ವಯಸ್ಕರಿಗೆ ಕ್ಯಾನ್ಸರ್‌ ಪತ್ತೆ ಪರೀಕ್ಷೆ ಅಗತ್ಯ


Team Udayavani, Feb 4, 2020, 3:06 AM IST

vayaskarige

ಬೆಂಗಳೂರು: ಕ್ಯಾನ್ಸರ್‌ ಮುಕ್ತ ಸಮಾಜ ನಿರ್ಮಾಣಕ್ಕೆ ಶೀಘ್ರ ರೋಗ ಪತ್ತೆ ಅತ್ಯಾವಶ್ಯಕವಾಗಿದ್ದು, ವಯಸ್ಕರು ಪ್ರತಿ ವರ್ಷ ಕ್ಯಾನ್ಸರ್‌ ಪತ್ತೆ ಪರೀಕ್ಷೆಗಳಿಗೆ ಒಳಗಾಗಬೇಕು ಎಂದು ಮಣಿಪಾಲ್‌ ಆಸ್ಪತ್ರೆಯ ಕ್ಯಾನ್ಸರ್‌ ವಿಭಾಗದ ಮುಖ್ಯಸ್ಥ ಡಾ.ಪಿ.ಎಸ್‌. ಸೋಮಶೇಖರ್‌ ತಿಳಿಸಿದರು.

ವಿಶ್ವ ಕ್ಯಾನ್ಸರ್‌ ದಿನ ಹಿನ್ನೆಲೆ ಸೋಮವಾರ ಮಣಿಪಾಲ್‌ ಆಸ್ಪತ್ರೆ ಹಮ್ಮಿಕೊಂಡಿದ್ದ ಜಾಗೃತಿ ಹಾಗೂ ಕ್ಯಾನ್ಸರ್‌ ಮುಕ್ತ ಸಮಾಜ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ತಂತ್ರಜ್ಞಾನ ಅಭಿವೃದ್ಧಿ ಹಾಗೂ ಸಂಶೋಧನೆಗಳ ಫ‌ಲವಾಗಿ ಕ್ಯಾನ್ಸರ್‌ ಗುಣಪಡಿಸುವಂಥ ಕಾಯಿಲೆ ಪಟ್ಟಿಗೆ ಸೇರಿದೆ. ಕ್ಯಾನ್ಸರ್‌ ಮೂರನೇ ಹಂತ ಹಾಗೂ ಇತ್ತೀಚೆಗೆ ನಾಲ್ಕನೇ ಹಂತ ತಲುಪಿದಾಗಲು ಉತ್ತಮ ಚಿಕಿತ್ಸೆಯಿಂದ ಕ್ಯಾನ್ಸರ್‌ ಗುಣವಾಗಿದೆ.

ವ್ಯಕ್ತಿಯಲ್ಲಿ ರೋಗ ಶೀಘ್ರ ಪತ್ತೆಯಾದಷ್ಟು ಹಾನಿ ಕಡಿಮೆ. ಹೀಗಾಗಿ, ವಯಸ್ಕರು ಉತ್ತಮ ಭವಿಷ್ಯಕ್ಕಾಗಿ ಪ್ರತಿ ವರ್ಷ ತಮ್ಮ ಅಥವಾ ತಮ್ಮ ಪ್ರೀತಿ ಪಾತ್ರರ ಹುಟ್ಟುಹಬ್ಬ ಸಂದರ್ಭದಲ್ಲಿ ಕ್ಯಾನ್ಸರ್‌ ಪತ್ತೆ ಪರೀಕ್ಷೆಗೆ ಮಾಡಿಸಬೇಕು. 2 ರಿಂದ 3 ಸಾವಿರದಲ್ಲಿ ಕ್ಯಾನ್ಸರ್‌ ಪತ್ತೆ ಪರೀಕ್ಷೆ ಪ್ಯಾಕೇಜ್‌ಗಳು ಎಲ್ಲಾ ಆಸ್ಪತ್ರೆಗಳಲ್ಲಿ ಲಭ್ಯವಿದೆ ಎಂದು ತಿಳಿಸಿದರು.

ಕ್ಯಾನ್ಸರ್‌ ರೋಗ ಪ್ರಾಥಮಿಕವಾಗಿ ವಂಶವಾಹಿ ಮತ್ತು ಪರಿಸರ ಸಂಬಂಧಿ ಅಂಶಗಳಿಂದ ಉಂಟಾ ಗುತ್ತದೆ. ದೇಹದ ಯಾವುದೇ ಭಾಗದ ಮೇಲೆ ಪರಿ ಣಾಮ ಬೀರಬಲ್ಲದು. ರಾಷ್ಟ್ರೀಯ ಕ್ಯಾನ್ಸರ್‌ ತಡೆಯುವ ಮತ್ತು ಸಂಶೋಧನಾ ಸಂಸ್ಥೆ(ಎನ್‌ಐಸಿಪಿಆರ್‌) ಪ್ರಕಾರ ಸುಮಾರು 2.25 ದಶಲಕ್ಷ ಜನರು ಕ್ಯಾನ್ಸರ್‌ ಜತೆಗೆ ಬದುಕುತ್ತಿದ್ದಾರೆ. ಆಧುನಿಕ ಜೀವನ ಶೈಲಿಯಿಂದ ಹೆಣ್ಣುಮಕ್ಕಳಲ್ಲಿ ಸ್ತನ ಕ್ಯಾನ್ಸರ್‌ ಹಾಗೂ ಗರ್ಭಕೋಶ ಕ್ಯಾನ್ಸರ್‌ ಹೆಚ್ಚಾಗುತ್ತಿದೆ. ಬೆಂಗಳೂರಿಗರಲ್ಲಿ ಸ್ತನ ಕ್ಯಾನ್ಸರ್‌ಗೆ ತುತ್ತಾಗುತ್ತಿರುವ ಪ್ರಮಾಣ ದುಪಟ್ಟಾಗಿದೆ.

ಕ್ಯಾನ್ಸರ್‌ ರೋಗಿಗಳ ಪೈಕಿ ಶೇ.40ಕ್ಕೂ ಹೆಚ್ಚು ಮಂದಿ ನಾಲ್ಕನೇ ಹಂತ ತಲುಪಿದಾಗ ಆಸ್ಪತ್ರೆಗೆ ಬರುತ್ತಿದ್ದಾರೆ. ಇನ್ನು ಕ್ಯಾನ್ಸರ್‌ ಎದುರಿಸು ಜೀವನ ಶೈಲಿ ಬದಲಾವಣೆ, ನಿರಂತರ ಕ್ಯಾನ್ಸರ್‌ ಪತ್ತೆ ಪರೀಕ್ಷೆ ಅತ್ಯಗತ್ಯವಾಗಿದೆ ಎಂದರು.

ಅತ್ಯಾಧುನಿಕ ಹೈಪರ್‌ಥರ್ಮಿಕ್‌ ಇಂಟ್ರಾ ಪೆರಿಟೋನಿಯಲ್‌ ಕಿಮೋಥೆರಪಿ(ಎಚ್‌ಐಪಿಇಸಿ) ಬಳಸಿಕೊಂಡು ಸುಮಾರು 350ಕ್ಕೂ ಹೆಚ್ಚಿನ ಪ್ರಕರಣಗಳಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ. ಎಚ್‌ಐಪಿಇಸಿ ಚಿಕಿತ್ಸೆಯಲ್ಲಿ ರೋಗ ಗುಣಮುಖ ಪ್ರಮಾಣ ಶೇ.70ರಷ್ಟಿದೆ. ಹೀಗಾಗಿಯೇ ಆಗ್ನೇಯ ಏಷ್ಯಾದಲ್ಲಿಯೇ ಅತ್ಯಂತ ಹೆಚ್ಚು ಶಿಫಾರಸ್ಸು ಮಣಿಪಾಲ್‌ ಆಸ್ಪತ್ರೆಗೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ನಟಿ ಗಾನವಿ ಲಕ್ಷ್ಮಣ್‌ ಮಾತನಾಡಿ, ಕ್ಯಾನ್ಸರ್‌ ನಿಜಕ್ಕೂ ಮಾರಕ ಮತ್ತು ಬಹಳ ನೋವುಂಟು ಮಾಡುವ ರೋಗವಾಗಿದೆ. ಆದರೆ ಸಕಾರಾತ್ಮಕ ಮನೋಭಾವ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದರೊಂದಿಗೆ ಕ್ಯಾನ್ಸರ್‌ ಜಯಿಸಬ ಹುದು. ಆರೋಗ್ಯಕರ ಜೀವನಶೈಲಿ ಉಳಿಸಿಕೊಳ್ಳುವುದು ಮತ್ತು ತಂಬಾಕು ಮತ್ತು ಮದ್ಯಪಾನಗಳನ್ನು ತಪ್ಪಿಸುವುದು ಮುಖ್ಯವಾಗಿರುತ್ತದೆ ಎಂದರು.

ಈ ವೇಳೆ ಕ್ಯಾನ್ಸರ್‌ನಿಂದ ಗುಣಮುಖರಾದವರು ತಮ್ಮ ಅನುಭವವನ್ನು ಹಂಚಿಕೊಂಡು ಮಣಿಪಾಲ್‌ ಆಸ್ಪತ್ರೆ ವೈದ್ಯರಿಗೆ ಧನ್ಯವಾದ ತಿಳಿಸಿದರು. ನಂತರ ಮಣಿಪಾಲ್‌ ಆಸ್ಪತ್ರೆ ಕ್ಯಾನ್ಸರ್‌ ಕೇಂದ್ರದ ವೈದ್ಯರು ಸಿಬ್ಬಂದಿಗಳು ” ವಿಶ್ವ ಕ್ಯಾನ್ಸರ್‌ ದಿನ’ ಅಂಗವಾಗಿ ಕ್ಯಾನ್ಸರ್‌ ಮುಕ್ತ ಭವಿಷ್ಯಕ್ಕಾಗಿ ಪ್ರತಿಜ್ಞೆ ಕೈಗೊಂಡರು.

ಬಡವರಿಗೂ ಸಹಾಯ ಹಸ್ತ: ಮಣಿಪಾಲ್‌ ಆಸ್ಪತ್ರೆಯ ಚೇರ್ಮನ್‌ ಡಾ. ಸುದರ್ಶನ್‌ ಬಲ್ಲಾಳ್‌ ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ಕ್ಯಾನ್ಸರ್‌ ರೋಗಿಗಳ ನೆರವಿಗೆ ಮಣಿಪಾಲ್‌ ಆಸ್ಪತ್ರೆಯಲ್ಲಿ ತಂಡ ರಚಿಸಲಾಗಿದೆ. ಈ ತಂಡವು ಆರ್ಥಿಕವಾಗಿ ಹಿಂದುಳಿದವರಿಗೆ ಆಸ್ಪತ್ರೆಯ ವಿವಿಧ ಯೋಜನೆಗಳಲ್ಲಿ ಲಭ್ಯವಾಗುವ ಸಹಾಯಧನ ಕುರಿತು ಮಾಹಿತಿ ನೀಡಲಿದೆ.

ಜತೆಗೆ ಕ್ಯಾನ್ಸರ್‌ ರೋಗಿಗಳಿಗೆ ನೆರವಾಗಲು ಆಸ್ಪತ್ರೆ ಸಹಾಯ ನಿಧಿ ಇದೆ. ಅಲ್ಲದೇ ಆಸ್ಪತ್ರೆ ಸಿಬ್ಬಂದಿ ಹಾಗೂ ದಾನಿಗಳ ನೆರವು ಪಡೆದು ಸಹಾಯಧನ ಸಂಗ್ರಹಿಸಿ ಸಾಧ್ಯವಾದಷ್ಟು ಸಹಾಯ ಮಾಡಲಾಗುತ್ತಿದೆ. ವಾರ್ಷಿಕ ಒಂದು ಮಗುವಿಗೆ ಉಚಿತವಾಗಿ ಮೂತ್ರಪಿಂಡ ಕಸಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.