ಕಾಡ್ಗಿಚ್ಚು ತಡೆಯಲು ವಿಶೇಷ ಕಾರ್ಯಪಡೆ

 ಕುದುರೆಮುಖ ವನ್ಯಜೀವಿ ವಿಭಾಗದಲ್ಲಿ ಯೋಜನೆ

Team Udayavani, Feb 4, 2020, 5:48 AM IST

0302AJKE01

ಅಜೆಕಾರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಬೇಸಗೆಯಲ್ಲಿ ಸಂಭವಿಸಬಹುದಾದ ಕಾಡ್ಗಿಚ್ಚು ತಡೆಯಲು ವನ್ಯಜೀವಿ ವಿಭಾಗದ ಅಧಿಕಾರಿಗಳು ವಿಶೇಷ ಕಾರ್ಯಪಡೆ ರಚಿಸಿ ಕಣ್ಗಾವಲು ಇರಿಸಿದ್ದಾರೆ.

ಕಳೆದ ವರ್ಷ ಜನವರಿ ಫೆಬ್ರವರಿ ತಿಂಗಳಲ್ಲಿ ರಾಜ್ಯದ ಬಂಡೀಪುರ ಅಭಯಾರಣ್ಯದಲ್ಲಿ ಬೆಂಕಿಯ ಜ್ವಾಲೆಗೆ ಅಪಾರ ನಷ್ಟ ಸಂಭವಿಸಿದ್ದು ಇಂತಹ ಅವಘಡಗಳು ಕುದುರೆಮುಖ ವನ್ಯಜೀವಿ ವಿಭಾಗದ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭವಿಸದಂತೆ ಪ್ರತಿ ವರ್ಷ ಮುನ್ನೆಚ್ಚರಿಕೆಯನ್ನು ವಹಿಸಲಾಗುತ್ತಿದೆ.

2 ಕಣ್ಗಾವಲು ಪಡೆ
ಪ್ರತಿ ವರ್ಷ ಜನವರಿಯಿಂದ ಎಪ್ರಿಲ್‌ವರೆಗೆ ಕುದುರೆಮುಖ ವನ್ಯಜೀವಿ ವಿಭಾಗದ ರಾಷ್ಟ್ರೀಯ ಉದ್ಯಾನವನದ ಕೆಲವು ಪ್ರದೇಶಗಳಲ್ಲಿ ಅಲ್ಪ ಪ್ರಮಾಣದ ಬೆಂಕಿ ಕಾಣಿಸಿಕೊಳ್ಳುತ್ತಿದ್ದು ಇದರ ನಿರ್ಮೂಲನೆಗಾಗಿಯೇ ತಲಾ ನಾಲ್ಕು ಜನರನ್ನು ಒಳಗೊಂಡ ಎಫ್ಪಿಸಿ ಮತ್ತು ಎಪಿಸಿ ಎಂಬ 2 ಕಣ್ಗಾವಲು ಪಡೆಗಳನ್ನು ನೇಮಕ ಮಾಡಲಾಗಿದ್ದು ಈ ತಂಡಗಳು ದಿನದ 24 ಗಂಟೆಯೂ ಸದಾ ಕಾವಲು ಕಾಯುತ್ತವೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನವು ಒಟ್ಟು 4 ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ 1,300 ಚದರ ಕಿ.ಮೀ. ವ್ಯಾಪ್ತಿಯನ್ನು ಹೊಂದಿದ್ದು, ಅಪಾರ ಪ್ರಾಣಿ ವರ್ಗ, ವೃಕ್ಷ ಸಂಕುಲಕ್ಕೆ ಆಶ್ರಯವಾಗಿದೆ.

ರಾಜ್ಯದ ಇತರ ರಾಷ್ಟ್ರೀಯ ಉದ್ಯಾನವನಕ್ಕೆ ಹೋಲಿಸಿದಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನವು ನಿತ್ಯಹರಿದ್ವರ್ಣ ಕಾಡುಗಳಿಂದ ಆವೃತವಾಗಿರುವುದರಿಂದಾಗಿ ಈ ಪ್ರದೇಶದಲ್ಲಿ ಅಗ್ನಿ ಅವಘಡಗಳು ಸಂಭವಿಸುವುದು ವಿರಳವಾಗಿದೆ.

ಮುನ್ನೆಚ್ಚರಿಕೆ
ಈ ಭಾಗದಲ್ಲಿ ನಿರಂತರ ಮಳೆ ಸುರಿಯುವುದು ಒಂದೆಡೆಯಾದರೆ ಹುಲ್ಲುಗಾವಲು ಪ್ರದೇಶ ಕಡಿಮೆ ಪ್ರಮಾಣದಲ್ಲಿ ಇರುವುದರಿಂದ ಕಾಡ್ಗಿಚ್ಚು ಸಂಭವಿಸುವುದು ಅತಿ ಕಡಿಮೆಯಾಗಿದೆ. ಆದರೂ ಸಹ ಅರಣ್ಯದೊಳಗೆ ತೆರಳುವ ಕೆಲವು ಪ್ರವಾಸಿಗರು ಬೆಂಕಿ ಹಾಕುವುದರಿಂದ ಅಗ್ನಿ ಅನಾಹುತಗಳು ಕೆಲವೊಮ್ಮೆ ಸಂಭವಿಸುತ್ತವೆ. ಈ ನಿಟ್ಟಿನಲ್ಲಿ ವನ್ಯಜೀವಿ ವಿಭಾಗ ಮುನ್ನೆಚ್ಚರಿಕೆ ವಹಿಸಿದೆ.

ಆಧುನಿಕ ತಂತ್ರಜ್ಞಾನ
ರಾ.ಉದ್ಯಾನವನ ವ್ಯಾಪ್ತಿಯಲ್ಲಿ ಯಾವುದೇ ಬೆಂಕಿ ಅನಾಹುತ ಸಂಭವಿಸುವ ಲಕ್ಷಣವಿದ್ದಲ್ಲಿ ತತ್‌ಕ್ಷಣ ಅಧಿಕಾರಿಗಳ ಮೊಬೈಲ್‌ಗೆ ಸಂದೇಶ ರವಾನೆಯಾಗುವಂತೆ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿದೆ. ಇದರಿಂದಾಗಿ ಅವಘಡಗಳು ಸಂಭವಿಸಿದ ತತ್‌ಕ್ಷಣವೇ ಅಧಿಕಾರಿಗಳು ಕಾರ್ಯೋನ್ಮುಖರಾಗಲು ಸಹಕಾರಿಯಾಗಿದೆ. ಡ್ರೋನ್‌ ಕೆಮರಾ ಬಳಸಿಯೂ ಅರಣ್ಯ ಪ್ರದೇಶವನ್ನು ನಿರಂತರವಾಗಿ ವೀಕ್ಷಿಸಲಾಗುತ್ತಿದೆ.

ಬೆಂಕಿ ಅವಘಡದ ಪ್ರದೇಶಗಳು
ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಮುಖವಾಗಿ ನೆಮ್ಮಾರ್‌, ಮಲ್ಲೇಶ್ವರ್‌, ಶೀರಲ್‌ ಹಾಗೂ ಕುದುರೆಮುಖ ಅದಿರು ಸಂಗ್ರಹಣ ಪ್ರದೇಶದಲ್ಲಿ ಹೆಚ್ಚಾಗಿ ಬೆಂಕಿ ಕಾಣಿಸಿಕೊಳ್ಳುತ್ತದೆ. ಅಲ್ಲದೆ ವಾಲಿಕುಂಜಕ್ಕೆ (ಅಜ್ಜಿಕುಂಜ) ಪ್ರದೇಶದಲ್ಲೂ ಅಗ್ನಿ ಅನಾಹುತ ಸಂಭವಿಸುತ್ತದೆ.

17 ಕಡೆಗಳಲ್ಲಿ ವೀಕ್ಷಣಾ ಸ್ಥಳ
ಉದ್ಯಾನವನದ ಅತೀ ಎತ್ತರದ 17 ಪ್ರದೇಶಗಳನ್ನು ಅರಣ್ಯ ವೀಕ್ಷಣೆಗಾಗಿ ಆಯ್ಕೆ ಮಾಡಲಾಗಿದೆ. ಅರಣ್ಯ ಇಲಾಖೆಯ ಸಿಬಂದಿ ಹಾಗೂ ಎಪಿಸಿ ಕಣ್ಗಾವಲು ಪಡೆಯ ಸಿಬಂದಿ ಕಾರ್ಯನಿರ್ವಹಿಸುತ್ತಿದ್ದು, ಈ 17 ಪ್ರದೇಶಗಳಲ್ಲಿ ಇರುವ ಟವರ್‌ ಮೂಲಕ ಸುತ್ತಲಿನ ಅರಣ್ಯ ಪ್ರದೇಶವನ್ನು ನಿರಂತರವಾಗಿ ವೀಕ್ಷಣೆ ಮಾಡುತ್ತಿರುತ್ತಾರೆ.

ಪ್ರವೇಶ ನಿಷೇಧ
ಉದ್ಯಾನವನದೊಳಗೆ ಅಗ್ನಿ ದುರಂತಗಳನ್ನು ತಡೆಯುವ ನಿಟ್ಟಿನಲ್ಲಿ ಬೇಸಗೆ ಸಮಯದಲ್ಲಿ ಜನರು ಅರಣ್ಯ ಪ್ರವೇಶ ಮಾಡುವುದನ್ನು ನಿಷೇಧಿಸಲಾಗುತ್ತದೆ. ಈ ಬಾರಿಯೂ ಪರಿಸ್ಥಿತಿಯನ್ನು ಅವಲೋಕಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಉದ್ಯಾನವನ ವ್ಯಾಪ್ತಿಯಲ್ಲಿ ಯಾವುದೇ ಬೆಂಕಿಯ ಕುರುಹು ಕಂಡುಬಂದ ತತ್‌ಕ್ಷಣ ಕಾರ್ಯಾಚರಿಸಲು ಸಿಬಂದಿ ಹಾಗೂ ಹೆಚ್ಚುವರಿ ವಾಹನಗಳನ್ನು ನಿಯೋಜನೆ ಮಾಡಲಾಗಿದ್ದು, ಬೆಂಕಿ ನಂದಿಸಲು ಅಗತ್ಯವಿರುವ ನೀರು ಹಾಗೂ ಅಗತ್ಯ ಉಪಕರಣಗಳು ಮತ್ತು ಅಗ್ನಿಶಾಮಕ ವ್ಯವಸ್ಥೆಗಳನ್ನು ಸಿಬಂದಿಗೆ ನೀಡಲಾಗಿದೆ.

ಕಟ್ಟೆಚ್ಚರ
ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡ್ಗಿಚ್ಚಿನಂತಹ ಪ್ರಕರಣಗಳು ತೀರಾ ವಿರಳ. ಆದರೂ ಸಹ ಮುಂಜಾಗ್ರತೆ ಕ್ರಮವಾಗಿ ಹೆಚ್ಚುವರಿ ಸಿಬಂದಿ ನೇಮಿಸಿಕೊಂಡು ವಿಶೇಷ ಕಾರ್ಯಪಡೆ ರಚಿಸಿ ಉದ್ಯಾನವನ ವ್ಯಾಪ್ತಿಯಲ್ಲಿ ಟವರ್‌ಗಳನ್ನು ನಿರ್ಮಿಸಿ ಕಟ್ಟೆಚ್ಚರ ವಹಿಸಲಾಗಿದೆ.
-ರುಥÅನ್‌,
ವಲಯ ಅರಣ್ಯಾಧಿಕಾರಿ, ಕುದುರೆಮುಖ ವನ್ಯಜೀವಿ ವಿಭಾಗ

ಪ್ರತಿಯೋರ್ವರ ಕರ್ತವ್ಯ
ಯಾವುದೇ ರೀತಿಯ ಅನಾಹುತ ನಡೆಯದಂತೆ ನೋಡಿಕೊಳ್ಳವುದು ಪ್ರತಿಯೋರ್ವ ನಾಗರಿಕನ ಕರ್ತವ್ಯ. ಕಣ್ಗಾವಲು ತಂಡದಲ್ಲಿ ಅರಣ್ಯ ಪರಿಸರದ ಸ್ಥಳೀಯರನ್ನು ಸೇರಿಸಿಕೊಂಡಲ್ಲಿ ಕಾಡ್ಗಿಚ್ಚಿನಂತಹ ಅನಾಹುತ ತಡೆಯಲು ಸುಲಭ ಸಾಧ್ಯವಾಗುತ್ತದೆ.
-ಶ್ರೀಧರ್‌ ಗೌಡ,
ಅಧ್ಯಕ್ಷರು, ಅರಣ್ಯ ಹಕ್ಕು ಸಮಿತಿ ಈದು

ಸೀಮಿತವಲ್ಲ
ಅರಣ್ಯ ಸೇರಿದಂತೆ ವನ್ಯಜೀವಿಗಳ ಸಂರಕ್ಷಣೆ ಕೇವಲ ಇಲಾಖೆಗೆ ಸೀಮಿತವಲ್ಲ, ಯಾವುದೇ ಕಾರಣಕ್ಕೂ ಅರಣ್ಯದೊಳಗೆ ಬೆಂಕಿ ಸಂಬಂಧಿತ ವಸ್ತುಗಳನ್ನು ಕೊಂಡೊಯ್ಯಬಾರದು.
-ಕೌಶಿಕ್‌, ವಿದ್ಯಾರ್ಥಿ

ಜಗದೀಶ್‌ ಅಜೆಕಾರು

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.