ಗಣಿ ಸಂಗ್ರಹ ಹಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ


Team Udayavani, Feb 5, 2020, 3:08 AM IST

gani-sangraha

ಕೊಪ್ಪಳ: ಕಲ್ಯಾಣ ಕರ್ನಾಟಕ ಭಾಗದಲ್ಲಿನ ಕೊಪ್ಪಳ ಭಾಗದ ಅಭ್ಯರ್ಥಿಗಳು ಭಾರತ ಸರ್ಕಾರ ಹಾಗೂ ಕರ್ನಾಟಕ ಸರ್ಕಾರದ ಆಡಳಿತಾತ್ಮಕ ಸೇವೆಗೆ ಆಯ್ಕೆಯಾಗುವಂತೆ ಮಾಡಲು ಜಿಲ್ಲಾಡಳಿತ ವಿಶೇಷ ಕಾಳಜಿ ವಹಿಸಿದೆ. ಈ ಮೂಲಕ, ಗಣಿಬಾ ಧಿತ ಧನದಲ್ಲಿ ಪ್ರತಿಭಾವಂತರಿಗೆ ದೆಹಲಿ, ಬೆಂಗಳೂರಿನಲ್ಲಿ ಐಎಎಸ್‌, ಕೆಎಎಸ್‌ ತರಬೇತಿ ಕೊಡಿಸಲು ಸಿದ್ಧತೆ ನಡೆಸಿದ್ದು ಕೊಪ್ಪಳ ಜಿಲ್ಲೆಯ ಅಭ್ಯರ್ಥಿಗಳೇ ಆಯ್ಕೆ ಆಗಬೇಕೆನ್ನುವುದು ಜಿಲ್ಲಾಡಳಿತದ ಬಹುಮುಖ್ಯ ಉದ್ದೇಶ.

ಕೊಪ್ಪಳ ಜಿಲ್ಲೆ ಶೈಕ್ಷಣಿಕವಾಗಿ ಇತ್ತೀಚಿನ ದಿನಗಳಲ್ಲಿ ಸುಧಾರಣೆ ಕಾಣುತ್ತಿದೆ. ಈ ಭಾಗದಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚಿಸಲು ಹಲವು ಪ್ರಯತ್ನ ನಡೆಯುತ್ತಲೇ ಇವೆ. ಆದರೆ ಈ ಭಾಗದಲ್ಲಿ ಪದವಿ ಪೂರೈಸಿದ ಅಭ್ಯರ್ಥಿಗಳಿಗೆ ಸರಿಯಾದ ಮಾರ್ಗದರ್ಶನ, ತರಬೇತಿ ಇಲ್ಲದೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ. ಹೀಗಾಗಿ ಹಲವು ಹೋರಾಟದ ಫಲವಾಗಿ ಹೈ.ಕ. ಭಾಗಕ್ಕೆ ವಿಶೇಷ 371(ಜೆ) ಮೀಸಲಾತಿ ನೀಡಿದೆ. ಮೀಸಲಾತಿಯಲ್ಲಾದರೂ ಕರ್ನಾಟಕ ಸರ್ಕಾರದ ಆಡಳಿತಾತ್ಮಕ ಸೇವೆಗೆ ಆಯ್ಕೆಯಾಗಲು ಪ್ರಸ್ತುತ ದಿನದಲ್ಲಿ ಅವಕಾಶ ದೊರೆಯುತ್ತಿವೆ.

ಸರ್ಕಾರ ಈಗಾಗಲೇ ಬಿಸಿಎಂ, ಎಸ್‌ಸಿ, ಎಸ್‌ಟಿ, ಅಲ್ಪಸಂಖ್ಯಾತರ ನಿಗಮಗಳ ಮೂಲಕ ಅರ್ಹ ಅಭ್ಯರ್ಥಿಗಳಿಗೆ ಐಎಎಸ್‌-ಕೆಎಎಸ್‌ ತರಬೇತಿ ಕೊಡಿಸುವ ಕೆಲಸ ಮಾಡುತ್ತಿದೆ. ಸರ್ಕಾರದ ಧನ ಸಹಾಯದಲ್ಲಿ ಕಡಿಮೆ ಅಭ್ಯರ್ಥಿಗಳು ಆಯ್ಕೆಯಾಗುತ್ತಿದ್ದಾರೆ. ಆದರೆ ಹಲವು ದಾಖಲೆ ಸಲ್ಲಿಸಬೇಕಾಗುತ್ತಿದೆ. ಇದೆಲ್ಲವನ್ನೂ ಅವಲೋಕಿಸಿರುವ ಕೊಪ್ಪಳ ಜಿಲ್ಲಾಧಿಕಾರಿ ಸುನೀಲ್‌ ಕುಮಾರ ಅವರು ಜಿಲ್ಲೆಯ ಪ್ರತಿಭಾವಂತ ಅಭ್ಯರ್ಥಿಗಳನ್ನು ಗುರುತಿಸಿ, ಐಎಎಸ್‌ಗೆ ದೆಹಲಿಯಲ್ಲಿ, ಕೆಎಎಸ್‌ಗೆ ಬೆಂಗಳೂರು ಹಾಗೂ ಹುಬ್ಬಳ್ಳಿ-ಧಾರವಾಡದಲ್ಲಿ ಸೂಕ್ತ ಮಾರ್ಗದರ್ಶನ, ತರಬೇತಿ ಕೊಡಿಸಲು ಚಿಂತನೆ ನಡೆಸಿ ರೂಪುರೇಷೆ ಸಿದ್ಧಪಡಿಸಿದ್ದಾರೆ.

ಧನ ಮೀಸಲು: ಜಿಲ್ಲೆಯಲ್ಲಿ ಪ್ರತಿ ವರ್ಷ ಮರ ಸಾಗಾಟ, ಮರಳು ಸಾಗಾಟ ಹಾಗೂ ಕಲ್ಲು ಗಣಿಗಾರಿಕೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ರಾಯಲ್ಟಿ ಪಡೆಯುತ್ತದೆ. ಈ ರಾಯಲ್ಟಿಯಲ್ಲಿಯೇ ಗಣಿ ನಡೆಸುವ ಸುತ್ತಲಿನ ಪ್ರದೇಶದಲ್ಲಿ ಕುಡಿವ ನೀರು, ರಸ್ತೆ, ಚರಂಡಿ ಸೇರಿ ಶೈಕ್ಷಣಿಕವಾಗಿ ಅಭಿವೃದ್ಧಿಗೆ ಡಿಸ್ಟಿಕ್ಟ್ ಮಿನಿರಲ್ಸ್‌ ಫಂಡ್‌ (ಡಿಎಂಎಫ್‌) ಅನುದಾನವನ್ನು ವಿನಿಯೋಗ ಮಾಡಬೇಕು. ಜಿಲ್ಲೆಯಲ್ಲಿ ಈವರೆಗೆ 40 ಕೋಟಿಗೂ ಅ ಧಿಕ ಹಣ ಸಂಗ್ರಹವಾಗಿದೆ. ಈ ಹಣದಲ್ಲಿ ನೇರವಾಗಿ ಗಣಿಬಾಧಿತ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿ ಕೆಲಸ ಮಾಡಬೇಕು.

ಇನ್ನು ಸ್ವಲ್ಪ ಹಣವನ್ನು ಪರೋಕ್ಷವಾಗಿ ಗಣಿ ಬಾಧಿ ತ ಪ್ರದೇಶದಲ್ಲಿ ಬಳಕೆ ಮಾಡಬೇಕು. ಈ ಹಣದಲ್ಲಿ ಶಾಸಕರ ಸಮ್ಮತಿ ಮೇರೆಗೆ 1 ಕೋಟಿ ಅನುದಾನ ಕಾಯ್ದಿರಿಸಿ ಜಿಲ್ಲೆಯಲ್ಲಿ ಪದವಿ ಪೂರೈಸಿದ ಆಕಾಂಕ್ಷಿತ, ಪ್ರತಿಭಾವಂತ, ಒಂದೆರಡು ಬಾರಿ ಪರೀಕ್ಷೆಯಲ್ಲಿ ಪಾಲ್ಗೊಂಡು ಸ್ವಲ್ಪದರಲ್ಲಿಯೇ ಕೈ ತಪ್ಪಿದಂತ ಅಭ್ಯರ್ಥಿಗಳನ್ನು ಜಿಲ್ಲಾಡಳಿತವೇ ವಿಶೇಷವಾಗಿ ಗುರುತಿಸಿ, ಅಂತವರಿಗೆ ಪ್ರಾಥಮಿಕ ಪರೀಕ್ಷೆ ನಡೆಸಿ ಆಯ್ಕೆ ಮಾಡಿ ತರಬೇತಿ ಕೊಡಿಸಲು ಮುಂದಾಗಿದೆ.

ಐಎಎಸ್‌ಗಾಗಿ ದೆಹಲಿಯಲ್ಲಿ ತರಬೇತಿ: ಪ್ರಸ್ತುತ ದಿನದಲ್ಲಿ ಎಲ್ಲವೂ ಸ್ಪರ್ಧಾತ್ಮಕ. ಐಎಎಸ್‌ಗೆ ದೆಹಲಿಯಲ್ಲಿ ಉತ್ತಮ ತರಬೇತಿ ನೀಡುತ್ತಿದ್ದು, ಅಲ್ಲಿಯೇ ಕೊಪ್ಪಳ ಜಿಲ್ಲೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ತರಬೇತಿಗೆ ಕಳಿಸಲು ಚಿಂತನೆ ನಡೆಸಿದೆ. ಇನ್ನು ಕೆಎಎಸ್‌ಗೆ ಪ್ರಯತ್ನ ಮಾಡುವ ಅಭ್ಯರ್ಥಿಗಳಿಗೆ ಬೆಂಗಳೂರು ಹಾಗೂ ಹುಬ್ಬಳ್ಳಿ ಧಾರವಾಡದಲ್ಲಿ ತರಬೇತಿ ಕೊಡಿಸಲು ತಯಾರಿ ನಡೆಸುತ್ತಿದೆ.

ಪ್ರತಿ ವರ್ಷವೂ 8-10 ಅಭ್ಯರ್ಥಿಗಳಿಗೆ ತರಬೇತಿಗೆ ಕಳಿಸುವ ಯೋಜನೆ ರೂಪಿಸಲಿದೆ. ಇದರೊಟ್ಟಿಗೆ ಕೊಪ್ಪಳದಲ್ಲಿಯೇ ಎಫ್‌ಡಿಎ, ಎಸ್‌ಡಿಎ ಸೇರಿದಂತೆ ಕಂದಾಯ ಇಲಾಖೆಗೆ ಸಂಬಂಧಿ ಸಿದ ಸ್ಪರ್ಧಾತ್ಮಕ ಪರೀಕ್ಷೆಗೆ ಅನ್ಯ ಜಿಲ್ಲೆಗಳ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕೊಡಿಸಲು ತಯಾರಿ ನಡೆಸಲಾಗುತ್ತಿದೆ. ಕೊಪ್ಪಳದಲ್ಲಿನ ತರಬೇತಿಗೆ ಪಿಯು ಪೂರೈಸಿದ ಯಾರು ಬೇಕಾದರೂ ಪಾಲ್ಗೊಂಡು ತರಬೇತಿ ಪಡೆಯಬಹುದಾಗಿದೆ.

ಜಿಲ್ಲೆಯ ಐಎಎಸ್‌ ಹಾಗೂ ಕೆಎಎಸ್‌ ಅಭ್ಯರ್ಥಿಗಳಿಗೆ ವಿಶೇಷ ತರಬೇತಿ ಕೊಡಿಸಲು ಸಿದ್ಧತೆ ನಡೆಸುತ್ತಿದ್ದೇವೆ. ಗಣಿಬಾಧಿ ತ ಸಂಗ್ರಹದ ಧನದಲ್ಲಿ ತರಬೇತಿ ನಡೆಯಲಿದೆ. ಜತೆಗೆ ಎಸ್‌ಡಿಎ, ಎಫ್‌ಡಿಎ ಸೇರಿ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಅಭ್ಯರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕೊಡಿಸಲಾಗುವುದು.
-ಸುನೀಲ್‌ ಕುಮಾರ, ಕೊಪ್ಪಳ ಜಿಲ್ಲಾಧಿಕಾರಿ

* ದತ್ತು ಕಮ್ಮಾರ

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.