11 ಜಿಲ್ಲೆಗಳಲ್ಲಿ ಮತ್ಸ್ಯದರ್ಶಿನಿ ಕೇಂದ್ರ ಸ್ಥಾಪನೆ

ಮೀನುಗಾರಿಕೆ ಇಲಾಖೆ, ಕೆಎಫ್‌ಡಿಸಿ ನೇತೃತ್ವ ; ಮಲ್ಪೆ , ಮಂಗಳೂರಿನಿಂದ ತಾಜಾ ಮೀನು

Team Udayavani, Feb 10, 2020, 6:15 AM IST

fish-a

ಕೋಟ: ಕರಾವಳಿಯ ಸ್ವಾದಿಷ್ಟಮಯ ಮೀನಿನ ಖಾದ್ಯಗಳನ್ನು ರಾಜ್ಯದ ಇತರ ಜಿಲ್ಲೆ ಗಳ ಜನರಿಗೂ ಅತ್ಯಂತ ಕಡಿಮೆ ಬೆಲೆಯಲ್ಲಿ ಉಣ ಬಡಿಸುವ ಉದ್ದೇಶದಿಂದ ರಾಜ್ಯ ಸರಕಾರದ ಮೀನು ಗಾರಿಕೆ ಇಲಾಖೆ ಮತ್ತು ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ (ಕೆಎಫ್‌ಡಿಸಿ)ದ ಮೂಲಕ 11 ಜಿಲ್ಲೆಗಳಲ್ಲಿ ಹೊಸದಾಗಿ ಮತ್ಸ್ಯದರ್ಶಿನಿ ಕೇಂದ್ರ ಸ್ಥಾಪನೆಗೆ ಸರಕಾರ ತೀರ್ಮಾನಿಸಿದೆ.

ಮತ್ಸ್ಯದರ್ಶಿನಿ ಕೇಂದ್ರಗಳು ಈಗಾಗಲೇ ಕೆಲವೆಡೆ ಕಾರ್ಯಾಚರಿಸುತ್ತಿದ್ದು, ಬೆಂಗಳೂರು, ತುಮಕೂರು, ಶಿವಮೊಗ್ಗ, ಕೋಲಾರ, ಬಳ್ಳಾರಿ ಯಲ್ಲಿ ಸಾಕಷ್ಟು ಜನಪ್ರಿಯವಾಗಿವೆ. ಮುಂದಿನ ದಿನಗಳಲ್ಲಿ ಬೆಳಗಾವಿ, ವಿಜಯಪುರ, ಕಲಬುರಗಿ, ರಾಯಚೂರು, ಶಿವಮೊಗ್ಗ, ಹುಬ್ಬಳ್ಳಿ, ಬೆಂಗಳೂರು, ತುಮಕೂರು, ಮೈಸೂರು, ಮಂಗಳೂರು, ಉಡುಪಿ ಜಿಲ್ಲೆಗಳಿಗೆ ಈ ಕೇಂದ್ರ ವನ್ನು ವಿಸ್ತರಿಸಲು ಇಲಾಖೆ ಸಕಲ ಸಿದ್ಧತೆ ನಡೆಸಿದೆ.

ಕೇಂದ್ರದ ವೈಶಿಷ್ಟ್ಯವೇನು?
ಮತ್ಸ್ಯದರ್ಶಿನಿ ಕೇಂದ್ರಗಳಲ್ಲಿ ಖಾಸಗಿ ಹೊಟೇಲ್‌ಗ‌ಳಿಗಿಂತ ಅರ್ಧದಷ್ಟು ಕಡಿಮೆ ಬೆಲೆಗೆ ಮೀನೂಟ ದೊರೆಯುತ್ತದೆ. ಎಲ್ಲ ಜಿಲ್ಲಾ ಕೇಂದ್ರಗಳಿಗೂ ಮಲ್ಪೆ ಮತ್ತು ಮಂಗಳೂರಿನಿಂದ ಶುಚಿ- ರುಚಿ ಯಾದ ಮೀನು ರವಾನೆಯಾಗುತ್ತದೆ. ತುಮಕೂರಿನ ಹೊಟೇಲೊಂದ ರಲ್ಲಿ ಮೀನೂಟದ ರುಚಿ ಸವಿದ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೆಚ್ಚುಗೆ ವ್ಯಕ್ತ ಪಡಿಸಿದ್ದರು ಹಾಗೂ ಎಲ್ಲ ಕಡೆಗಳಿಗೆ ವಿಸ್ತರಿಸುವ ಚಿಂತನೆ ನಡೆಸಿದ್ದರು. ಮತ್ಸ್ಯ ದರ್ಶಿನಿಯ ಹಲವು ಕೇಂದ್ರಗಳು ರಾಜ್ಯದಲ್ಲಿ ಖಾಸಗಿ ಏಜೆನ್ಸಿಗಳ ಮೂಲಕವೂ ನಡೆಯುತ್ತಿವೆ.ಆದರೆ ಇದೀಗ ಹೊಸದಾಗಿ ಆರಂಭಗೊಳ್ಳಲಿರುವ 11 ಕೇಂದ್ರಗಳ ಸಂಪೂರ್ಣ ನಿರ್ವಹಣೆಯನ್ನು ನೇರವಾಗಿ ಕೆಎಫ್‌ಡಿಸಿಯೇ ನೋಡಿ ಕೊಳ್ಳಲಿದೆ.

ಸ್ಥಳ ಗುರುತಿಸುವಂತೆ ಸೂಚನೆ
ಹೊಸದಾಗಿ ಆರಂಭಗೊಳ್ಳಲಿರುವ ಮತ್ಸ್ಯದರ್ಶಿನಿ ಕೇಂದ್ರಗಳಿಗೆ ಸೂಕ್ತ ಸ್ಥಳವನ್ನು ಕಾದಿರಿಸುವಂತೆ ಈಗಾಗಲೇ ಆಯಾಯ ಜಿಲ್ಲಾಧಿಕಾರಿಗಳಿಗೆ ಕೆಎಫ್‌ಡಿಸಿ ಮನವಿ ಮಾಡಿದ್ದು ಹಲವು ಜಿಲ್ಲೆಗಳು ಸ್ಥಳ ಗುರುತಿಸಿ ಕಾದಿರಿಸಿವೆ. ಎಲ್ಲ ಕೇಂದ್ರಗಳಿಗೂ ಕರಾವಳಿಯಿಂದ ಮೀನು ಸರಬ ರಾಜು ಮಾಡಲು ಹೊಸ ಇನ್ಸುಲೇಟರ್‌ ವಾಹನ ಖರೀದಿಗೂ ಪ್ರಸ್ತಾವನೆ ಸಲ್ಲಿಕೆಯಾಗಿದೆ.

ಸಂಚಾರಿ ಮಳಿಗೆಗಳು
ಮತ್ಸ್ಯದರ್ಶಿನಿ ಕೇಂದ್ರದ ಜತೆಗೆ ಮೊಬೈಲ್‌ ಕ್ಯಾಂಟೀನ್‌ ಮಾದರಿಯ 20 ಹೊಸ ಮೊಬೈಲ್‌ ದರ್ಶಿನಿಗಳು, ಖಾಸಗಿ ಏಜೆನ್ಸಿಗಳಿಗೆ ಹೆಚ್ಚುವರಿ ಮತ್ಸ್ಯದರ್ಶಿನಿ ಕೇಂದ್ರ ಹಾಗೂ ಹೊಸದಾಗಿ 25 ಸಂಚಾರಿ ಮೀನು ಮಾರಾಟ ಮಳಿಗೆ ಸ್ಥಾಪಿಸಲು ಕೆಎಫ್‌ಡಿಸಿ ತಯಾರಿ ನಡೆಸಿದೆ.

ಶೀಘ್ರದಲ್ಲೇ ಆರಂಭ
ರಾಜ್ಯದ ಎಲ್ಲ ಜಿಲ್ಲೆಗಳ ಜನರು ಕಡಿಮೆ ಬೆಲೆಗೆ ಕರಾವಳಿಯ ಶುಚಿ-ರುಚಿಯಾದ ಮೀನಿನ ಊಟ ಸವಿಯಬೇಕು ಎನ್ನುವ ನಿಟ್ಟಿನಲ್ಲಿ 11 ಜಿಲ್ಲೆಗಳಲ್ಲಿ ಮತ್ಸ್ಯದರ್ಶಿನಿ ಕೇಂದ್ರಗಳನ್ನು ತೆರೆಯಲು ಆದೇಶ ನೀಡಲಾಗಿದೆ. ಕೆಎಫ್‌ಡಿಸಿ ಎಲ್ಲ ತಯಾರಿಗಳನ್ನು ನಡೆಸಿದ್ದು ಶೀಘ್ರದಲ್ಲಿ ಈ ಕೇಂದ್ರಗಳು ಆರಂಭಗೊಳ್ಳಲಿವೆ.
– ಕೋಟ ಶ್ರೀನಿವಾಸ ಪೂಜಾರಿ,
ಮೀನುಗಾರಿಕೆ ಸಚಿವರು

ಅನುಮೋದನೆಗೆ ಕಾಯಲಾಗುತ್ತದೆ
ಮತ್ಸ್ಯದರ್ಶಿನಿ ಕೇಂದ್ರಕ್ಕೆ ಎಲ್ಲ ತಯಾರಿ ಮುಗಿದಿದೆ. ಹೆಚ್ಚುವರಿ ಅನುದಾನಕ್ಕಾಗಿ ಆರ್‌ಕೆವಿವೈಗೆ ಪ್ರಸ್ತಾವನೆ ಸಲ್ಲಿಸ ಲಾಗಿದ್ದು ಅನುಮೋದನೆಗಾಗಿ ಕಾಯ ಲಾಗು ತ್ತಿದೆ. ಜತೆಗೆ ಹೊಸದಾಗಿ ಮೊಬೈಲ್‌ ದರ್ಶಿನಿ, ಖಾಸಗಿ ಏಜೆನ್ಸಿಗಳಿಗೆ ಮತ್ಸ್ಯ ದರ್ಶಿನಿ ಕೇಂದ್ರ, ಸಂಚಾರಿ ಮೀನು ಮಾರಾಟ ಮಳಿಗೆ ಮುಂತಾದ ಯೋಜನೆ ಗಳನ್ನು ಜಾರಿ ಗೊಳಿಸುವ ಯೋಜನೆ ಇದೆ.
– ಎಂ.ಎಲ್‌. ದೊಡ್ಮನೆ,
ಮುಖ್ಯ ವ್ಯವಸ್ಥಾಪಕ ನಿರ್ದೇಶಕರು ಕೆಎಫ್‌ಡಿಸಿ

-ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.