್ರವಾಗಿ ದೊರೆಯುತ್ತಿದ್ದ ಕಾರಣ ತಾಲೂಕಿನಲ್ಲಿ ಹೆಚ್ಚು ಮಂದಿ ಬಿಎಸ್ಸೆನ್ನೆಲ್‌ ಸಿಮ್‌ ಹೊಂದಿದ್ದರು. ಆದರೆ ಹಲವು ದಿನಗಳಿಂದ ಗ್ರಾಮೀಣ ಭಾಗದ ಬಹುತೇಕ ಕಡೆಯಲ್ಲಿ ಸಂಸ್ಥೆಯ ಟವರ್‌ ಸ್ತಬ್ಧವಾಗಿದೆ ಈ ಬಗ್ಗೆ ಯಾರಲ್ಲಿ ಕೇಳಬೇಕು? ಯಾರು ಇದಕ್ಕೆ ಹೊಣೆಬಗಾರರು ಎಂಬ ಪ್ರಶ್ನೆಗೆ ಉತ್ತರ ಕೊಡುವವರೇ ಇಲ್ಲದಂತಾಗಿರುವುದಲ್ಲದೆ. ಉಪ ಕಚೇರಿಗಳು ಬಂದ್‌ ಆಗಿವೆ. ಸಂಬಳ ಇಲ್ಲದೇ ಸೆಕ್ಯುರಿಟಿ ಗಾರ್ಡ್‌ಗಳು ಕಚೇರಿಗೆ ಬಂದು ಬೀಗ ತೆರೆಯುತ್ತಿಲ್ಲ. ಇದನ್ನೆಲ್ಲ ಗಮನಿಸಿದರೆ ಸಂಸ್ಥೆ ಬಂದ್‌ ಆಗುತ್ತದೆ ಎಂಬ ಆತಂಕ ಗ್ರಾಮೀಣ ಪ್ರದೇಶದ ಗ್ರಾಹಕರಲ್ಲಿ ಮನೆ ಮಾಡಿದೆ.

ಸರ್ಕಾರಿ ಕಚೇರಿಗಳು ಜನರಿಂದ ದೂರ: ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬಿಎಸ್ಸೆನ್ನೆಲ್‌ ಸಿಮ್‌ ಹಾಗೂ ಸ್ಥಿರ ದೂರವಾಣಿ ಸಂಪರ್ಕ ವ್ಯವಸ್ಥೆ ಮಾಡಿದೆ. ನೆಟ್‌ವರ್ಕ್‌ ಇಲ್ಲದ ಕಾರಣ ಯಾವ ಅಧಿಕಾರಿಗೆ ಕರೆ ಮಾಡಿದಾಗಲೂ ಕರೆ ಸಿಗುತ್ತಿಲ್ಲ. ಸ್ಥಿರ ದೂರವಾಣಿ ಚಾಲನೆಯಲ್ಲಿಲ್ಲ ಎಂದು ಬರುತ್ತಿದೆ. ಇದರಿಂದ ಗ್ರಾಮ ಪಂಚಾಯಿತಿ ಕಚೇರಿ. ತಾಲೂಕು ಪಂಚಾಯಿತಿ ಕಚೇರಿ, ತಾಲೂಕು ಕಚೇರಿ, ಸೆಸ್ಕ್, ಪೊಲೀಸ್‌ ಠಾಣೆ, ಪೊಲೀಸ್‌ ಅಧಿಕಾರಿಗಳು, ಅಗ್ನಿಶಾಮಕ ದಳ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೈತ ಸಂಪರ್ಕ ಕೇಂದ್ರಗಳು, ಸರ್ಕಾರಿ ಆಸ್ಪತ್ರೆ ಹೀಗೆ ಸರ್ಕಾರಿ ಅಧೀನದಲ್ಲಿನ ಯಾವುದೇ ಕಚೇರಿಗೆ ಕರೆಗಳು ಹೋಗುತ್ತಿಲ್ಲ. ಇದರಿಂದ ಸಾರ್ವಜನಿಕರು ದೂರವಾಣಿ ಮೂಲಕ ಸರ್ಕಾರಿ ಕಚೇರಿಗಳನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ.

ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಿದೆ: ಸರ್ಕಾರಿ ಕಚೇರಿಗಳಲ್ಲಿ ಬಿಎಸ್ಸೆನ್ನೆಲ್‌ ಸ್ಥಿರ ಹಾಗೂ ಸಂಚಾರಿ ದೂರವಾಣಿ ಸಂಪರ್ಕ ಸಕಾಲಕ್ಕೆ ದೊರೆಯದಿರುವುದರಿಂದ ತಾಲೂಕು ಆಡಳಿತ ಎಲ್ಲಾ ಅಧಿಕಾರಿಗಳಿಗೆ ನೆಟ್‌ವರ್ಕ್‌ ಇರುವ ಸಿಮ್‌ ಅಥವಾ ಸ್ಥಿರ ದೂರವಾಣಿ ವ್ಯವಸ್ಥೆ ಕಲ್ಪಿಸಬೇಕಿದೆ. ಇಲ್ಲವಾದರೆ ಜನರಿಗೆ ಸಂಕಷ್ಟ ಎದುರಾಗಲಿದ್ದು, ಯಾವುದೇ ಮಾಹಿತಿ ತಿಳಿದುಕೊಳ್ಳಬೇಕಾದರೆ ಕಚೇರಿಗೆ ತೆರಳಬೇಕಾದ ಅನಿವಾರ್ಯತೆ ಉಂಟಾಗುತ್ತಿದೆ.

ಸಿಬ್ಬಂದಿ ಕೊರತೆಯಿಂದ ಸಮಸ್ಯೆ: ಬಿಎಸ್ಸೆನ್ನೆಲ್‌ ನೆಟ್‌ವರ್ಕ್‌ ಸಮಸ್ಯೆ ಕುರಿತು “ಉದಯವಾಣಿ’ ಜೊತೆ ಮಾತನಾಡಿದ ಜೆಟಿಒ (ಜೂನಿಯರ್‌ ಟೆಲಿಫೋನ್‌ ಎಂಜಿನಿಯರ್‌) ನಾಗೇಶ್‌ ಚನ್ನರಾಯ ಪಟ್ಟಣದಲ್ಲಿ 800 ಸ್ಥಿರ ದೂರವಾಣಿ ಹಾಗೂ ಇಂಟರ್‌ನೆಟ್‌ ಸಂಪರ್ಕ ಪಡೆದಿದ್ದಾರೆ. ತಾಲೂಕಾದ್ಯಂತ 14 ಬಿಎಸ್ಸೆನ್ನೆಲ್‌ ಉಪ ಕೇಂದ್ರಗಳಿದ್ದು, ಇದರ ನಿರ್ವಹಣೆಗೆ 15ರಿಂದ 20 ಜನ ಸಿಬ್ಬಂದಿ ಅಗತ್ಯವಿದೆ ಎಂದರು. ಈಗ ಕಾರ್ಯನಿರ್ವಹಿಸುತ್ತಿರುವ 14 ಜನರ ಪೈಕಿ 9 ಜನರು ಸ್ವಯಂ ನಿವೃತ್ತಿ ಪಡೆದಿದ್ದು, 5 ಜನರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕುರಿತು ಮೇಲಧಿಕಾರಿಗಳ ಗಮನಕ್ಕೆ ತಂದು ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕ ಮಾಡುವ ಮೂಲಕ ನೆಟ್‌ವರ್ಕ್‌ ಸಮಸ್ಯೆ ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು.

ಬಿಎಸ್ಸೆನ್ನೆಲ್‌ ನೆಟ್‌ವರ್ಕ್‌ ಸಮಸ್ಯೆ ಇದೆ ಇದರಿಂದ ಗ್ರಾಮ ಪಂಚಾಯಿತಿ ಹಾಗೂ ನಾಡ ಕಚೇರಿಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ, ಜನರಿಗೆ ತೊಂದರೆ ಆಗುವುದನ್ನು ಸರಿಪಡಿಸಬೇಕಾಗಿದ್ದು ಸರ್ಕಾರದ ಕರ್ತವ್ಯ ಎಂಬ ನೆಲೆಯಲ್ಲಿ ನಾವು ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಕ್ರಮ ಕೈಗೊಳ್ಳಬೇಕಿದೆ.
-ಇಂದಿರಾ, ತಾಲೂಕು ಪಂಚಾಯಿತಿ ಅಧ್ಯಕ್ಷೆ

ಹದಿನೈದು ವರ್ಷದ ಹಿಂದೆ ಬಿಎಸ್ಸೆನ್ನೆಲ್‌ ಸಿಮ್‌ ಪಡೆದಿದ್ದು ಇಂದಿಗೂ ಅದೇ ನೆಟ್‌ವರ್ಕ್‌ನಲ್ಲಿ ಇದ್ದೇನೆ. ಸರ್ಕಾರದಿಂದ ಹಲವು ಸವಲತ್ತು ಪಡೆಯುವ ನಾವು, ಖಾಸಗಿಗೆ ಹಣ ನೀಡುವುದನ್ನು ಒಪ್ಪದೇ ಬಿಎಸ್ಸೆನ್ನೆಲ್‌ ಸಿಮ್‌ ಉಪಯೋಗಿಸುತ್ತಿದ್ದೇನೆ ನೆಟ್‌ವರ್ಕ್‌ ಸಮಸ್ಯೆ ಇದೆ ಸರ್ಕಾರ ಆದಷ್ಟು ಬೇಗ ಸಮಸ್ಯೆ ಬಗೆ ಹರಿಸಲಿ.
-ಲೋಕಮಾತೆ, ಅಣ್ಣೇನಹಳ್ಳಿ ಗ್ರಾಮ

* ಶಾಂ ಸುಂದರ್‌ ಅಣ್ಣೇನಹಳ್ಳಿ

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.