ಅಪಪ್ರಚಾರದ ವಿರುದ್ಧ ಕಠಿನ ಕ್ರಮ: ಎಸ್ಪಿ


Team Udayavani, Feb 5, 2020, 5:11 AM IST

pro-38

ಕಾಸರಗೋಡು: ಭಾರತ ಸಹಿತ ಜಗತ್ತಿನ ವಿವಿಧ ದೇಶಗಳಲ್ಲಿ ಭೀತಿ ಸೃಷ್ಟಿಸಿರುವ ಕೊರೊನಾ ವೈರಸ್‌ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹುಸಿ ಸಂದೇಶಗಳನ್ನು ರವಾನಿಸಿ ಜನತೆಯನ್ನು ಮತ್ತಷ್ಟು ಭೀತರನ್ನಾಗಿಸುತ್ತಿರುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮುನ್ನಚ್ಚರಿಕೆ ನೀಡಿದ್ದಾರೆ.

ಅನ್ಯ ಕಾಯಿಲೆಗಳಿಂದ ಬಳಲುತ್ತಿರುವವರ ಮತ್ತು ರೋಗಿಗಳಲ್ಲದೇ ಇರುವವರ ಭಾವಚಿತ್ರ ಬಳಸಿ ಅವರಿಗೆ ಕೊರೊನಾ ತಗುಲಿದೆ ಎಂದು ತಪ್ಪು ಮಾಹಿತಿ ಸೃಷ್ಟಿಸುವ ಮತ್ತು ಅದನ್ನು ಪ್ರಸಾರ ಮಾಡುತ್ತಿರುವುದು ಪೊಲೀಸ್‌ ಇಲಾಖೆಯ ಗಮನಕ್ಕೆ ಬಂದಿದೆ. ಈ ರೀತಿಯ ಅಕ್ರಮ ನಡೆಸುವವರ ವಿರುದ್ಧ ಐಟಿ ಕಾಯಿದೆ, ಭಾರತೀಯ ದಂಡ ಸಂಹಿತೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಜತೆಗೆ ಅಂಥವರ ದೂರ ವಾಣಿಯನ್ನೂ ವಶಪಡಿಸಿಕೊಳ್ಳಲಾಗುವುದು ಎಂದು ಎಸ್‌ಪಿ ತಿಳಿಸಿದರು.

2,155 ಮಂದಿ ಮೇಲೆ ನಿಗಾ
ಚೀನದಿಂದ ಈ ವರೆಗೆ 2,239 ಮಂದಿ ಕೇರಳಕ್ಕೆ ವಾಪಸಾಗಿದ್ದಾರೆ. ಈ ಪೈಕಿ 2,155 ಮಂದಿಯನ್ನು ಮನೆಯಲ್ಲೇ ಇರಿಸಿ ಅವರ ಮೇಲೆ ತೀವ್ರ ನಿಗಾ ಇಡಲಾಗಿದೆ. 84 ಮಂದಿಯನ್ನು ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. 140 ಮಂದಿಯ ರಕ್ತ ಮಾದರಿಯನ್ನು ಲ್ಯಾಬ್‌ಗ ಕಳುಹಿಸಿಕೊಡಲಾಗಿದೆ. ಅದರಲ್ಲಿ 49 ಮಂದಿಗೆ ರೋಗ ಲಕ್ಷಣವಿಲ್ಲವೆಂದು ಖಾತರಿಪಡಿಸಲಾಗಿದೆ. ಮೂರು ಮಂದಿಯಲ್ಲಿ ರೋಗ ಲಕ್ಷಣ ಖಾತರಿಪಡಿಸಲಾಗಿದೆ. ಕಾಂಞಂಗಾಡ್‌ನ‌ಲ್ಲಿರುವ ಕಾಸರ ಗೋಡು ಜಿಲ್ಲಾ ಸರಕಾರಿ ಆಸ್ಪತ್ರೆಯ ಐಸೋಲೇಶನ್‌ ವಾರ್ಡ್‌ನಲ್ಲಿರುವ ಕಾಂಞಂಗಾಡ್‌ನ‌ ವೈದ್ಯಕೀಯ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದಲ್ಲಿ ವಿಪತ್ತು ಘೋಷಣೆ
ಕೇರಳದಲ್ಲಿ ಮೂವರಿಗೆ ಕೊರೊನಾ ಪತ್ತೆಯಾಗಿರುವುದರಿಂದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಕೇರಳ ರಾಜ್ಯ ವಿಪತ್ತು ಘೋಷಿಸಿದ್ದಾರೆ.

ಜಿಲ್ಲೆಯಲ್ಲಿ ಹೈ ಅಲರ್ಟ್‌: ಜಿಲ್ಲೆಯಾದ್ಯಂತ ಆರೋಗ್ಯ ವಲಯದಲ್ಲಿ ಗರಿಷ್ಠ ಕಟ್ಟೆಚ್ಚರ ವಹಿಸಲಾಗಿದೆ ಕೊರೊನಾ ಸೋಂಕು ಪತ್ತೆಯಾದ ಕಾಂಞಂಗಾಡು ಹಾಗೂ ಪರಿಸರದಲ್ಲಿ ಅತೀವ ಜಾಗ್ರತಾ ನಿರ್ದೇಶನ ನೀಡಲಾಗಿದೆ. ಚೀನದಿಂದ ಕಾಸರಗೋಡಿಗೆ ಆಗಮಿಸುವ ಪ್ರತೀ ವ್ಯಕ್ತಿಯ ಮೇಲೆಯೂ ಗರಿಷ್ಠ ನಿಗಾ ಇರಿಸಲಾಗಿದೆ. ಆದರೂ ಕೊರೊನಾ ವೈರಸ್‌ ಬಗ್ಗೆ ಜನರು ಯಾವುದೇ ಭಯ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.