ಖಾತ್ರಿ ಯೋಜನೆ ಸಮರ್ಪಕ ಜಾರಿಗೆ ಒತ್ತಾಯಿಸಿ ಮನವಿ
Team Udayavani, Feb 4, 2020, 1:27 PM IST
ಕುರುಗೋಡು: ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಜಾರಿ ಮಾಡುವಂತೆ ಒತ್ತಾಯಿಸಿ ತಾಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ಶನಿವಾರ ತಾಪಂ ಇಒ ಮಡಗಿನ ಬಸಪ್ಪ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಸಂಘಟನೆಯ ತಾಲೂಕು ಕಾರ್ಯದರ್ಶಿ ಗಾಳಿ ಬಸವರಾಜ ಮಾತನಾಡಿ, ಉದ್ಯೋಗ ಖಾತ್ರಿ ಕೂಲಿಯನ್ನು 750 ರೂಗೆ ಹೆಚ್ಚಿಸಬೇಕು. ಕೆಲಸದ ದಿನಗಳನ್ನು 200 ದಿನಗಳವರೆಗೆ ವಿಸ್ತರಿಸಬೇಕು. ಎಲ್ಲ ಕೂಲಿಕಾರರ ಕುಟುಂಬಗಳಿಗೆ 100 ದಿನಗಳ ಸಂಪೂರ್ಣ ಕೆಲಸ ನೀಡಬೇಕು. ಹಿಂದಿನಂತೆ ಮಾನವ ದಿನಗಳಿಗೆ ಶೇ. 60ರಷ್ಟು ಹಾಗೂ ಸಾಮಗ್ರಿ ವೆಚ್ಚಕ್ಕೆ ಶೇ.40 ರಷ್ಟು ಅನುಪಾತವನ್ನೇ ಜಾರಿಗೆ ತರಬೇಕು. ಇನ್ನೂ ಕೂಲಿಕಾರರಿಗೆ ಕೂಡಲೇ ಸ್ಮಾರ್ಟ್ ಕಾರ್ಡ್ ವಿತರಿಸಬೇಕು.
ಪ್ರತ್ಯೇಕ ಕೂಲಿ ಮತ್ತು ಸಲಕರಣ ಕಿಟ್ ವಿತರಿಸಬೇಕು. ಕೆರೆ ಹೂಳೆತ್ತುವ ಹಾಗೂ ಲೋಡ್ ಮಾಡುವ ಕೆಲಸಕ್ಕೆ ಪ್ರತ್ಯೇಕ ಕೂಲಿ ನೀಡಬೇಕು ಎಲ್ಲ ಗ್ರಾಪಂಗಳಲ್ಲಿ ಉದ್ಯೋಗ ಖಾತರಿ ಕೆಲಸಕ್ಕಾಗಿ ಪ್ರತ್ಯೇಕ ಕಂಪ್ಯೂಟರ್ ವ್ಯವಸ್ಥೆ ಮಾಡಬೇಕು. ಅಲ್ಲದೆ ಅಗತ್ಯ ಸಿಬ್ಬಂದಿ ನೇಮಿಸಬೇಕು. ಉದ್ಯೋಗ ಖಾತರಿ ಕೆಲಸದ ಸ್ಥಳದಲ್ಲಿ ನೀರಿನ ವ್ಯವಸ್ಥೆ ನೆರಳಿನ ವ್ಯವಸ್ಥೆ ಹಾಗೂ ಪ್ರಥಮ ಚಿಕಿತ್ಸೆ ಕಡ್ಡಾಯವಾಗಿ ವ್ಯವಸ್ಥೆಗಳನ್ನು ಮಾಡಬೇಕು ಎಂದು ಒತ್ತಾಯಿಸಿದರು. ಮನವಿ ಸ್ವೀಕರಿಸಿ ತಾಪಂ ಇಒ ಬಸಪ್ಪ ಮಾತನಾಡಿ, ಕೂಡಲೇ ಮನವಿಯನ್ನು ಸಂಬಂಧಿಸಿ ಮೇಲಧಿಕಾರಿಗಳಿಗೆ ರವಾನಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಚ್. ಸೋಮಪ್ಪ, ಎ. ಮಂಜುನಾಥ, ಎಚ್. ಕೆಂಚಪ್ಪ, ಲೋಕೇಶ, ಎಚ್. ಯಂಕಮ್ಮ, ಎಂ. ಹೂನ್ನುರ ಸೇರಿದಂತೆ ಮತ್ತಿರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
ಎಸಿ ಗ್ಯಾಸ್ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ
HDK ಹೇಳುತ್ತಿದ್ದದ್ದು ಪ್ರಜ್ವಲ್ ಪೆನ್ಡ್ರೈವ್ ಇರಬೇಕು: ಜಮೀರ್
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
MUST WATCH
ಹೊಸ ಸೇರ್ಪಡೆ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ