“ಮೌನಂ’ ಹಾಡಿಗೆ ದರ್ಶನ್‌ ಸಾಥ್‌

ಫೆ.21ಕ್ಕೆ ಬಿಡುಗಡೆ

Team Udayavani, Feb 6, 2020, 7:02 AM IST

Mounam

ಕಿರುತೆರೆ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದವರ ಸಂಖ್ಯೆ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಆ ಸಾಲಿಗೆ ಈಗ “ಮೌನಂ’ ಚಿತ್ರದ ಹೀರೋ ಬಾಲಾಜಿ ಶರ್ಮ ಕೂಡ ಸೇರಿದ್ದಾರೆ. ಹೌದು, “ಅಮೃತ ವರ್ಷಿಣಿ’ ಧಾರಾವಾಹಿಯಲ್ಲಿ ಕಾಣಿಸಿಕೊಂಡಿರುವ ಬಾಲಾಜಿ ಶರ್ಮ, ಈ ಚಿತ್ರದ ಮೂಲಕ ಹೀರೋ ಆಗಿದ್ದಾರೆ. ಅವರಿಲ್ಲಿ ನಾಲ್ಕು ಶೇಡ್‌ ಇರುವ ಪಾತ್ರ ನಿರ್ವಹಿಸಿದ್ದಾರೆ. ಇದೊಂದು ಹೊಸ ಬಗೆಯ ಸಿನಿಮಾ ಆಗಿದ್ದು, ಕಾಮಿಡಿ, ರೊಮ್ಯಾನ್ಸ್‌ ಮತ್ತು ಆ್ಯಕ್ಷನ್‌ ಕೂಡ ಇದೆ ಎಂಬುದು ಅವರ ಮಾತು.

ಇನ್ನು, ನಟಿ ಮಯೂರಿ ಕೂಡ ಕಿರುತೆರೆಯಿಂದ ಬೆಳ್ಳಿತೆರೆಗೆ ಕಾಲಿಟ್ಟವರು. ಈ ಚಿತ್ರಕ್ಕೆ ಅವರು ನಾಯಕಿಯಾಗಿದ್ದು, ಕಾಲೇಜ್‌ ಹುಡುಗಿ ಪಾತ್ರ ಮಾಡಿದ್ದಾರೆ. ಅವರ ಜೀವನದಲ್ಲಿ ಒಂದು ಘಟನೆ ನಡೆಯುತ್ತೆ. ಅದು ಎಲ್ಲಿಗೋ ಕರೆದೊಯ್ಯುತ್ತೆ. ಆ ನಂತರ ಏನೆಲ್ಲಾ ನಡೆದುಹೋಗುತ್ತೆ ಎಂಬುದು ಚಿತ್ರದ ಕಥೆ. ಚಿತ್ರಕ್ಕೆ ರಾಜ್‌ ಪಂಡಿತ್‌ ನಿರ್ದೇಶಕರು. ಈ ಹಿಂದೆ “ದೇವರಿಗೆ ಪಾಠ’ ಎಂಬ ಕಿರುಚಿತ್ರ ನಿರ್ದೇಶಿಸಿದ್ದ ರಾಜ್‌ ಪಂಡಿತ್‌, ಚಿತ್ರಕಥೆ, ಸಂಭಾಷಣೆ ಜವಾಬ್ದಾರಿ ಹೊತ್ತಿದ್ದಾರೆ.

“ಮೌನಂ’ ಒಂದು ಹೊಸ ಪ್ರಯೋಗದ ಸಿನಿಮಾ ಆಗಿದ್ದು, ಶತ್ರುಗಳ ಬಗ್ಗೆ ಮಾತಾಡುವ ನಾವು, ನಮ್ಮೊಳಗೇ ಇರುವ ಇದರ ಗುಣ ತಿಳಿದಿರುವುದಿಲ್ಲ. ಕೆಲವು ವೇಳೆ ಒಳ್ಳೆಯದನ್ನು ಮಾಡಿದರೂ ಕಷ್ಟಕ್ಕೆ ಸಿಲುಕಬೇಕಾಗುತ್ತದೆ. ಅತಿ ಬುದ್ಧಿವಂತಿಕೆ ಪ್ರದರ್ಶಿಸಿದರೂ, ಬದುಕಲ್ಲಿ ನಾನಾ ರೀತಿಯ ಸಮಸ್ಯೆ ಎದುರಿಸಬೇಕಾಗುತ್ತೆ ಇಂತಹ ನೈಜ ಅಂಶಗಳನ್ನು ಚಿತ್ರದಲ್ಲಿ ಹೇಳಲಾಗಿದೆ ಎಂಬುದು ಚಿತ್ರತಂಡದ ಮಾತು.

ಚಿತ್ರದಲ್ಲಿ ಅವಿನಾಶ್‌ ನಟಿಸಿದ್ದಾರೆ. ಅವರಿಲ್ಲಿ ಕುಂಚ ಕಲಾವಿದರಾಗಿ, ಹೀರೋಗೆ ಪ್ರೀತಿಯ ಅಪ್ಪನಾಗಿ ಕಾಣಿಸಿಕೊಂಡಿದ್ದಾರೆ. ಅವರಿಗಿಲ್ಲಿ ವಿಭಿನ್ನ ಪಾತ್ರ ಸಿಕ್ಕಿರುವುದು ಖುಷಿ ಕೊಟ್ಟಿದೆಯಂತೆ. ಇನ್ನು, “ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಯನಾ ನಾಯಕಿಯ ಗೆಳತಿ ಪಾತ್ರ ಮಾಡಿದ್ದಾರೆ. ಗುಣವಂತ ಮಂಜು, ಬಲರಾಂ, ರಿತೇಶ್‌, ಹನುಮಂತೇಗೌಡ, ಜಯಲಕ್ಷೀ ಇತರರು ನಟಿಸಿದ್ದಾರೆ. ಆರವ್‌ ಋಷಿಕ್‌ ಸಂಗೀತ ನೀಡಿದ್ದಾರೆ. ಆಕಾಶ್‌ ಮೂರು ಗೀತೆ ರಚಿಸಿದ್ದಾರೆ. ಶಂಕರ್‌ ಛಾಯಾಗ್ರಹಣವಿದೆ.

ಗುರುಮೂರ್ತಿ ಹೆಗಡೆ ಸಂಕಲನ ಮಾಡಿದರೆ ಅಲ್ಟಿಮೇಟ್‌ ಶಿವು ಮತ್ತು ಕೌರವ ವೆಂಕಟೇಶ್‌ ಸಾಹಸವಿದೆ. ಬೆಂಗಳೂರು, ಚಿಕ್ಕಮಗಳೂರು ಸುತ್ತಮುತ್ತಲ ತಾಣಗಳಲ್ಲಿ ಚಿತ್ರೀಕರಿಸಲಾಗಿದೆ. ಇನ್ನು, ನಟ ಆಗಬೇಕು ಅಂದುಕೊಂಡಿದ್ದ ಶ್ರೀಹರಿ, ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಸಿಕ್ಕಿದ್ದು, ಫೆ.21ರಂದು ಬಿಡುಗಡೆಯಾಗುತ್ತಿದೆ. ಅಂದಹಾಗೆ, ಇತ್ತೀಚೆಗೆ ಚಿತ್ರದ ಹಾಡುಗಳು ಹೊರಬಂದಿದ್ದು, ನಟ ದರ್ಶನ್‌ ಆಡಿಯೋ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಕೋರಿದರು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.