ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶಾಸಕರಿಗೆ ಮನವಿ
Team Udayavani, Feb 3, 2020, 3:01 PM IST
ಅಕ್ಕಿಆಲೂರು: ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಲರ್ಕ್ ಮತ್ತು ಡಾಟಾ ಎಂಟ್ರಿ ಆಪರೇಟರ್ಗಳ ವಿವಿಧ ಬೇಡಿಕೆ ಈಡೇರಿಕೆ ಕುರಿತು ಸರ್ಕಾರದ ಗಮನ ಸೆಳೆಯಬೇಕೆಂದು ಒತ್ತಾಯಿಸಿ ಶಾಸಕ ಸಿ.ಎಂ. ಉದಾಸಿಯವರಿಗೆ ಮನವಿ ಸಲ್ಲಿಸಲಾಯಿತು.
ಡಿಜಿಟಲ್ ಭಾರತದ ಕನಸು ಸಾಕಾರಗೊಳಿಸುವಲ್ಲಿ ಡಾಟಾ ಎಂಟ್ರಿ ಆಪರೇಟರ್ಗಳ ಶ್ರಮ ದೊಡ್ಡದು. ಸರ್ಕಾರದ ಎಲ್ಲ ವಿಧವಾದ ಯೋಜನೆಗಳ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಕೈಜೋಡಿಸುವ ಡಾಟಾ ಎಂಟ್ರಿ ಆಪರೇಟರ್ಗಳ ಕೆಲಸಕ್ಕೆ ಭದ್ರತೆ ಇಲ್ಲ. ಸೂಕ್ತ ವೇತನವೂ ದೊರೆಯುತ್ತಿಲ್ಲ ಎನ್ನುವುದು ಬೇಸರದ ಸಂಗತಿಯಾಗಿದೆ. ಡಾಟಾ ಎಂಟ್ರಿ ಆಪರೇಟರ್ಗಳ ಬದುಕಿಗೆ ಭದ್ರತೆ ಕಲ್ಪಿಸಲು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಗ್ರೇಡ್-2 ಹುದ್ದೆಗೆ ಸರಿಸಮವಾಗಿ ಅವರಿಗೆ ವೇತನ ದೊರಕಿಸಿ ಕೊಡುವ ಕಾರ್ಯವಾಗಬೇಕಿದೆ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಸುರೇಶ ಹುದ್ದಾರ, ವಿನಾಯಕ ವೆಂಕೋಜಿ, ಬಸವರಾಜ ಚವ್ಹಾಣ, ಗಿರೀಶ ಮೂಡಿ, ಸುಲೇಮಾನ್ ಹುಡೇದ, ಸುನೀಲ್ ಭಾಗಣ್ಣನವರ, ಜಗದೀಶ ದಾನಮ್ಮನವರ, ಪ್ರಶಾಂತ ರೊಟ್ಟಿ, ಮಂಜುನಾಥ ಮಡಿವಾಳರ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ