ಸರಣಿ ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿದ ಬಿಜೆಪಿ ಶಾಸಕ ಮಾಮನಿ
Team Udayavani, Feb 4, 2020, 5:56 PM IST
ಬೆಂಗಳೂರು : ಸಚಿವಸ್ಥಾನಕ್ಕಾಗಿ ಬಿಜೆಪಿ ನಾಯಕರಲ್ಲಿ ಅಸಮಾಧಾನ ಬುಗಿಲೇಳುತ್ತಿರುವ ಬೆನ್ನಲ್ಲೇ ಉಪಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನೀಡಿ, ಮೂಲ ಬಿಜೆಪಿಗರನ್ನು ಕಡೆಗಣಿಸುತ್ತಿರುವ ಬಗ್ಗೆ ಸವದತ್ತಿ ಯಲ್ಲಮ್ಮ ಕ್ಷೇತ್ರದ ಬಿಜೆಪಿ ಶಾಸಕ ಆನಂದ ಸಿ. ಮಾಮನಿ ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.
ಸರಣಿ ಟ್ವೀಟ್ ಮಾಡುವ ಮೂಲಕ ಮೂಲ ಬಿಜೆಪಿಗರನ್ನು ಕಡೆಗಣಿಸಬೇಡಿ. ನಮ್ಮನ್ನು ಬೆಳೆಸಿ ಎಂದು ವರಿಷ್ಠರಲ್ಲಿ ಕೋರಿಕೊಂಡಿದ್ದಾರೆ.
ಹೊಸದಾಗಿ ಪಕ್ಷಕ್ಕೆ ಸೇರಿ ಮಂತ್ರಿಯಾಗುವವರೆದುರಿಗೆ, ಪಕ್ಷಕ್ಕೆ ಅಡಿಪಾಯ ಹಾಕಿ, ಕಟ್ಟಿ, ನಿಷ್ಠಾವಂತರಾಗಿ ದುಡಿದು ಸಾಕಷ್ಟು ಬಾರಿ ಶಾಸಕರಾದವರು ಲೆಕ್ಕಕ್ಕಿಲ್ಲ. ಪಕ್ಷದ ಮೇಲಿಟ್ಟಿರುವ ಕ್ಷೇತ್ರದ ಜನತೆಯ ಅಮೂಲ್ಯ ಪ್ರೀತಿ, ಅಭಿಮಾನಕ್ಕೂ ಪಕ್ಷದಲ್ಲಿ ಬೆಲೆ ಇಲ್ಲದಾಯಿತೇ?ಆಟಕ್ಕುಂಟು ಲೆಕ್ಕಕ್ಕಿಲ್ಲ ಇದೇನು ವಿಪರ್ಯಾಸವೇ, ಕಟು ಸತ್ಯವೇ? ಈಗ ಸ್ಪಷ್ಟ ಹೇಳುವುದಿಷ್ಟೇ, ಕಾಲಾಯ ತಸ್ಮೈ ನಮಃ.
ಇನ್ನಾದ್ರು ನನ್ನ ಕ್ಷೇತ್ರವನ್ನು ಹಾಗೂ ನಮ್ಮಂತರವನ್ನು ಬೆಳೆಸಲು ಈಗಾಗಲೇ ಸಾಕಷ್ಟು ಬಾರಿ ಇಲ್ಲಿಯವರಿಗೆ ಸರ್ಕಾರದಲ್ಲಿ ಅಧಿಕಾರ ಅನುಭವಿಸಿದವರು ಯಾವತ್ತು ತಾವು ಪಡೆದ ಸ್ಥಾನಮಾನವನ್ನು ಕಿಂಚಿತ್ತು ತ್ಯೆಜಿಸಲು ಹಿಂದೇಟು ಹಾಕುತ್ತಿರುವುದು ಒಂದೆಡೆಯಾದರೆ, ಪಕ್ಷದ ಮುಖಂಡರೂ ಸಹ ನನ್ನ ಕ್ಷೇತ್ರವನ್ನು ಹಾಗೂ ನಮ್ಮಂಥವರನ್ನುಇ ಬೆಳೆಸಲು ಯಾವುದೇ ಆಸಕ್ತಿ ತೋರಿಸದಿರುವುದು ಇನ್ನೊಂದೆಡೆ. ಇನ್ನು ಮೇಲೆ ಪಕ್ಷ ನಿಷ್ಠರಿಗೆ ಕಾಲವಿಲ್ಲವೇ ಎಂಬುದು ಯಕ್ಷಪ್ರಶ್ನೆ.
ಇದು ಪಕ್ಷ ನಿಷ್ಠರಿಗೆ ಹಾಗೂ ಮತದಾರರಿಗೆ ಆದಾ ಘೋರ ಅಪಮಾನ ಅಲ್ಲದೆ, ಇನ್ನೇನು ಎಂಬ ವಿಷಯ ಎಲ್ಲರಿಗೂ ಸ್ಪಷ್ಟ ಮೂಡಿದೆ. ಕಾಯ್ದು ನೋಡಬೇಕು. ಆದರೆ, ಮುಂದಿನ ನಡೆ ವಿಚಾರ ಮಾಡುವಂತದ್ದು ಎಂದು ಸರಣಿ ಟ್ವೀಟ್ ಮೂಲಕ ಪಕ್ಷದ ವರಿಷ್ಠರ ವಿರುದ್ಧವೇ ಹರಿಹಾಯ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
MUST WATCH
ಹೊಸ ಸೇರ್ಪಡೆ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ