ಸೂರ್ಯದೇವ ನಮಗೆಲ್ಲ ಜೀವಾಧಾರ, ಜೀವನಾಧಾರ


Team Udayavani, Feb 3, 2020, 3:00 AM IST

suryadeva

ತುಮಕೂರು: ಸೂರ್ಯ ನಮಗೆಲ್ಲ ಜೀವಾಧಾರ ಮತ್ತು ಜೀವನಾಧಾರ. ಸೂರ್ಯ ಇಲ್ಲದಿದ್ದರೆ ಯಾವ ಜೀವರಾಶಿಯೂ ಬದುಕಲು ಸಾಧ್ಯವಿಲ್ಲ ಎಂದು ಹಿರೇಮಠಾಧ್ಯಕ್ಷ ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ನಗರದ ಸರ್ಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ರಥಸಪ್ತಮಿ ಪ್ರಯುಕ್ತ ಭಾನುವಾರ ಹಮ್ಮಿಕೊಂಡಿದ್ದ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿ, ಸೂರ್ಯನ ಉಪಸ್ಥಿತಿ ನಮ್ಮಲ್ಲಿ ಸಂಚಲನ ಉಂಟು ಮಾಡುತ್ತದೆ. ಇಂಥ ಶಕ್ತಿ ಸೂರ್ಯನ ಕಿರಣದಲ್ಲಿದೆ. ಸೂರ್ಯ ನಮ್ಮೆಲ್ಲರ ಚೈತನ್ಯಧಾಮ. ಸೂರ್ಯ ನಮಗೆ ಆರೋಗ್ಯಕಾರಕ. ಸೂರ್ಯ ಆರೋಗ್ಯಕಾರಕ.

ಸೂರ್ಯ ಇರುವೆಡೆ ಆರೋಗ್ಯ ಇರುತ್ತದೆ. ಇಲ್ಲದಿದ್ದರೆ ಅನಾರೋಗ್ಯ ಇರುತ್ತದೆ. ದೈನಂದಿನದಲ್ಲಿ ಮೊದಲು ಸೂರ್ಯನಿಗೆ ನಮಸ್ಕಾರ ಸಲ್ಲಬೇಕು ಎಂದು ಹೇಳಿದರು. ರಥಸಪ್ತಮಿ ಸೂರ್ಯನ ಸುತ್ತಮುತ್ತ ಜರುಗುವ ಸೂರ್ಯ ಕೇಂದ್ರಿತ ಹಬ್ಬ. ಉತ್ತರಾಯಣಕಾಲವನ್ನು ಪುಣ್ಯ ಕಾಲ ಎಂದು ಕರೆಯುತ್ತೇವೆ. ರಥಸಪ್ತಮಿಗೆ ಪರ್ವ ಕಾಲ ಎಂದು ಕರೆಯುತ್ತೇವೆ. ಇದು ಪ್ರಥಮ ಪರ್ವ. ಇದನ್ನು ಮಾಘ ಸಪ್ತಮಿ ಎಂದೂ ಕರೆಯಲಾಗುತ್ತದೆ. ಶುಕ್ಲಪಕ್ಷ ಮಾಘ ಮಾಸದ 7ನೇ ದಿನ ರಥಸಪ್ತಮಿ ಹಬ್ಬ ನಡೆಯುತ್ತದೆ ಎಂದು ತಿಳಿಸಿದರು.

ಸೂರ್ಯನಿಗೆ ರಥ ಬದಲಾಯಿಸುವುದು, ಪಥ ಬದಲಾಯಿಸುವುದಷ್ಟೇ ಗೊತ್ತು. ಪಕ್ಷ ಬದಲಾಯಿಸುವ ಕೆಲಸ ಗೊತ್ತಿಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದರು. ಮೈ ಮೇಲೆ ಸೂರ್ಯನ ರಶ್ಮಿ ಬೀಳಬೇಕು. ಉತ್ತಮ ಗಾಳಿ ಸೇವಿಸಬೇಕು. ಇದನ್ನು ನಾವ್ಯಾರೂ ಮಾಡುತ್ತಿಲ್ಲ. ಹಾಗಾಗಿ ಆರೋಗ್ಯ ಹದಗೆಡುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಯೋಗ ಮಾಡಬೇಕು ಎಂದು ಸಲಹೆ ನೀಡಿದರು. ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಮಾತನಾಡಿ, ಯೋಗ ಪ್ರತಿಯೊಬ್ಬರೂ ಬದುಕಿನಲ್ಲಿ ಸಾರ್ಥಕತೆ ತಂದು ಕೊಡುತ್ತದೆ. ಜತೆಗೆ ಉತ್ತಮ ಆರೋಗ್ಯಕ್ಕೂ ಸಹಕಾರಿ. ಯೋಗದ ಮಹತ್ವ ತಿಳಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಪತಂಜಲಿ ಯೋಗ ಶಿಕ್ಷಣ ಸಮಿತಿ ಪ್ರಾಂತ ಸಂಚಾಲಕ ತ್ಯಾಗರಾಜು ಮಾತನಾಡಿ, ಸೂಯೊಲ್ಲಂಘನ ಮಾಡಿದ ಅಪಕೀರ್ತಿ ಮನುಷ್ಯನಿಗೆ ಸಲ್ಲುತ್ತದೆ. ಆದರೆ ಪ್ರಾಣಿಗಳು ಸೂಯೊದಯದೊಂದಿಗೆ ಕೆಲಸ ಆರಂಭಿಸುತ್ತವೆ. ಸೂರ್ಯಾಸ್ತಮದೊಂದಿಗೆ ಕೆಲಸ ಮುಗಿಸುತ್ತವೆ ಎಂದು ಹೇಳಿದರು. ಪತಂಜಲಿ ಯೋಗ ಶಿಕ್ಷಣ ಸಮಿತಿ ನೇತೃತ್ವದಲ್ಲಿ ನೂರಾರು ಮಂದಿ ಯೋಗಬಂಧುಗಳಿಂದ ಸಾಮೂಹಿಕ ಸೂರ್ಯ ನಮಸ್ಕಾರ ನಡೆಯಿತು.

ಸೂರ್ಯದೇವನಿಗೆ ವಿಶೇಷ ಸ್ಥಾನ
ತುಮಕೂರು: ಭಾರತೀಯ ಸಂಸ್ಕೃತಿಯಲ್ಲಿ ಸೂರ್ಯದೇವನಿಗೆ ವಿಶೇಷ ಸ್ಥಾನ ನೀಡಿದ್ದು, ಬೆಳಗ್ಗೆ ಎದ್ದು ನಮಿಸಿದರೆ ದಿನದ ಚಟುವಟಿಕೆ ಉತ್ತಮ ರೀತಿಯಲ್ಲಿ ಇರುತ್ತದೆ ಎಂದು ಹಿರೇಮಠಾಧ್ಯಕ್ಷ ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ನಗರದ ಅಮಾನೀಕೆರೆ ಮುಂಭಾಗ ಶ್ರೀ ರಾಮನಗರ ಗೆಳೆಯರ ಬಳಗ, ಧನ್ವಂತರಿ ಯೋಗ ಸಂಸ್ಥೆಯಿಂದ ರಥಸಪ್ತಮಿ ಅಂಗವಾಗಿ ಸೂರ್ಯದೇವನಿಗೆ 108 ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯೋಗ ಮಾಡಿದವನಿಗೆ ಯಾವುದೇ ರೋಗ ಹರಡುವುದಿಲ್ಲ. ಯೋಗದಲ್ಲಿ ಪ್ರಮುಖವಾಗಿ ಬರುವುದೇ ಸೂರ್ಯ ನಮಸ್ಕಾರ ಎಂದು ಹೇಳಿದರು. ಶ್ರೀ ರಾಮನಗರ ಗೆಳೆಯರ ಬಳಗದ ಅಧ್ಯಕ್ಷ ಬಿ.ಎಲ್‌ ರವೀಂದ್ರ ಕುಮಾರ್‌, ಧನ್ವಂತರಿ ಯೋಗ ಕೇಂದ್ರದ ಯೋಗಗುರು ರಶ್ಮಿ ಮಾತನಾಡಿದರು. ಡಾ.ಕೆ.ಎಸ್‌ ರಾಜಶೇಖರ್‌, ಡಾ.ಹಿರೇಮಠ, ಡಾ.ಮುರುಳಿಧರ್‌, ಎಸ್‌.ವಿ ವೆಂಕಟೇಶ್‌, ಸ್ಪೂರ್ತಿ ಡೆವಲಪರ್ಸ್‌ನ ಚಿದಾನಂದ್‌, ಕಿರಣ್‌, ಚಂದ್ರು, ಬಸವರಾಜ್‌, ಕರಿಯಪ್ಪ ಸೇರಿದಂತೆ ಹಲವರು ಇದ್ದರು.

ಯೋಗದಿಂದ ಆರೋಗ್ಯಕರ ಜೀವನ
ತುಮಕೂರು: ಯೋಗಾಭ್ಯಾಸದಿಂದ ಆರೋಗ್ಯಕರ ಜೀವನ ಸಾಗಿಸಲು ಸಾಧ್ಯ ಎಂದು ವಾಗ್ಮಿ ಹಾಗೂ ಯೋಗಪಟು ಎಂ.ಕೆ.ನಾಗರಾಜ್‌ ತಿಳಿಸಿದರು. ನಗರದ ಅನನ್ಯ ಇನ್‌ಸ್ಟಿಟ್ಯೂಟ್‌ ಆಫ್ ಕಾಮರ್ಸ್‌ ಆ್ಯಂಡ್‌ ಮ್ಯಾನೇಜ್ಮೇಂಟ್‌ನ ಕಾಲೇಜಿನ ಆವರಣದಲ್ಲಿ ರಥಸಪ್ತಮಿಯ ಅಂಗವಾಗಿ ಹಮ್ಮಿಕೊಂಡಿದ್ದ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಯೋಗಾಭ್ಯಾಸದಿಂದ ದೀರ್ಘ‌ಕಾಲ ಆರೋಗ್ಯವಾಗಿ ಬಾಳಬಹುದು ಎಂದರು. ಅನನ್ಯ ಸಂಸ್ಥೆ ಟ್ರಸ್ಟಿ ಡಾ.ಎಚ್‌. ಹರೀಶ್‌ ಮಾತನಾಡಿ, ಯೋಗಭ್ಯಾಸ ಬದುಕುವ ಕಲೆ ಕಲಿಸುತ್ತದೆ ಎಂದು ತಿಳಿಸಿದರು. ಪ್ರಾಂಶುಪಾಲ ಡಾ.ಎಂ.ವಿಶ್ವಾಸ್‌ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.