ಹೊಸ ಚಿತ್ರಕ್ಕೆ ಸುದೀಪ್‌ ರೆಡಿ

ಅನೂಪ್‌ ಭಂಡಾರಿ ನಿರ್ದೇಶನದ ಚಿತ್ರ ಫೆಬ್ರವರಿಗೆ ಶುರು

Team Udayavani, Feb 6, 2020, 7:06 AM IST

Sudeep

ಸುದೀಪ್‌ ಅಭಿನಯದ “ಕೋಟಿಗೊಬ್ಬ 3′ ಚಿತ್ರ ಮುಗಿಸಿದ್ದಾರೆ. ಅತ್ತ, “ಬಿಗ್‌ಬಾಸ್‌’ ಸೀಸನ್‌-7 ರಿಯಾಲಿಟಿ ಶೋ ಕೂಡ ಮುಗಿದಿದೆ. ಸುದೀಪ್‌ ಈಗ ಮುಂದಿನ ಚಿತ್ರದತ್ತ ತಮ್ಮ ಚಿತ್ತ ಹರಿಸಿದ್ದಾರೆ. ಹೌದು, ಸುದೀಪ್‌ ಮುಂದಿನ ಸಿನಿಮಾಗೆ ತಯಾರಿ ನಡೆಸುತ್ತಿದ್ದಾರೆ. ಅಂದಹಾಗೆ, ಸುದೀಪ್‌ ಈಗ ಯಾವ ಚಿತ್ರ ಕೈಗೆತ್ತಿಕೊಳ್ಳುತ್ತಾರೆ ಎಂಬ ಪ್ರಶ್ನೆಗೆ ಉತ್ತರ ಅನೂಪ್‌ ಭಂಡಾರಿ ನಿರ್ದೇಶನದ ಚಿತ್ರ.

ಈಗಾಗಲೇ ಸುದ್ದಿಯಾಗಿರುವಂತೆ, ಜಾಕ್‌ ಮಂಜು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಈ ಚಿತ್ರ ಕೂಡ ಪ್ಯಾನ್‌ ಇಂಡಿಯಾ ಆಗಲಿದೆ. ಅಂದಹಾಗೆ, ಚಿತ್ರದಲ್ಲಿ ನಿರೂಪ್‌ ಭಂಡಾರಿ ನಟಿಸುತ್ತಿದ್ದಾರೆ ಎನ್ನುವುದು ಬಿಟ್ಟರೆ, ಚಿತ್ರದಲ್ಲಿ ಯಾರೆಲ್ಲ ಇರುತಾರೆ, ತಂತ್ರಜ್ಞರು ಯಾರ್ಯಾರು ಎಂಬ ಬಗ್ಗೆ ಅಧಿಕೃತ ಮಾಹಿತಿಯನ್ನು ಸುದೀಪ್‌ ಅವರಿಂದಲೇ ಕೇಳಬೇಕು ಎಂಬುದು ನಿರ್ದೇಶಕ ಅನೂಪ್‌ ಭಂಡಾರಿ ಮಾತು. ಈ ಕುರಿತು ಹೇಳಿಕೊಳ್ಳುವ ಅನೂಪ್‌ ಭಂಡಾರಿ, “ಚಿತ್ರಕ್ಕೆ ಎಲ್ಲಾ ತಯಾರಿ ನಡೆದಿದೆ.

ಇದೇ ಫೆಬ್ರವರಿಯಲ್ಲಿ ಚಿತ್ರೀಕರಣ ಶುರುವಾಗಲಿದೆ. ಸದ್ಯಕ್ಕೆ ಹೈದರಾಬಾದ್‌ನಲ್ಲಿ ಸೆಟ್‌ ಹಾಕಿ ಒಂದಷ್ಟು ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಉಳಿದದ್ದು ಬೇರೆ ಕಡೆ ಮಾಡುವ ಕುರಿತು ಚರ್ಚೆ ನಡೆಯುತ್ತಿದೆ. ಯಾವ ದಿನದಿಂದ ಚಿತ್ರೀಕರಣ ನಡೆಯಲಿದೆ ಎಂಬುದನ್ನು ಸುದೀಪ್‌ ಅವರ ಜೊತೆ ಚರ್ಚಿಸಿ ಪಕ್ಕಾ ಮಾಡಿಕೊಳ್ಳಲಾಗುವುದು ಸದ್ಯಕ್ಕೆ ಸ್ಕ್ರಿಪ್ಟ್ ಮುಗಿದಿದೆ. ತಾಂತ್ರಿಕ ವರ್ಗ ಸೇರಿದಂತೆ ಇನ್ನಿತರೆ ಕಲಾವಿದರ ಆಯ್ಕೆ ಬಗ್ಗೆಯೂ ಸುದೀಪ್‌ ಅವರೇ ಅನೌನ್ಸ್‌ ಮಾಡಲಿದ್ದಾರೆ.

ಈಗಾಗಲೇ ಚಿತ್ರಕ್ಕೆ “ಫ್ಯಾಂಟಮ್‌’ ಎಂಬ ಹೆಸರಿಡಲಾಗಿದೆ ಎಂಬ ಸುದ್ದಿ ಬಗ್ಗೆ ಹೇಳುವ ಅನೂಪ್‌ ಭಂಡಾರಿ, ಆ ಬಗ್ಗೆಯೂ ಸುದೀಪ್‌ ಅವರೇ ಸ್ಪಷ್ಟಪಡಿಸಲಿದ್ದಾರೆ. ಸದ್ಯಕ್ಕೆ ಚಿತ್ರದ ಮಾಹಿತಿಯನ್ನು ಅವರೇ ಹೇಳಲಿದ್ದಾರೆ. ಇನ್ನು, ನಾಯಕಿ ಸಮಂತಾ ಬರುತ್ತಾರಂತೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ. ಅದರ ಬಗ್ಗೆಯೂ ಇಷ್ಟರಲ್ಲೇ ಮಾಹಿತಿ ಕೊಡುತ್ತೇವೆ. ನಾಯಕಿ ಯಾರಾಗಬೇಕೆಂಬ ಕುರಿತು ಮಾತುಕತೆ ನಡೆಯುತ್ತಿದೆ’ ಎಂದಷ್ಟೇ ಹೇಳುತ್ತಾರೆ ಅನೂಪ್‌ ಭಂಡಾರಿ.

ಇದೇ ಮೊದಲ ಸಲ ಸುದೀಪ್‌ ಅವರಿಗೆ ನಿರ್ದೇಶನ ಮಾಡುತ್ತಿರುವ ಅನೂಪ್‌ ಭಂಡಾರಿ, ಒಳ್ಳೆಯ ಕಥೆ ರೆಡಿಮಾಡಿಕೊಂಡಿದ್ದು, ಹೊಸ ಬಗೆಯ ನಿರೂಪಣೆ ಮೂಲಕ ಸುದೀಪ್‌ ಅಭಿಮಾನಿಗಳು ಸೇರಿದಂತೆ ಕನ್ನಡದ ಬಹುತೇಕ ಸಿನಿಪ್ರೇಮಿಗಳನ್ನು ರಂಜಿಸುವ ಉದ್ದೇಶ ಇಟ್ಟುಕೊಂಡಿದ್ದಾರೆ. ಅದೇನೆ ಇರಲಿ, ಸುದೀಪ್‌ಗಾಗಿಯೇ ವಿಶೇಷ ಪಾತ್ರ ಕಟ್ಟಿಕೊಟ್ಟಿರುವ ನಿರ್ದೇಶಕರು, ಆ ಪಾತ್ರ ಹೇಗೆಲ್ಲಾ ಇರಲಿದೆ ಎಂಬುದನ್ನು ತೆರೆಯ ಮೇಲೆಯೇ ನೋಡಬೇಕು ಎನ್ನುತ್ತಾರೆ.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.