ಮೂಲ ಸೌಲಭ್ಯವಿಲ್ಲದೆ ನಿತ್ಯ ನರಕಯಾತನೆ!

ಉದ್ಘಾಟನೆ ಭಾಗ್ಯ ಕಾಣದ ನೂತನ ವಸತಿ ನಿಲಯ ಬಾಡಿಗೆ ಕಟ್ಟಡದಲ್ಲಿಲ್ಲ ಮೂಲ ಸೌಕರ್ಯ

Team Udayavani, Feb 9, 2020, 12:38 PM IST

09-February-09

ಕುರುಗೋಡು: ಸೊಳ್ಳೆಗಳ ಕಾಟ… ಜನ ಜಂಗುಳಿಯ ಜಂಜಾಟ…ವಾಸ್ತವ್ಯ ಹೂಡುವುದೇ ವರ್ಷ ಪೂರ್ತಿ ಪೀಕ ಲಾಟ… ಇದು ಪಟ್ಟಣ ಸಮೀಪದ ಮಣ್ಣೂರು-ಸೂಗೂರು ಗ್ರಾಮದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಬಾಲಕರ ವಿದ್ಯಾರ್ಥಿಗಳ ನಿಲಯದ ದುಸ್ಥಿತಿ!

ಮಣ್ಣೂರು ಸೂಗೂರು ಗ್ರಾಮಕ್ಕೆ 2013-14ನೇ ಸಾಲಿನಲ್ಲಿ ಶಾಸಕರಾಗಿದ್ದ ಸೋಮಲಿಂಗಪ್ಪ ಅವರ ಅಧಿಕಾರಾವಧಿಯಲ್ಲಿ ಹಿಂದುಳಿದ ವರ್ಗಗಳ ಮಕ್ಕಳ ವಿದ್ಯಾಭ್ಯಾಸದ ಪ್ರಗತಿಗಾಗಿಯೇ ವಸತಿ ನಿಲಯವನ್ನು ಮಂಜೂರು ಮಾಡಲಾಗಿತ್ತು. ಆದರೆ ವಸತಿನಿಲಯಕ್ಕೆ ಮೂಲ ಸೌಲಭ್ಯ ವಿಲ್ಲದೇ, ಸ್ವಂತ ಕಟ್ಟಡವಿಲ್ಲದೆ ಅಂದಿನಿಂದ ಇಂದಿನವರೆಗೂ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ. ಈ ವಸತಿ ನಿಲಯದಲ್ಲಿ ಎ. ಸೂಗೂರು, ಮಣ್ಣೂರು, ನಡವಿ, ರುದ್ರಪಾದ, ಇಟಗಿ, ದೊಡ್ಡರಾಜ ಕ್ಯಾಂಪ್‌, ಎಮ್ಮಿಗನೂರು, ನೆಲ್ಲೂಡಿ, ಸಿರಿಗೇರಿ, ಮುದ್ದಟನೂರು, ಉಡೆಗೋಳ ಸೇರಿದಂತೆ ಇತರೆ ಹಳ್ಳಿಗಳ 5ನೇ ತರಗತಿಯಿಂದ 10ನೇ ತರಗತಿಯ 50 ವಿದ್ಯಾರ್ಥಿಗಳು ಈ ವಸತಿ ನಿಲಯದಲ್ಲಿದ್ದಾರೆ. ಇಲ್ಲಿ ಮಲಗಲು ಹಾಗೂ ಕಚೇರಿ ಕೆಲಸ ಹೊರತುಪಡಿಸಿ ಯಾವುದೇ ರೀತಿಯ ಮೂಲಭೂತ ಸೌಲಭ್ಯ ಕಾಣದೆ ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಏನೇನು ಸಮಸ್ಯೆ?: ಸರಿಯಾದ ಶೌಚಾಲಯದ ವ್ಯವಸ್ಥೆ ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಶೌಚಾಲಯಕ್ಕೆ ಬಯಲು ಬಹಿರ್ದೆಸೆಯನ್ನೇ ಅವಲಂಬಿಸಬೇಕಾಗಿದೆ. ಬಟ್ಟೆ ಒಗೆದುಕೊಳ್ಳುವುದಕ್ಕೆ ಹಾಗೂ ಸ್ನಾನ ಮಾಡುವುದಕ್ಕೂ ಅನುಕೂಲತೆ ಇಲ್ಲದಾಗಿದೆ. ನೆಲದ ಮೇಲೆಯೇ ಮಲಗಬೇಕಾದ ಅನಿವಾರ್ಯತೆಯಿದೆ. ವಸತಿ ನಿಲಯದ ಮುಂಭಾಗದಲ್ಲಿ ಚರಂಡಿ ನೀರು ಹರಿಯುತ್ತಿದ್ದು ವಸತಿ ತುಂಬೆಲ್ಲಾ ಗಬ್ಬುನಾತ ಹೊಡೆಯುತ್ತದೆ. ಶಾಲೆ ಮುಗಿದ ನಂತರ ಆಟವಾಡುವುದಕ್ಕೆ ಮೈದಾನವಿಲ್ಲ ಎಂಬುದು ವಿದ್ಯಾರ್ಥಿಗಳ ಅಳಲು.

ರೋಗ ಉಲ್ಬಣ: ಶೌಚಾಲಯದ ಕೊರತೆ ಎದುರಿಸುತ್ತಿರುವ ವಿದ್ಯಾರ್ಥಿಗಳು ಬಯಲು ಬಹಿರ್ದೆಸೆ ಮಾಡಿ ನಾನಾ ರೋಗಗಳಿಗೆ ತುತ್ತಾಗುವ ಸನ್ನಿವೇಶ ನಿರ್ಮಾಣವಾಗಿದೆ. ಕಲುಷಿತ ನೀರಿನಿಂದಾಗಿ ಸೊಳ್ಳೆಗಳ ಹಾವಳಿ ಹೆಚ್ಚಾಗಿವೆ ಎನ್ನುತ್ತಾರೆ ವಿದ್ಯಾರ್ಥಿಗಳು. ಇನ್ನೂ ಗ್ರಾಮದ ಮುಖ್ಯ ರಸ್ತೆಬಳಿಯಲ್ಲಿ ವಸತಿ ನಿಲಯದ ಇರುವುದರಿಂದ ಹಗಲು-ರಾತ್ರಿ ತಿರುಗಾಡುವ ಜನಜಂಗುಳಿ ಮತ್ತು ವಾಹನ ಗಳ ಅರ್ಭಟಕ್ಕೆ ವಿದ್ಯಾರ್ಥಿಗಳು ತತ್ತರಿಸಿದ್ದಾರೆ. ಕಳೆದ ವರ್ಷ ವಿದ್ಯಾರ್ಥಿಗಳು ರಾತ್ರಿ ಊಟ ಮುಗಿಸಿ ಹೊರಗಡೆ ವಿಶ್ರಾಂತಿಗೆ ಬಂದಾಗ ವಿದ್ಯಾರ್ಥಿ ಕಾಲಿಗೆ ಹಾವು ಸುತ್ತುವರಿದು ಅಪಾಯದಿಂದ ಪಾರಾಗಿದ್ದಾನೆ. ಇನ್ನೊಮ್ಮೆ ಅಡುಗೆಯಲ್ಲಿ ಹಲ್ಲಿ ಬಿದ್ದು ವಿದ್ಯಾರ್ಥಿಗಳು ಅಸ್ವಸ್ಥರಾಗಿ ಅವರನ್ನು ರಾತ್ರೋರಾತ್ರಿ ವಿಮ್ಸ್‌ಗೆ ದಾಖಲಿಸಲಾಗಿತ್ತು ಎಂದು ವಿದ್ಯಾರ್ಥಿಗಳು ತಿಳಿಸಿದರು.

ದಿ. ಯಾಡ್ಡಿ ವೆಂಕೋಬಣ್ಣ ಶೆಟ್ಟಿ ಅವರ ಜಮೀನಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ಪೂರ್ವ ಬಾಲಕರ ನೂತನ ವಿದ್ಯಾರ್ಥಿ ನಿಲಯವು ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು ಜನವರಿ 17ರಂದು ಉದ್ಘಾಟನೆಗೊಳ್ಳಬೇಕಾಗಿದ್ದು ರದ್ದಾಗಿದೆ. ಮುಂದಿನ ದಿನಾಂಕ ಗೊತ್ತುಪಡಿಸದ್ದರಿಂದ ವಿದ್ಯಾರ್ಥಿಗಳು ಚಿಂತೆಗೀಡಾಗಿದ್ದಾರೆ.

ಈಗಾಗಲೇ ಮಣ್ಣೂರು ಸೂಗೂರು ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಡಿ.ದೇವರಾಜ ಅರಸು ವಸತಿ ನಿಲಯದ ಕಟ್ಟಡ ಉದ್ಘಾಟನೆ ಆಗಬೇಕಿತ್ತು. ಸಿರುಗುಪ್ಪದಲ್ಲಿ ನಗರಸಭೆ ಚುನಾವಣೆ ನಡೆಯುತ್ತಿರುವುದರಿಂದ ತಡೆಹಿಡಿಯಲಾಗಿದೆ. ಚುನಾವಣೆ ಮುಗಿದ ನಂತರ ಉದ್ಘಾಟನೆಗೆ ಒಂದು ಸಮಯ ನಿಗದಿ
ಮಾಡಿ ಕೂಡಲೇ ಉದ್ಘಾಟನೆ ಮಾಡುವ ವ್ಯವಸ್ಥೆ ಮಾಡುತ್ತೇನೆ.
ಎಂ.ಎಸ್‌.ಸೋಮಲಿಂಗಪ್ಪ, ಶಾಸಕ

ಹಾಸ್ಟಲ್‌ಗೆ ಸ್ವಂತ ಕಟ್ಟಡವಿಲ್ಲದ ಕಾರಣ ಬಾಡಿಗೆ ರೂಂನಲ್ಲಿದ್ದೇವೆ. ಮೂಲಭೂತ ಸಮಸ್ಯೆಗಳ ಕೊರತೆ ಇರುವುದರಿಂದ ಎಲ್ಲ ಅನಾನುಕೂಲವಾಗಿದೆ. ಗ್ರಾಮದ ಹೊರಗಡೆ ಕಟ್ಟಿರುವ ಹೊಸ ಕಟ್ಟಡ ಉದ್ಘಾಟನೆಯಾದರೆ ಎಲ್ಲ ಮಕ್ಕಳಿಗೆ ಅನುಕೂಲವಾಗಲಿದೆ.
ವಸತಿ ನಿಲಯದ ನೊಂದ ವಿದ್ಯಾರ್ಥಿ

„ಸುಧಾಕರ್‌ ಮಣ್ಣೂರು

ಟಾಪ್ ನ್ಯೂಸ್

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.