ಪ್ರಯಾಣಿಕರ ರಕ್ಷಿಸಿ ಪ್ರಾಣ ಬಿಟ್ಟ ಚಾಲಕ
Team Udayavani, Feb 6, 2020, 3:04 AM IST
ಶಿಕಾರಿಪುರ: ಬಸ್ ಚಲಾಯಿಸುತ್ತಿದ್ದಾಗಲೇ ಹೃದಯಾಘಾತಕ್ಕೊಳಗಾದ ಚಾಲಕ ಆ ಸಂದರ್ಭದಲ್ಲೂ ಸಮಯ ಪ್ರಜ್ಞೆ ಮೆರೆದು ಪ್ರಯಾಣಿಕರನ್ನು ಬಚಾವ್ ಮಾಡಿ ನಂತರ ತಾನು ಪ್ರಾಣ ಬಿಟ್ಟಿದ್ದಾನೆ. ಬುಧವಾರ ಬೆಳಗ್ಗೆ ಶಿಕಾರಿಪುರ ಸಮೀಪದ ಕೆಂಗಟ್ಟೆ ಬಳಿ ಈ ದುರ್ಘಟನೆ ಸಂಭವಿಸಿದ್ದು, ಶಿಕಾರಿಪುರ ತಾಲೂಕಿನ ಬಗನಕಟ್ಟೆಯ ಚಾಲಕ ಕುಮಾರ್ (32) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಬಸ್ನಲ್ಲಿದ್ದ ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಖಾಸಗಿ ಬಸ್ (ಕುಮದ್ವತಿ) ಶಿಕಾರಿಪುರದಿಂದ ಹೊನ್ನಾಳಿಗೆ ಹೊರಟಿತ್ತು. ಬಸ್ನಲ್ಲಿ ಸಾಕಷ್ಟು ಪ್ರಯಾಣಿಕರಿದ್ದರು. ಬಸ್ ಕೆಂಗಟ್ಟೆ ಗ್ರಾಮದ ಬಳಿ ಬರುತ್ತಿದ್ದಂತೆ ಚಾಲಕ ಕುಮಾರ್ ಹೃದಯಾಘಾತಕ್ಕೊಳಗಾಗಿದ್ದಾರೆ. ಎದೆ ನೋವು ಬರುತ್ತಿದ್ದಂತೆ ಬಸ್ನ ವೇಗ ನಿಯಂತ್ರಿಸಿ ನಿಲ್ಲಿಸಲು ಯತ್ನಿಸಿದ್ದಾರೆ.
ಅಲ್ಲದೆ ತಕ್ಷಣ ಬಸ್ನ್ನು ರಸ್ತೆ ಎಡಭಾಗಗಕ್ಕೆ ಇಳಿಸಿ ಮರಕ್ಕೆ ಡಿಕ್ಕಿಯಾಗುವಂತೆ ಮಾಡಿ ಬಸ್ ನಿಲ್ಲಿಸಿದ್ದಾರೆ. ಇದರಿಂದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ. ಚಾಲಕನ ಸಾವಿಗೆ ಬಸ್ ಚಾಲಕರು- ಮಾಲೀಕರ ಸಂಘದವರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
MUST WATCH
ಹೊಸ ಸೇರ್ಪಡೆ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ