ಬಸ್ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಮನವಿ
Team Udayavani, Feb 3, 2020, 3:57 PM IST
ಯಲಬುರ್ಗಾ: ಪಟ್ಟಣದಿಂದ ನರೇಗಲ್ಗೆ ಬಸ್ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಮಾನವ ಹಕ್ಕುಗಳ ಕಾನೂನು ಮತ್ತು ಸಾಮಾಜಿಕ ಕಲ್ಯಾಣಾಭಿವೃದ್ಧಿ ಸಂಘಟನೆ ಪದಾಧಿ ಕಾರಿಗಳು ಪಟ್ಟಣದ ಡಿಪೋದಲ್ಲಿ ಘಟಕ ವ್ಯವಸ್ಥಾಪಕ ರಮೇಶ ಚಿಣಗಿ ಅವರಿಗೆ ಮನವಿ ಸಲ್ಲಿಸಿದರು.
ಮಾನವ ಹಕ್ಕುಗಳ ಕಾನೂನು ಮತ್ತು ಸಾಮಾಜಿಕ ಕಲ್ಯಾಣಾಭಿವೃದ್ಧಿ ಸಂಘಟನೆ ಉತ್ತರ ಕರ್ನಾಟಕ ಅಧ್ಯಕ್ಷ ಭಾವಾಖಾನ್ ಮಾತನಾಡಿ. ಮುಧೋಳ, ಕರಮುಡಿ, ಬಂಡಿಹಾಳ, ತೊಂಡಿಹಾಳ ಸೇರಿದಂತೆ ಇನ್ನಿತರ ಗ್ರಾಮಗಳ ವಿದ್ಯಾರ್ಥಿಗಳು, ಪ್ರಯಾಣಿಕರು ನರೇಗಲ್ ಪಟ್ಟಣಕ್ಕೆ ಹೋಗಲು ಬಸ್ ಸಂಚಾರವಿಲ್ಲದೇ ಸಮಸ್ಯೆ ಅನುಭವಿಸುವಂತಾಗಿದೆ. ವಿದ್ಯಾಭ್ಯಾಸ ಸೇರಿದಂತೆ ವ್ಯಾಪಾರ ವಹಿವಾಟಿಗೆ ಜನತೆ ಯಲಬುರ್ಗಾ ಹಾಗೂ ನರೇಗಲ್ ಪಟ್ಟಣವನ್ನು ಅವಲಂಬಿಸಿದ್ದಾರೆ. ಆದರಿಂದ ಬೆಳಗ್ಗೆ ಮತ್ತು ಸಂಜೆ 5ಕ್ಕೆ ಎರಡು ವೇಳೆಯಲ್ಲಿ ಬಸ್ ಸೌಕರ್ಯ ಕಲ್ಪಿಸಿಕೊಡಬೇಕು. ಶೀಘ್ರದಲ್ಲಿ ಬಸ್ ಸೌಕರ್ಯ ಕಲ್ಪಿಸಲು ಮುಂದಾಗಬೇಕು. ಇಲ್ಲದೇ ಇದ್ದರೆ ಬಸ್ ಡಿಪೋ ಮುಂದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಹಿಂದೆ ಹಲವಾರು ಭಾರಿ ಮನವಿ ಮಾಡಿದರೂ ಪ್ರಯೋಜನೆ ಇಲ್ಲದಂತಾಗಿದೆ. ಬಸ್ ಸೌಕರ್ಯ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು. ನರೇಗಲ್ಲ-ಯಲಬುರ್ಗಾ ಮಾರ್ಗ ಮಧ್ಯ ಬರುವ ಗ್ರಾಮಗಳ ಪೈಕಿ ನಿತ್ಯ ಸಾವಿರಾರು ಜನತೆ ಪ್ರಯಾಣ ಮಾಡುತ್ತಿದ್ದಾರೆ. ಆದ್ದರಿಂದ ಶೀಘ್ರದಲ್ಲಿ ಬಸ್ ಸೌಕರ್ಯ ಕಲ್ಪಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.
ಮನವಿ ಪತ್ರ ಸ್ವೀಕರಿಸಿ ಘಟಕ ವ್ಯವಸ್ಥಾಪಕ ರಮೇಶ ಚಿಣಗಿ ಮಾತನಾಡಿ, ಶೀಘ್ರದಲ್ಲಿ ಪರಿಶೀಲನೆ ನಡೆಸಿ ಬಸ್ ಸೌಕರ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು. ಕೊಪ್ಪಳ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ಕಟ್ಟಿಮನಿ, ಜಿಲ್ಲಾ ಕಾರ್ಯದರ್ಶಿ ಪ್ರೇಮಾ ನಾಯಕನೂರು, ಪರಸಪ್ಪ ಪಂಚಮ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು