ವ್ಯಾಪಾರ, ರಕ್ಷಣೆ ಕುರಿತು ಮಾತುಕತೆ; ಇಂದು ಶ್ರೀಲಂಕಾ ಪ್ರಧಾನಿ ರಾಜಪಕ್ಸೆ ಭಾರತಕ್ಕೆ ಭೇಟಿ
ರಾಷ್ಟ್ರಪತಿ , ಪ್ರಧಾನಿ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಎಸ್.ಜೈಶಂಕರ್ ಅವರನ್ನು ಭೇಟಿಯಾಗಲಿದ್ದಾರೆ.
Team Udayavani, Feb 7, 2020, 11:53 AM IST
ನವದೆಹಲಿ:ವ್ಯಾಪಾರ, ರಕ್ಷಣೆ ಹಾಗೂ ಸಮುದ್ರ ಸಂಬಂಧಿ ಭದ್ರತಾ ಸಹಕಾರ ಸೇರಿದಂತೆ ಹಲವು ವಿಷಯಗಳ ಕುರಿತ ಉನ್ನತ ಸಭೆ ನಡೆಸಲು ಶ್ರೀಲಂಕಾ ಪ್ರಧಾನಿ ಮಹೀಂದಾ ರಾಜಪಕ್ಸೆ ನಾಲ್ಕು ದಿನಗಳ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ.
ಶ್ರೀಲಂಕಾ ಪ್ರಧಾನಿ ಫೆ.7ರಿಂದ ನಾಲ್ಕು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಭಾರತಕ್ಕೆ ಆಗಮಿಸಲಿರುವ ರಾಷ್ಟ್ರಪತಿ ರಾಮ ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಎಸ್.ಜೈಶಂಕರ್ ಅವರನ್ನು ಭೇಟಿಯಾಗಲಿದ್ದಾರೆ.
2019ರ ನವೆಂಬರ್ ನಲ್ಲಿ ಸಹೋದರ ಗೋಟಬಯಾ ಅವರು ಶ್ರೀಲಂಕಾದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ನಂತರ ರಾಜಪಕ್ಸೆಯನ್ನು ಪ್ರಧಾನಿಯನ್ನಾಗಿ ನೇಮಕ ಮಾಡಿದ ಬಳಿಕ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ.
ಮಹೀಂದ ರಾಜಪಕ್ಸೆ ಅವರು ಇಂದು ಸಂಜೆ 5.35ಕ್ಕೆ ನವದೆಹಲಿಗೆ ಆಗಮಿಸಲಿದ್ದಾರೆ. ಬಳಿಕ ಸಚಿವ ಜೈಶಂಕರ್ ಅವರ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Covishield ಲಸಿಕೆಯಿಂದ ಮತ್ತೊಂದು ಸೈಡ್ಎಫೆಕ್ಟ್!
MUST WATCH
ಹೊಸ ಸೇರ್ಪಡೆ
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮಹಮದ್ ಜುಬೇರ್ ಉಚ್ಛಾಟನೆ
Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ
Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು
Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು