ಪರಿಶಿಷ್ಟರ ಅಭಿವೃದ್ಧಿಗೆ 30 ಸಾವಿರ ಕೋಟಿ

ಸರ್ಕಾರದ 6 ತಿಂಗಳ ಕೆಲಸ ಬಿಎಸ್‌ವೈ ವಾಲ್ಮೀಕಿ ಸಮಾಜದ ಬಗ್ಗೆ ಹೊಂದಿರುವ ಕಳಕಳಿಗೆ ಸಾಕ್ಷಿ: ಕಾರಜೋಳ

Team Udayavani, Feb 10, 2020, 11:20 AM IST

10-February-3

ದಾವಣಗೆರೆ: ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರಕ್ಕೆ ಬಂದ 6 ತಿಂಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಮಗ್ರ ಅಭಿವೃದ್ಧಿಗೆ 30,445 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಉಪ ಮುಖ್ಯಮಂತ್ರಿ, ಸಮಾಜ ಕಲ್ಯಾಣ ಇಲಾಖೆ ಸಚಿವರೂ ಆಗಿರುವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಭಾನುವಾರ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ 2ನೇ ಮಹಿರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿದ ಅವರು, ಕಳೆದ ಸೆ. 16ಕ್ಕೆ ಅಧಿಕಾರಕ್ಕೆ ಬಂದಿರುವ ಯಡಿಯೂರಪ್ಪ ಅವರು ಎಸ್ಸಿ, ಎಸ್ಟಿಗೆ 30,445 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಭೂ ಒಡೆತನ ಯೋಜನೆಯಡಿ 647 ಜನರಿಗೆ 874 ಎಕರೆ ಜಮೀನು ಖರೀದಿ, ಗಂಗಾ ಕಲ್ಯಾಣ ಯೋಜನೆಯಡಿ 10 ಸಾವಿರ ಕೊಳವೆಬಾವಿ ಮಂಜೂರು ಮಾಡಿದ್ದಾರೆ ಎಂದು ತಿಳಿಸಿದರು.

ರಾಜ್ಯದ್ಯಾಂತ 12 ಸಾವಿರ ಜನರಿಗೆ ಆರ್ಥಿಕಾಭಿವೃದ್ಧಿಗೆ 300 ಕೋಟಿ ನೀಡಿದ್ದಾರೆ. 929 ಜನರಿಗೆ ಸ್ವಯಂ ಉದ್ಯೋಗ ಯೋಜನೆಯಡಿ ಸೌಲಭ್ಯ ಕಲ್ಪಿಸಲಾಗಿದೆ. ವಾಹನ ಖರೀದಿ, ಸಮೃದ್ಧಿ ಯೋಜನೆಗೂ ಅನುದಾನ ನೀಡಿದ್ದಾರೆ. ವಾಲ್ಮೀಕಿ ಸಮಾಜದ ಡಾ| ರಂಗರಾಜ ವನದುರ್ಗ, ಹೆಗ್ಗಣ್ಣನವರ್‌ ಅವರನ್ನು ಲೋಕಸೇವಾ ಆಯೋಗದ ಸದಸ್ಯರನ್ನಾಗಿ ನೇಮಿಸಿರುವುದು ಯಡಿಯೂರಪ್ಪ ಅವರು ವಾಲ್ಮೀಕಿ ಸಮಾಜದ ಬಗ್ಗೆ ಹೊಂದಿರುವ ಸಾಮಾಜಿಕ ಕಾಳಜಿ, ಕಳಕಳಿಗೆ ಸಾಕ್ಷಿ ಎಂದು ಹರ್ಷ ವ್ಯಕ್ತಪಡಿಸಿದರು.

2008 ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರದಿಂದಲೇ ವಾಲ್ಮೀಕಿ ಜಯಂತಿ ಆಚರಿಸುವ ಜೊತೆಗೆ ರಜೆ ಘೋಷಣೆಯನ್ನೂ ಮಾಡಿದವರು. ನರೇಂದ್ರ ಮೋದಿ ಅವರ ಸರ್ಕಾರ ಎಸ್ಸಿ, ಎಸ್ಟಿಯ ಮೀಸಲಾತಿ ಸೌಲಭ್ಯವನ್ನು ಇನ್ನೂ 10 ವರ್ಷಕ್ಕೆ ಮುಂದುವರೆಸಿದೆ. ಬಿಜೆಪಿಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಎಸ್ಸಿ,ಎಸ್ಟಿ ಶಾಸಕರು ಬೆನ್ನಲುಬಿಗೆ ನಿಂತಿದ್ದಾರೆ. ಸಮಾಜ ಬಿಜೆಪಿಯನ್ನ ಬೆಂಬಲಿಸುತ್ತಿದೆ ಎಂದರು.

ಯಡಿಯೂರಪ್ಪ ಅವರು 6,900 ಸಮುದಾಯ ಭವನ ಮಂಜೂರು ಮಾಡಿದ್ದಾರೆ. 824 ವಸತಿ ಶಾಲೆ, 4,709 ಹಾಸ್ಟೆಲ್‌ಗ‌ಳಲ್ಲಿ ಒಟ್ಟಾರೆ 4 ಲಕ್ಷ ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸಲಾಗುತ್ತಿದೆ. ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ 24 ಗಂಟೆಯಲ್ಲಿ 4.42 ಕೋಟಿ ಅನುದಾನ ಮಂಜೂರು ಮಾಡುವಂತೆ ತಮಗೆ ಸೂಚಿಸಿದ್ದರು. ಅದರಂತೆಯೇ ಅನುದಾನ ಬಿಡುಗಡೆ ಮಾಡಲಾಗಿದೆ. ಯಡಿಯೂರಪ್ಪ ಅವರು ದೀನ-ದಲಿತರ ಕಲ್ಯಾಣಕ್ಕೆ ಎಂದೆಂದಿಗೂ ಹಿಂದೆ-ಮುಂದೆ ನೋಡಿದವರೇ ಅಲ್ಲ ಎಂದು ತಿಳಿಸಿದರು.

ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಮಾತನಾಡಿ, ರಾಮಾಯಣದಂತಹ ಜಗತ್ತಿನ ಶ್ರೇಷ್ಠ ಗ್ರಂಥ ಬರೆದಿರುವ ವಾಲ್ಮೀಕಿಯವರು ಪರಿವರ್ತನೆಯ ಹರಿಕಾರರು. ವಾಲ್ಮೀಕಿಯವರು ವಚನಬದ್ಧತೆ, ಸ್ವಾಮಿ ನಿಷ್ಠೆ, ಅಧರ್ಮದ ವಿರುದ್ಧದ ಹೋರಾಟದ ಬಗ್ಗೆ ರಾಮಾಯಣದಲ್ಲಿ ಬರೆದಿದ್ದಾರೆ. ಈಗಲೂ ಎಲ್ಲರೂ ಪರಿವರ್ತನೆ ಆಗಬೇಕಿದೆ ಎಂದು ತಿಳಿಸಿದರು.

ಪರಿಶಿಷ್ಟ ವರ್ಗದ ಪಟ್ಟಿಯಲ್ಲಿ ತಳವಾರ, ಪರಿವಾರ ಪರ್ಯಾಯ ಪದಗಳ ಸೇರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಲೋಕಸಭೆಯಲ್ಲಿ ಅನುಮೋದನೆ ದೊರೆಯಲಿದೆ. ಪರಿಶಿಷ್ಟ ವರ್ಗಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಯಡಿಯೂರಪ್ಪ ಅವರು ಯಾವತ್ತಿಗೂ ವಾಲ್ಮೀಕಿ ಸಮಾಜದೊಂದಿಗೆ ಇರುತ್ತಾರೆ. ಸರ್ಕಾರ ಸಹ ನಿಮ್ಮೊಂದಿಗೆ ಇರುತ್ತದೆ ಎಂದು ತಿಳಿಸಿದರು.

ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಪ್ರಾಸ್ತಾವಿಕ ಮಾತುಗಳಾಡಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಸಚಿವ ಬಿ.ಸಿ. ಪಾಟೀಲ್‌, ಸಂಸದರಾದ ಜಿ.ಎಂ. ಸಿದ್ದೇಶ್ವರ್‌, ವೈ. ದೇವೇಂದ್ರಪ್ಪ, ಶಾಸಕರಾದ ಎಸ್‌.ವಿ. ರಾಮಚಂದ್ರ, ಪ್ರೊ. ಎನ್‌. ಲಿಂಗಣ್ಣ, ನೆಹರೂ ಚ. ಓಲೇಕಾರ, ಎನ್‌.ವೈ. ಗೋಪಾಲಕೃಷ್ಣ, ರಾಜಾ ವೆಂಕಟಪ್ಪ ನಾಯಕ್‌, ಬಸವರಾಜ್‌ ದದ್ದಲ್‌, ಅರವಿಂದ್‌ ಬೆಲ್ಲದ್‌, ಅಮೃತ್‌ ದೇಸಾಯಿ, ಕುಸುಮಾ ಶಿವಳ್ಳಿ, ಮಾಜಿ ಶಾಸಕ ಬಿ.ಪಿ. ಹರೀಶ್‌ ಇತರರು ಇದ್ದರು.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.