ಸಿಎಎ ಪ್ರತಿಭಟನೆ: ಪಿ.ಎಫ್.ಐ. ಚಳುವಳಿಕಾರರಿಗೆ ಆಪ್ ಮತ್ತು ಕಾಂಗ್ರೆಸ್ ನಂಟು

ಈ ಸಂಘಟನೆಗೆ ವಿವಿಧ ಕಡೆಗಳಿಂದ ಹರಿದು ಬಂದಿದೆ ಲಕ್ಷಾಂತರ ರೂ. ಹಣ: ಇ.ಡಿ. ಮಾಹಿತಿ

Team Udayavani, Feb 6, 2020, 7:06 PM IST

CAA-Protest-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉತ್ತರಪ್ರದೇಶ ಸೇರಿದಂತೆ ದೇಶದ ಕೆಲವು ಭಾಗಗಳಲ್ಲಿ ಹಿಂಸಾಚಾರ ನಡೆಸಿರುವ ಆರೋಪವನ್ನು ಎದುರಿಸುತ್ತಿರುವ ಪಾಪ್ಯಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ.) ಸಂಘಟನೆ ಮೇಲೆ ಇದೀಗ ಹೊಸತೊಂದು ಆರೋಪ ಕೇಳಿಬಂದಿದೆ.

ಪಿ.ಎಫ್.ಐ. ಸಂಘಟನೆಯ ಚಟುವಟಿಕೆಗಳಿಗಾಗಿ ದೆಹಲಿಯ ಶಹೀನಾಬಾಗ್ ನಲ್ಲಿರುವ ಈ ಸಂಘಟನೆಯ ಪ್ರಧಾನ ಕಛೇರಿಗೆ ಲಕ್ಷಾಂತರ ರೂಪಾಯಿಗಳ ದೇಣಿಗೆ ಹರಿದುಬರುತ್ತಿದೆ ಎಂದು ಜಾರಿ ನಿರ್ದೇಶನಾಲಯದ ಅನಾಮಧೇಯ ಅಧಿಕಾರಿಯೊಬ್ಬರು ಹಿಂದೂಸ್ಥಾನ್ ಟೈಮ್ಸ್ ವೆಬ್ ಸೈಟ್ ಗೆ ಈ ಮಾಹಿತಿಯನ್ನು ನೀಡಿದ್ದಾರೆ.

ದೆಹಲಿ ಪಿ.ಎಫ್.ಐ. ಅಧ್ಯಕ್ಷ ಮಹಮ್ಮದ್ ಫರ್ವೇಝ್ ಅಹಮ್ಮದ್ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಮತ್ತು ಕಾಂಗ್ರೆಸ್ ನಾಯಕ ಉದಿತ್ ರಾಜ್ ಸಹಿತ ಹಲವರೊಂದಿಗೆ ನಿಕಟ ಸಂಪರ್ಕದಲ್ಲಿದ್ದರು ಎಂಬ ಆಘಾತಕಾರಿ ಮಾಹಿತಿಯನ್ನು ಈ ಅಧಿಕಾರಿ ಬಹಿರಂಗಗೊಳಿಸಿದ್ದಾರೆ.

ಶನಿವಾರದಂದು ಮತದಾನ ನಡೆಯಲಿರುವ ದೆಹಲಿಯಲ್ಲಿ ಬಹಿರಂಗ ಪ್ರಚಾರದ ಅಂತಿಮದಿನವಾಗಿರುವ ಇಂದು ಈ ಆಘಾತಕಾರಿ ಮಾಹಿತಿ ಬಹಿರಂಗಗೊಂಡಿದೆ.

ಫರ್ವೇಝ್ ಅಹಮ್ಮದ್ ಸಿಎಎ ವಿರೋಧಿ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಿದ್ದುದು ಮಾತ್ರವಲ್ಲದೇ ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎಂಬ ಮಾಹಿತಿ ಇದುವರೆಗಿನ ತನಿಖೆಯಿಂದ ಬಹಿರಂಗಗೊಂಡಿದೆ. ನೇರ ಭೇಟಿ, ದೂರವಾಣಿ ಸಂಪರ್ಕ ಮತ್ತು ವಾಟ್ಸ್ಯಾಪ್ ಚಾಟಿಂಗ್ ಮೂಲಕ ಇವರಿಬ್ಬರು ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದ್ದರು ಎಂಬ ಅಂಶವನ್ನೂ ಸಹ ತನಿಖೆಯ ವೇಳೆ ಕಂಡುಕೊಳ್ಳಲಾಗಿದೆ.

ಇಷ್ಟು ಮಾತ್ರವಲ್ಲದೇ ಪಿ.ಎಫ್.ಐ. ಹಾಗೂ ಇದಕ್ಕೆ ಸಂಬಂಧಿಸಿದ ವ್ಯಕ್ತಿಗಳ ಒಟ್ಟು 73 ಬ್ಯಾಂಕ್ ಖಾತೆಗಳಿಗೆ ಸುಮಾರು 120 ಕೋಟಿ ರೂಪಾಯಿಗಳಷ್ಟು ಹಣವನ್ನು ಹಾಕಲಾಗಿದೆ ಎಂಬ ಮಾಹಿತಿಯನ್ನೂ ಸಹ ಈ ಅನಾಮಧೇಯ ಇ.ಡಿ. ಅಧಿಕಾರಿ ಬಹಿರಂಗಗೊಳಿಸಿದ್ದಾರೆ.

ಮತ್ತು ಸಂಘಟನೆಗೆ ಹರಿದು ಬಂದಿರುವ ಒಟ್ಟು ಮೊತ್ತದಲ್ಲಿ ಮೂರನೇ ಒಂದರಷ್ಟನ್ನು ಶಹೀನಾಬಾಗ್ ನಲ್ಲಿರುವ ಸಂಘಟನೆಯ ಪ್ರಧಾನ ಕಛೇರಿಯಲ್ಲಿ ನಗದು ರೂಪದಲ್ಲಿ ಇರಿಸಲಾಗಿದೆ. ದೇಶದ ವಿವಿಧ ಕಡೆಗಳಿಂದ ಸಂಗ್ರಹಿಸಲಾದ ಈ ಮೊತ್ತವನ್ನು ಇಲ್ಲಿಗೆ ತಂದು ನೀಡಲಾಗುತ್ತಿತ್ತು ಎಂಬ ಗಂಭೀರ ಆರೋಪವನ್ನು ಇ.ಡಿ. ಅಧಿಕಾರಿ ಮಾಡಿದ್ದಾರೆ.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.