ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಮಿತಿ 20 ಕ್ವಿಂಟಾಲ್ ಗೆ ಹೆಚ್ಚಳ: ಮುಖ್ಯಮಂತ್ರಿ ಘೋಷಣೆ
Team Udayavani, Feb 7, 2020, 5:18 PM IST
ಬೀದರ್ : ಬೆಂಬಲ ಬೆಲೆಯಲ್ಲಿ ಖರೀದಿಸುವ ತೊಗರಿ ಬೆಳೆಯ ಮಿತಿಯನ್ನು 10 ರಿಂದ 20 ಕ್ವಿಂಟಾಲ್ ಗೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಇಲ್ಲಿ ಘೋಷಿಸಿದ್ದಾರೆ.
ಬೀದರ್ ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ಪಶು ಮೇಳ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಯವರು, ಬೆಂಬಲ ಬೆಲೆಯಲ್ಲಿ ಖರೀದಿಸುವ ತೊಗರಿ ಬೆಳೆಯ ಮಿತಿಯನ್ನು ಹೆಚ್ಚಿಸುವಂತೆ ರೈತರು ಮಾಡಿಕೊಂಡಿರುವ ಮನವಿಯನ್ನು ಪುರಸ್ಕಿಸಿರುವ ನಮ್ಮ ಸರಕಾರ ಈ ಮಿತಿ ಹೆಚ್ಚಳದ ನಿರ್ಧಾರಕ್ಕೆ ಬಂದಿದೆ ಎಂದರು.
ಈ ಮೂಲಕ ನಾಡಿನ ರೈತರ ಹಿತರಕ್ಷಣೆಗೆ ಹಾಗೂ ಆದಾಯ ಹೆಚ್ಚಳಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂಬುದನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪುನರುಚ್ಚರಿಸಿದರು. ಈ ಮಿತಿಯನ್ನು 20 ಕ್ವಿಂಟಾಲ್ ಗಳಿಗೆ ಹೆಚ್ಚಿಸಲು ಕೂಡಲೇ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಮುಖ್ಯಮಂತ್ರಿಗಳ ನಿರ್ಧಾರಕ್ಕೆ ಹರ್ಷ ವ್ಯಕ್ತಪಡಿಸಿದ ರೈತ ಮುಖಂಡರು ಸ್ಥಳದಲ್ಲೇ ಮುಖ್ಯಮಂತ್ರಿಗಳನ್ನು ಸಮ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ