ಗುತ್ತಿಗೆ ನೌಕರರ ಸಮಸ್ಯೆ ಬಗೆಹರಿಸಲು ಒತ್ತಾಯ


Team Udayavani, Feb 5, 2020, 3:44 PM IST

5-Febrauary-19

ಚಿತ್ರದುರ್ಗ: ಜಿಲ್ಲೆಯ ವಿವಿಧ ಆರೋಗ್ಯ ಕೇಂದ್ರಗಳಲ್ಲಿ ಡಿ ಗ್ರೂಪ್‌ ಹಾಗೂ ನಾನ್‌ ಕ್ಲಿನಿಕಲ್‌ ಕೆಲಸ ಮಾಡುತ್ತಿದ್ದ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ. ಇದರಿಂದ ನಮ್ಮ ಕುಟುಂಬ ಬೀದಿಗೆ ಬಿದ್ದಿವೆ ಎಂದು ಮಂಗಳವಾರ ಜಿಲ್ಲಾಕಾರಿ ಕಚೇರಿ ಎದುರು ಸಿಬ್ಬಂದಿ ಅಳಲು ವ್ಯಕ್ತಪಡಿಸಿದರು.

ಫೆ. 1 ರಿಂದ ಗುತ್ತಿಗೆ ನೌಕರರನ್ನು ವಜಾಗೊಳಿಸಿದ್ದೇವೆ ಎಂದು ಖಾಸಗಿ ಏಜೆನ್ಸಿಯವರು ಪತ್ರದ ಮೂಲಕ ತಿಳಿಸಿದ್ದಾರೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಅವರು ಜಿಲ್ಲಾಸ್ಪತ್ರೆಗೆ ವಾಸ್ತವ್ಯಕ್ಕಾಗಿ ಆಗಮಿಸಿದ್ದಾಗ ಮನವಿ ಸಲ್ಲಿಸಿದ್ದೆವು. ಇದಕ್ಕೆ ಸ್ಪಂದಿಸಿದ್ದ ಸಚಿವರು ಯಾರನ್ನೂ ಕೆಲಸದಿಂದ ತೆಗೆದು ಹಾಕದೆ ಮುಂದುವರೆಸಲು ಸೂಚಿಸುತ್ತೇನೆ ಎಂದಿದ್ದರು. ಆದರೆ ಮರುದಿನ ಕೆಲಸಕ್ಕೆ ಹೋದರೆ ಆದೇಶ ಪತ್ರ ತನ್ನಿ ಎನ್ನುತ್ತಿದ್ದಾರೆ ಎಂದು ದುಃಖ ತೋಡಿಕೊಂಡರು.

ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದವರನ್ನು ಮುಂದುವರಿಸಿದ್ದಾರೆ. ಆದರೆ ಇತರೆ ಆಸ್ಪತ್ರೆಗಳಲ್ಲಿರುವವರನ್ನು ಬಿಟ್ಟುಕೊಳ್ಳುತ್ತಿಲ್ಲ. 600 ರೂ.ಗಳಿಂದ 10 ಸಾವಿರ ರೂ. ವೇತನ ಸಿಗುವವರೆಗೆ ಸುಮಾರು 20 ವರ್ಷಗಳಿಂದ ಕೆಲಸ ಮಾಡುತ್ತಿದ್ದೇವೆ. ಇದನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದೇವೆ. ಈಗ ಏಕಾಏಕಿ ತೆಗೆದು ಹಾಕಿದರೆ ನಮ್ಮ ಬದುಕು ಹೇಗೆ ಎಂದು ಪ್ರಶ್ನಿಸಿದರು.

ಸಮಸ್ಯೆ ಆಲಿಸದ ಜಿಲ್ಲಾಧಿಕಾರಿ: ಕೆಲಸ ಕಳೆದುಕೊಂಡ ಸುಮಾರು 20 ಮಂದಿ ಸಿಬ್ಬಂದಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುಮಾರು ಎರಡು ತಾಸು ಜಿಲ್ಲಾಧಿಕಾರಿಗಳಿಗಾಗಿ ಕಾಯುತ್ತಿದ್ದರು. ಅಷ್ಟರಲ್ಲಿ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಉಪಾಧ್ಯಕ್ಷರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಸುಮಾರು ಒಂದು ತಾಸು ಸಭೆ ನಡೆಸಿದರು. ಇಷ್ಟೆಲ್ಲಾ ಮುಗಿಯುವವರೆಗೆ ಕಾದು ಕುಳಿತಿದ್ದವರು ಸಭೆ ಮುಗಿಸಿ ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಹೊರ ಬರುತ್ತಿದ್ದಂತೆ ಮನವಿ ಪತ್ರಗಳನ್ನು ಹಿಡಿದು ನಮ್ಮನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ, ಸಚಿವರು ಮುಂದುವರಿಸುವಂತೆ ಸೂಚಿಸಿದ್ದಾರೆ. ದಯವಿಟ್ಟು ನಮಗೆ ನ್ಯಾಯ ಕೊಡಿಸಿ ಎಂದು ಬೇಡಿಕೊಂಡರು. ಆದರೆ ಜಿಲ್ಲಾಧಿಕಾರಿ ಮಾತ್ರ ಯಾವುದನ್ನೂ ಕೇಳಿಸಿಕೊಳ್ಳದೇ ತಮ್ಮ ಕಚೇರಿಗೆ ತೆರಳಿದರು. ಇದರಿಂದ ಬೇಸರಗೊಂಡ “ಡಿ’ ಗ್ರೂಪ್‌ ಸಿಬ್ಬಂದಿಗಳು ನಮ್ಮ ನೋವನ್ನು ಯಾರ ಮುಂದೆ ಹೇಳಿಕೊಳ್ಳಬೇಕು. ಬೆಂಗಳೂರಿಗೆ ಹೋಗಿ ಪ್ರತಿಭಟಿಸುತ್ತೇವೆ ಎಂದರು.

ಹಿರಿಯೂರು ತಾಲೂಕು ಧರ್ಮಪುರ, ಮರಡಿಹಳ್ಳಿ, ಚಳ್ಳಕೆರೆ ತಾಲೂಕಿನ ಪರಶುರಾಮಪುರ, ನಾಯಕನಹಟ್ಟಿ, ಚಳ್ಳಕೆರೆ, ಮೊಳಕಾಲ್ಮೂರು ಸೇರಿದಂತೆ ವಿವಿಧ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಿದ್ದ ಸಿಬ್ಬಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.