ಮತದಾರರ ಪಟ್ಟಿ ಪರಿಶೀಲನೆಯಾಗಲಿ

ಬಿಎಲ್‌ಎಗಳೊಂದಿಗೆ ನೇರ ಸಂಪರ್ಕಿಸಿತಾಂತ್ರಿಕ ತೊಂದರೆ ಗಮನಿಸಲು ಸೂಚನೆ

Team Udayavani, Feb 7, 2020, 4:15 PM IST

7-February-22

ಕಲಬುರಗಿ: ತಹಶೀಲ್ದಾರರು ಹಾಗೂ ಚುನಾವಣಾ ಕಾರ್ಯಗಳಿಗೆ ನೇಮಿಸಿದ ಅಧಿಕಾರಿಗಳು ಪ್ರತಿ ಗ್ರಾಮ ಮತ್ತು ಬೂತ್‌ಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲಿಸಬೇಕು. ಪ್ರತಿ ಬಿ.ಎಲ್‌.ಒಗಳಿಂದ ಹೊಸ ಮತದಾರರ ಹಾಗೂ ತಿದ್ದುಪಡಿ ಅರ್ಜಿಗಳ ಕುರಿತು ಮಾಹಿತಿ ಸಂಗ್ರಹಿಸಿಸಬೇಕು ಎಂದು ಪ್ರಾದೇಶಿಕ ಆಯುಕ್ತ ಹಾಗೂ ಮತದಾರರ ಪಟ್ಟಿ ವೀಕ್ಷಕ ಸುಬೋಧ ಯಾದವ ತಿಳಿಸಿದರು.

ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮತದಾರರ ಪಟ್ಟಿ ಪರಿಷ್ಕರಣೆ-2019 ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಅಧಿಕಾರಿಗಳು ಮತದಾರರ ಪಟ್ಟಿಗೆ ಸಂಬಂಧಿ ಸಿದ ತಾಲೂಕು ಬಿ.ಎಲ್‌. ಎಗಳೊಂದಿಗೆ ನೇರವಾಗಿ ಸಂಪರ್ಕವನ್ನು ಹೊಂದಬೇಕು. ನಿಗದಿತ ಸಮಯದೊಳಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು. ಆಗ ಮಾತ್ರ ಮತದಾರರ ಪಟ್ಟಿ ಸ್ವಚ್ಛ ಮತ್ತು ತ್ವರಿತವಾಗಿ ಪೂರ್ಣಗೊಳಿಸಲು ಸಾಧ್ಯ ಎಂದರು.

ಮತದಾರರ ಪಟ್ಟಿ ತಯಾರಿಕೆಗೆ ಚುನಾವಣೆ ಅಧಿಕಾರಿಗಳಿಗೆ ಹಾಗೂ ಬಿ.ಎಲ್‌.ಎಗಳಿಗೆ ಸೂಕ್ತ ತರಬೇತಿ ನೀಡಬೇಕು. ಜಿಲ್ಲೆಯಲ್ಲಿ 21.77 ಲಕ್ಷ ಮತದಾರರಿದ್ದು, ಶೇ.97ರಷ್ಟು ಮತದಾರರ ನೋಂದಣಿ ಕಾರ್ಯ ಮುಗಿದಿದೆ ಎಂದರು.

ಡಿಸಿ ಶರತ್‌ ಬಿ. ಮಾತನಾಡಿ, ಜೇವರ್ಗಿ ತಾಲೂಕಿನಲ್ಲಿ ಮೂರು, ಚಿತ್ತಾಪುರ ತಾಲೂಕಿನಲ್ಲಿ 20, ಸೇಡಂ ತಾಲೂಕಿನಲ್ಲಿ ಎರಡು, ಚಿಂಚೋಳಿ ತಾಲೂಕಿನಲ್ಲಿ 40, ಕಲಬುರಗಿ ಗ್ರಾಮೀಣ ಕ್ಷೇತ್ರದಲ್ಲಿ ಆರು, ಕಲಬುರಗಿ ದಕ್ಷಿಣ ಕ್ಷೇತ್ರದಲ್ಲಿ 612 ಮತದಾರರ ಪಟ್ಟಿ ಕುರಿತು ದೂರುಗಳು ಬಂದಿವೆ. ಕಲಬುರಗಿ ಉತ್ತರ ಕ್ಷೇತ್ರದಲ್ಲಿ 417 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ವಿವರಿಸಿದರು.

ಮೊಬೈಲ್‌ ಆಪ್‌ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನೋಂದಣಿ ಹಾಗೂ ಮತದಾರರ ಪಟ್ಟಿ ಸ್ವಯಂ ದೃಢೀಕರಣ ಮಾಡುವ ಸಂದರ್ಭದಲ್ಲಿ ತಾಂತ್ರಿಕ ತೊಂದರೆಯಿಂದ ಕೆಲವೊಮ್ಮೆ ಎರಡೆರಡು ಬಾರಿ ಅರ್ಜಿಗಳು ಸಲ್ಲಿಕೆಯಾಗಿದೆ. ಇವುಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಮತದಾರರ ಪಟ್ಟಿ ಸಿದ್ಧಪಡಿಸಬೇಕು ಎಂದು ನಿರ್ದೇಶನ ನೀಡಿದರು.

ಎಡಿ ಸಿ ಡಾ. ಶಂಕರ ವಣಿಕ್ಯಾಳ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್‌ ತುಕಾರಾಂ ಪಾಂಡ್ವೆ, ತಾಲೂಕುಗಳ ತಹಶೀಲ್ದಾರರು, ಕ್ಷೇತ್ರವಾರು ಮತದಾರರ ನೊಂದಣಾಧಿಕಾರಿ, ಸಹಾಯಕ ಮತದಾರರ ನೊಂದಣಾಧಿಕಾರಿ, ಬಿ.ಎಲ್‌.ಎ.ಗಳು ಹಾಜರಿದ್ದರು.

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.