ಜಯಂತಿಗಳು ನಮ್ಮಲ್ಲಿ ಪರಿವರ್ತನೆ ತರಲಿ: ನ್ಯಾ|ಕೆಂಗಬಾಲಯ್ಯ

ತಂದೆ-ತಾಯಿ ಮಕ್ಕಳಲ್ಲಿ ಸ್ವಾಮಿ ವಿವೇಕಾನಂದರ ಸಂಸ್ಕಾರವನ್ನು ಬಿತ್ತಬೇಕು.

Team Udayavani, Feb 3, 2020, 5:13 PM IST

3-Febrauary-26

ದಾವಣಗೆರೆ: ಯಾವುದೇ ಮಹನೀಯರ, ದಾರ್ಶನಿಕರ ಭಾವಚಿತ್ರ ಇಟ್ಟು ಪೂಜೆ ಮಾಡಿದಾಕ್ಷಣ ಜಯಂತ್ಯುತ್ಸವಕ್ಕೆ ಅರ್ಥ ಬರುವುದಿಲ್ಲ. ಆಚರಣೆ ಮಾಡುವರಲ್ಲಿ ಒಂದಿಷ್ಟಾದರೂ ಪರಿವರ್ತನೆಯಾದಲ್ಲಿ ನಿಜವಾದ ಅರ್ಥ ಬರುತ್ತದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆಂಗಬಾಲಯ್ಯ ತಿಳಿಸಿದರು.

ಭಾನುವಾರ ನಿಟುವಳ್ಳಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ಹೆಣ್ಣು ಮಕ್ಳಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾನೂನು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಜಯಂತಿಗಳಿಗೆ ನೈಜ ಅರ್ಥ ಬರುವಂತೆ ಮಹನೀಯರು, ದಾರ್ಶನಿಕರ ತತ್ವಾದರ್ಶ ಪಾಲನೆ ಮಾಡಬೇಕು ಎಂದರು.

ಸ್ವಾಮಿ ವಿವೇಕಾನಂದರ ಮೂಲ ಹೆಸರು ನರೇಂದ್ರ. ಚಿಕ್ಕ ವಯಸ್ಸಿನಲ್ಲೇ ಹೇಳುತ್ತಿದ್ದ ರಾಮಾಯಣ, ಮಹಾಭಾರತ ಮುಂತಾದ ಕಥೆಗಳನ್ನ ಆಲಿಸುತ್ತಿದ್ದ ಅವರು ಆಗಲೇ ಪ್ರಶ್ನಿಸುವ ಮನೋಭಾವ ಬೆಳೆಸಿಕೊಂಡಿದ್ದರು. ಮುಂದೆ ರಾಮಕೃಷ್ಣ ಪರಮಹಂಸರ ಪರಮಶಿಷ್ಯನಾಗಿ ವಿಶ್ವ ಖ್ಯಾತಿಗೆ ಪಾತ್ರರಾಗಿದ್ದಾರೆ ಎಂದು ತಿಳಿಸಿದರು.

ಈಗ ಅನೇಕರು ಪ್ರತಿಶತ ಅಂಕ ಪಡೆಯುವ ಮೂಲಕ ರ್‍ಯಾಂಕ್‌ ಪಡೆಯುತ್ತಾರೆ. ನಮ್ಮ ಸುತ್ತಮುತ್ತಲಿನವರು, ಸಮಾಜದ ಸಂಕಷ್ಟಕ್ಕೆ ಮಿಡಿಯುವ, ಸ್ಪಂದಿಸುವ ಗುಣವಿಲ್ಲದೆ ಹೋದರೆ ಪಡೆದಂತಹ ರ್‍ಯಾಂಕ್‌ ನಿರರ್ಥಕ ಎಂದು ತಿಳಿಸಿದರು.

ತಂದೆ-ತಾಯಿ ಮಕ್ಕಳಲ್ಲಿ ಸ್ವಾಮಿ ವಿವೇಕಾನಂದರ ಸಂಸ್ಕಾರವನ್ನು ಬಿತ್ತಬೇಕು. ಮೊಬೈಲ್‌, ಟಿವಿ ಬಿಟ್ಟು ನಮ್ಮ ಮಕ್ಕಳಿಗೆ ನೀತಿ ಕಥೆಗಳನ್ನು ಹೇಳಬೇಕು. ನಮ್ಮನ್ನು ಪರಿಶೋಧಿಸಿಕೊಳ್ಳಬೇಕು ಎಂದು ತಿಳಿಸಿದರು.

ಯುವಜನಾಂಗ ಓದುವ ಹಂತದಲ್ಲೇ ಪ್ರೀತಿ, ಪ್ರೇಮದ ಹೆಸರಲ್ಲಿ ದಾರಿ ತಪ್ಪುತ್ತಿದೆ ಎಂಬುದನ್ನು ಅರಿತಿದ್ದ ವಿವೇಕಾನಂದರು ಪ್ರೀತಿಯ ಪರಿಕಲ್ಪನೆಯನ್ನು ತಮ್ಮ ಪುಸ್ತಕಗಳಲ್ಲಿ ಬರೆದು ಸಂದೇಶ ನೀಡಿದರು. ಆದರೆ ಅನೇಕರು ಇಂದು ಪುಸ್ತಕಗಳನ್ನೇ ಓದುತ್ತಿಲ್ಲ. ಸಂಸ್ಕಾರ, ಸಂಸ್ಕೃತಿ ಕಲಿಸುವ ಮೂಲಕ ತಮ್ಮ ಮಕ್ಕಳನ್ನು ವಿವೇಕಾನಂದರಂತೆ ಆಗಿಸುವ ಕನಸು ಕಾಣಬೇಕು ಎಂದು ತಿಳಿಸಿದರು.

ಹಿರಿಯ ಸಿವಿಲ್‌ ನ್ಯಾಯಾಧೀಶ ಪಿ.ಜೆ. ಸೋಮಶೇಖರ್‌ ಮಾತನಾಡಿ, ಗ್ರಾಮೀಣ ಜನರಿಂದಾಗಿ ಬಾಂಧವ್ಯ, ಸಂಸ್ಕೃತಿ ಉಳಿದಿದೆ. ನಗರದ ಜನರು ಹಾಗೂ ವಿದ್ಯಾವಂತರಿಂದ ಸಂಸ್ಕೃತಿ ಕಳೆದು ಹೋಗುತ್ತಿದೆ. ಪ್ರತಿಷ್ಠೆ ಕಾರಣಕ್ಕೆ ನ್ಯಾಯಾಲಯಗಳಿಗೆ ಹೆಚ್ಚಿನ ವ್ಯಾಜ್ಯಗಳು ಬರುತ್ತಿವೆ ಎಂದರು.

ಸಾಮಾನ್ಯ ಜ್ಞಾನದ ತಳಹದಿಯ ಮೇಲೆ ಕಾನೂನು ನಿಂತಿದೆ. ಕಾನೂನು ಅರಿವು ನೀಡಿದಲ್ಲಿ ಮಹಿಳೆಯರಿಗೆ ರಕ್ಷಣೆ ಒದಗಿಸಬಹುದು. 2005ರ ಹೊಸ ತಿದ್ದುಪಡಿ ಪ್ರಕಾರ ಮಹಿಳೆಯರಿಗೂ ಪುರುಷರಂತೆ ಆಸ್ತಿಯಲ್ಲಿ ಸಮಾನ ಹಕ್ಕಿದೆ. ಅದು ಸರಿಯಾದ ರೀತಿಯಲ್ಲಿ ಬಳಕೆಯಾಗಬೇಕು ಎಂದರು.

ಅಧಿವಕ್ತಾ ಪರಿಷತ್‌ ರಾಜ್ಯ ಉಪಾಧ್ಯಕ್ಷ ಪ್ರಕಾಶ್‌ರಾವ್‌ ಮಾತನಾಡಿ, ಯುವ ಜನಾಂಗಕ್ಕೆ ಸ್ವಾಮಿ ವಿವೇಕಾನಂದರ ವಿಚಾರಧಾರೆ ಪ್ರೇರಣಾದಾಯಕವಾಗಿವೆ ಎಂದು ತಿಳಿಸಿದರು. ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯವಾದಿ ಮಧುಕರ್‌ ದೇಶಪಾಂಡೆ, ವಿದ್ಯುನ್ಮಾನ ಸಾಕ್ಷ್ಯಗಳು… ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಪರಿಷತ್‌ನ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಸಿ.ಪಿ. ಅನಿತಾ ಪ್ರಾಸ್ತಾವಿಕ ಮಾತನಾಡಿದರು. ರಾಜ್ಯ ಉಪಾಧ್ಯಕ್ಷ ಮಂಜಪ್ಪ ಕಾಕನೂರು, ಜಿಲ್ಲಾ ಅಧ್ಯಕ್ಷ ಎಲ್‌.ದಯಾನಂದ ಇತರರು ಇದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.