ಕೊಟ್ಟಿರುವ ಖಾತೆಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದೇನೆ : ಸಿ.ಟಿ.ರವಿ
Team Udayavani, Feb 4, 2020, 7:21 PM IST
ಬೆಂಗಳೂರು : ಕೊಟ್ಟಿರುವ ಖಾತೆಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದೇನೆ. ನಾನು ತ್ಯಾಗಿಯೂ ಅಲ್ಲ, ಪರಮ ಸ್ವಾರ್ಥದ ರಾಜಕಾರಣಿಯೂ ಅಲ್ಲ. ತತ್ವನಿಷ್ಠ ರಾಜಕಾರಣಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಸಂಬಂಧ ಸುದ್ದಿಗಾರರೊಂದಿಗೆ ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೊಟ್ಟಿರುವ ಖಾತೆಯನ್ನು ಸದ್ಯ ಚೆನ್ನಾಗಿ ನಿರ್ವಹಿಸುತ್ತಿದ್ದೇನೆ. ಇದೊಂದು ರಿಲೇ ಓಟವಿದ್ದಂತೆ ಎಂದು ವಿಶ್ಲೇಷಿಸಿದರು.
ಇಲ್ಲಿ ಎದುರಾಗಿಳು ಮಾತ್ರವಲ್ಲ. ಎಡ-ಬಲದ ನಡುವೆಯೂ ಹೋರಾಟ ಮಾಡಬೇಕಾಗುತ್ತದೆ. ಕಷ್ಟದ ಸಂದರ್ಭದಲ್ಲಿ ಸತ್ವದ ಪರೀಕ್ಷೆಯಾಗುತ್ತದೆ. ಅದನ್ನು ಎದುರಿಸುತ್ತಿದ್ದೇನೆ. ಸಚಿವಸ್ಥಾನ ಸಿಗದೇ ಇದ್ದಾಗ ಎಲ್ಲಿ ಅಸಮಾಧಾನ ವ್ಯಕ್ತಪಡಿಸಬೇಕೋ ಅಲ್ಲಿ ವ್ಯಕ್ತಪಡಿಸಿದ್ದೇನೆ. ತತ್ವ, ನಿಷ್ಠೆಯನ್ನು ತೋರಿಸಿದ್ದೇನೆ ಎಂದು ಹೇಳಿದರು.
ಸಚಿವಾಕಾಂಕ್ಷಿಗಳ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ. ಅವರ ಭಾವನೆ ಅರ್ಥವಾಗುತ್ತದೆ. ಅವರ ಬಗ್ಗೆ ಸಹನಭೂತಿಯೂ ಇದೆ. ಮುಖ್ಯಮಂತ್ರಿಯವರೇ ಈ ಸಂಬಂಧ ಎಲ್ಲ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!