ಸಿಎಎ, ಎನ್ಆರ್ಸಿ ಸಂವಿಧಾನದ ವಿರೋಧಿ: ಬಿ.ಎಲ್. ಶಂಕರ್
Team Udayavani, Feb 7, 2020, 12:21 AM IST
ಮಂಗಳೂರು: ಜಾತಿ, ಮತ, ಧರ್ಮದ ಮೇಲೆ ಪೌರತ್ವವನ್ನು ನಿರ್ಧರಿಸುವ ಪೌರತ್ವ ತಿದ್ದುಪಡಿ ಕಾಯ್ದೆ 2019 ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಕಾಯ್ದೆಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿವೆ ಎಂದು ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಬಿ.ಎಲ್. ಶಂಕರ್ ಹೇಳಿದರು.
ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಗುರುವಾರ ಸಿಎಎ, ಎನ್ಆರ್ಸಿ ಹಾಗೂ ಎನ್ಪಿಆರ್ ವಿರೋಧಿಸಿ ಆಯೋಜಿಸಿದ್ದ ಜಾಗೃತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಉಲ್ಲೇಖೀಸಿರುವ 6 ಸಮುದಾಯಗಳಿಗೆ ಪೌರತ್ವ ನೀಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ನಿರ್ದಿಷ್ಟವಾಗಿ ಒಂದು ಸಮುದಾಯವನ್ನು ಕೈಬಿಟ್ಟಿರುವುದನ್ನು ವಿರೋಧಿಸುತ್ತೇವೆ. ಅಕ್ರಮವಾಗಿ ದೇಶದೊಳಗೆ ನುಸುಳಿ ವಾಸಿಸುತ್ತಿದ್ದರೆ ಅವರನ್ನು ಹೊರಹಾಕಿ. ಆದರೆ ಈ ದೇಶದಲ್ಲಿ ಬದುಕು ಕಟ್ಟಿಕೊಂಡು ನ್ಯಾಯ ಬದ್ಧವಾಗಿ ವಾಸಿಸುತ್ತಿರುವವರ ಹಕ್ಕನ್ನು ಕಸಿದುಕೊಳ್ಳುವುದಕ್ಕೆ ನಮ್ಮ ವಿರೋಧ ವಿದೆ ಎಂದು ಹೇಳಿದರು.
ದೇಶಕ್ಕಾಗಿ ಹೋರಾಟ
ಪ್ರಿಯದರ್ಶಿನಿ ಯವ ಮಹಿಳಾ ಘಟಕದ ಅಧ್ಯಕ್ಷೆ ಭವ್ಯಾ ನರಸಿಂಹ ಮೂರ್ತಿ ಅವರು ಮಾತನಾಡಿ, ವಿಭಾಜಕ ನೀತಿಯ ಸಿಎಎ, ಎನ್ಆರ್ಸಿ ಹಾಗೂ ಎನ್ಪಿಆರ್ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ಹೋರಾಡುವ ಸಮಯ ಬಂದೊದಗಿದೆ. ಈ ಹೋರಾಟ ದೇಶಕೋಸ್ಕರ ನಡೆಯುವ ಹೋರಾಟ ಎಂದರು.
ದೇಶದಲ್ಲಿ ಸರಕಾರದ ವಿರುದ್ಧ ಧ್ವನಿಯೆತ್ತುತ್ತಿರುವರಲ್ಲಿ ಭಯವನ್ನು ಮೂಡಿಸುವ ಕಾರ್ಯ ನಡೆಯುತ್ತಿದೆ. ನಾಗರಿಕರ ಹಕ್ಕನ್ನು ಧಮನಿಸುವ ಕಾರ್ಯ ವ್ಯಾಪಕವಾಗಿ ನಡೆಯುತ್ತಿದೆ. ಯುವಕರನ್ನು ಪ್ರಚೋದಿಸಿ ಹಾದಿ ತಪ್ಪಿಸುವ ಕಾರ್ಯವನ್ನು ಬಿಜೆಪಿ ಮಾಡು ತ್ತಿದೆ ಎಂದು ಆರೋಪಿಸಿದರು.
ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕರಾದ ಜೆ.ಆರ್. ಲೋಬೋ, ಶಕುಂತಾಳ ಶೆಟ್ಟಿ, ಮೊದಿನ್ ಬಾವಾ, ರಾಜ್ಯಸಭಾ ಮಾಜಿ ಸದಸ್ಯ ಬಿ. ಇಬ್ರಾಹಿಂ, ಕೆಪಿಸಿಸಿ ಕಾರ್ಯದರ್ಶಿ ವಿಷ್ಣುನಾಥನ್, ಮುಖಂಡರಾದ ಕೋಡಿಜಾಲ್ ಇಬ್ರಾಹಿಂ, ಸುರೇಶ್ ಬಲ್ಲಾಳ್, ಶಶಿಧರ ಹೆಗ್ಡೆ, ಮಮತಾ ಗಟ್ಟಿ, ಶಾಲೆಟ್ ಪಿಂಟೋ, ಎಂ.ಎಸ್. ಮಹಮ್ಮದ್, ನವೀನ್ ಡಿ’ಸೋಜಾ, ವಿಶ್ವಾಸ್ದಾಸ್, ಸದಾಶಿವ ಉಳ್ಳಾಲ ಉಪಸ್ಥಿತರಿದ್ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ಸದಸ್ಯ ಹರೀಶ್ ಕುಮಾರ್ ಸ್ವಾಗತಿಸಿದರು. ಶಾಹುಲ್ ಹಮೀದ್ ನಿರೂಪಿಸಿದರು.
ಬಿಜೆಪಿಯಿಂದ ಇನ್ನೊಂದು ಆಧ್ವಾನ
ನರೇಂದ್ರ ಮೋದಿ ಸರಕಾರ ಆರ್ಬಿಐ, ಆರ್ಥಿಕ ತಜ್ಞರ ಅಭಿಪ್ರಾಯಗಳನ್ನು ಧಿಕ್ಕರಿಸಿ ದಿಢೀರ್ ಆಗಿ ರೂಪಾಯಿ ಅಪನಗದೀಕರಣ ಕ್ರಮವನ್ನು ಜಾರಿಗೆ ತಂದು ದೇಶದ 130 ಕೋಟಿ ಜನರನ್ನು ಸರತಿಸಾಲಿನಲ್ಲಿ ನಿಲ್ಲುವಂತೆ ಮಾಡಿ ಅಧ್ವಾನ ಸೃಷ್ಟಿಸಿತು.ಇದರಲ್ಲಿ ಕಪ್ಪು ಹಣ ಬಯಲಿಗೆ ಬರಲಿಲ್ಲ. ಇದೀಗ ನುಸುಳುಕೋರರಾಗಿ ದೇಶಕ್ಕೆ ಬಂದ ಕೆಲವೇ ಜನರನ್ನು ಹುಡುಕುವುದಕ್ಕೋಸ್ಕರ ದೇಶದಲ್ಲಿರುವ 130 ಕೋಟಿ ಜನರನ್ನು ತೊಂದರೆ ಸಿಲುಕಿಸುವ ಇನ್ನೊಂದು ಆಧ್ವಾನ ಮಾಡಹೊರಟಿದ್ದು ಇನ್ನೊಂದು ವ್ಯರ್ಥ ಕಸರತ್ತು ಆಗಲಿದೆ ಎಂದು ಬಿ.ಎಲ್. ಶಂಕರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ