ರೈತ ಕುಟುಂಬಗಳಿಗೆ ಸಿಗದ ಜಮೀನು ಒಡೆತನ


Team Udayavani, Feb 10, 2020, 11:23 AM IST

state-tdy-1

ಸಾಂಧರ್ಬಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಸರಿ ಸುಮಾರು 95 ವರ್ಷದಿಂದ ಉಳುಮೆ ಮಾಡುತ್ತಿದ್ದರೂ ಜಮೀನಿನ ಒಡೆತನ ಸಿಗದೆ ಸಾವಿರಾರು ರೈತ ಕುಟುಂಬಗಳು ಅತಂತ್ರ ಸ್ಥಿತಿ ಎದುರಿಸುವಂತಾಗಿದೆ.

1924ರಲ್ಲಿ ಮೈಸೂರು ಮಹಾರಾಜರಿಂದ ಮಂಜೂ ರಾಗಿರುವ ಜಮೀನಿನ ಒಡೆತನಕ್ಕಾಗಿ ರೈತರು ಅಲೆ ದಾಡುವಂತಾಗಿದೆ. “ಸರ್ಕಾರಿ ಫ‌ಡಾ’ ಎಂದು ಪಹಣಿ ಯಲ್ಲಿ ಉಲ್ಲೇಖವಾಗಿರುವುದೇ ಇದಕ್ಕೆ ಕಾರಣ. ಕಾಂಗ್ರೆಸ್‌ ಹಾಗೂ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಜಾರಿಗೊಂಡ ಸಾಲಮನ್ನಾ ಯೋಜನೆಯೂ ಈ ರೈತರಿಗೆ ಅನ್ವಯವಾಗಿಲ್ಲ. ಸಹಕಾರ ಸಂಘಗಳಷ್ಟೇ ಅಲ್ಲ, ಖಾಸಗಿ ಲೇವಾದೇವಿದಾರರು ಅಥವಾ ಬ್ಯಾಂಕ್‌ಗಳಿಂದಲೂ ಇವರಿಗ ಸಾಲ ಸಿಗುವುದಿಲ್ಲ.

ಎಚ್‌.ಡಿ.ಕುಮಾರಸ್ವಾಮಿ ಜಾರಿಗೆ ತಂದ ಸಾಲಮನ್ನಾದ ಸವಲತ್ತು ಅವರ ತವರು ಜಿಲ್ಲೆ ರಾಮನಗರದ ಸರ್ಕಾರಿ ಫ‌ಡಾ ಎಂದು ಪಹಣಿಯಲ್ಲಿ ನಮೂದಾಗಿರುವ ರೈತ ಕುಟುಂಬಗಳಿಗೆ ಸಿಕ್ಕಿಲ್ಲ. ಮಂಡ್ಯ, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಇಂತಹ ಸಮಸ್ಯೆ ಇದೆ. ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡವರಿಗೆ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ 94 ಸಿ, 94 ಸಿಸಿ ಅಡಿ ಅಕ್ರಮ- ಸಕ್ರಮಕ್ಕೆ ಮುಂದಾಗಿದೆ. ಆದರೆ, 95 ವರ್ಷಗಳಿಂದ ಉಳುಮೆ ಮಾಡುತ್ತಿರುವ ಸರ್ಕಾರಿ ಫ‌ಡಾ ಪಹಣಿ ಹೊಂದಿರುವವರಿಗೆ ಜಮೀನು ಒಡೆತನ ನೀಡಲಾಗುತ್ತಿಲ್ಲ.

1985 ರಿಂದ 1995 ರವರೆಗೆ ಕೈ ಬರವಣಿಗೆಯಲ್ಲಿ ಪಹಣಿ ಇದ್ದಾಗ ಜಮೀನು ಯಾರಿಗೆ ಮಂಜೂರು ಮಾಡ ಲಾಗಿತ್ತೋ ಅವರ ಹೆಸರು ಬರುತ್ತಿತ್ತು. ಗಣಕೀಕೃತ ಪಹಣಿ ವ್ಯವಸ್ಥೆ ಜಾರಿಗೆ ಬಂದ ನಂತರ ಕೇವಲ ಸರ್ಕಾರಿ ಫ‌ಡಾ ಎಂದು ಮಾತ್ರ ಬರುತ್ತಿದೆ. ಅದಕ್ಕೂ ಮುಂಚೆ ಖಾತೆ ಸಂಖ್ಯೆ ಆಧಾರದಲ್ಲಿ ಕಂದಾಯ ಕಟ್ಟಿಸಿಕೊಳ್ಳಲಾಗುತ್ತಿತ್ತು. ಇದೀಗ ಕಂದಾಯ ಸಹ ಕಟ್ಟಿಸಿಕೊಳ್ಳುತ್ತಿಲ್ಲ.

ಇದರಿಂದಾಗಿ ಸಾವಿರಾರು ರೈತ ಕುಟುಂಬಗಳು ಅತ್ತ ಒಡೆತನವೂ ಇಲ್ಲ, ಇತ್ತ ಕೃಷಿಗೆ ಸಾಲ ಸೌಲಭ್ಯವೂ ಇಲ್ಲ. ಸರ್ಕಾರದ ಯಾವುದೇ ಯೋಜನೆ ಗಳೂ ಸಿಗದೆ ಪರದಾಡು ವಂತಾಗಿದೆ.2014ರಲ್ಲಿ ಒಮ್ಮೆ ಸರ್ಕಾರದ ವತಿಯಿಂದಲೇ ಸರ್ಕಾರಿ ಫ‌ಡ ವಿಚಾರ ಇತ್ಯರ್ಥ ಪಡಿಸಲು ರೈತರಿಂದ ಅರ್ಜಿ ಸ್ವೀಕರಿಸಲು ಸಮಯ ನಿಗದಿ ಮಾಡಲಾಗಿತ್ತು. ಆದರೆ, ಅದರ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಲಿಲ್ಲ. ಹೀಗಾಗಿ ಕೆಲವೇ ಸಂಖ್ಯೆಯ ರೈತರು ಅರ್ಜಿ ಹಾಕಿ ದರು. ಆದರೂ ಆ ಅರ್ಜಿಗಳು ಇನ್ನೂ ಇತ್ಯರ್ಥವಾಗಿಲ್ಲ.

ಪರಿಶೀಲಿಸಿ ಕ್ರಮ: ಈ ಕುರಿತು ಕಂದಾಯ ಸಚಿವ ಆರ್‌. ಅಶೋಕ್‌ ಪ್ರತಿಕ್ರಿಯಿಸಿ, ಈ ಕುರಿತು ಸಂಪೂರ್ಣ ಮಾಹಿತಿ ತರಿಸಿಕೊಳ್ಳುತ್ತೇನೆ. ಹಿಂದೆ ಏನಾಗಿತ್ತೋ ಗೊತ್ತಿಲ್ಲ, ಕಾನೂನಿನಲ್ಲಿ ಅವಕಾಶ ಇದ್ದರೆ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು. ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳುತ್ತಾರೆ. ರೈತರು ಇತ್ತೀಚೆಗೆ ತಮ್ಮ ಜಮೀನುಗಳಿಗೆ ಸಂಬಂಧಿಸಿದಂತೆ ದಾಖಲೆ ಮತ್ತಿತರ ಮಾಹಿತಿ ಕೇಳಿದರೆ ಸಿಗುತ್ತಿಲ್ಲ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮರಳವಾಡಿ ಹೋಬಳಿಯ ತಟ್ಟೆಕೆರೆ ಗ್ರಾಮದವರು ತಹಸೀಲ್ದಾರ್‌ ಅವರಿಗೆ ಪತ್ರ ಬರೆದರೆ, ಸರ್ಕಾರಿ ಫ‌ಡಾ ಮಾಡಿಕೊಂಡಿರುವ ಬಗ್ಗೆ ಸರ್ಕಾರಿ ಆದೇಶ ಹಾಗೂ ಇತರೆ ದಾಖಲಾತಿಗಳು ಲಭ್ಯವಿರುವುದಿಲ್ಲ ಎಂದು ಹಿಂಬರಹ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಬಳಿ ಹೋದರೆ, ಮೂರು ವರ್ಷ ಸತತ ಉಳುಮೆ ಮಾಡದಿದ್ದರೆ ಕಂದಾಯ ಪಾವತಿಸದಿದ್ದರೆ ಅಂತಹ ಜಮೀನು ಸರ್ಕಾರಿ ಫ‌ಡಾ ಎಂದು ಪರಿಗಣಿಸಲಾಗುತ್ತದೆ ಎಂದು ಹೇಳಿದ್ದಾರೆ. ಆದರೆ, ರೈತರು ವರ್ಷಗಳಿಂದ ಉಳುಮೆ ಮಾಡುತ್ತಿದ್ದಾರೆ. ಹತ್ತು ವರ್ಷದಿಂದ ಸರ್ಕಾರವೇ ಅವರಿಂದ ಕಂದಾಯ ಪಾವತಿಸಿಕೊಳ್ಳುತ್ತಿಲ್ಲ. ಸರ್ಕಾರಿ ಫ‌ಡಾ ಎಂದು ಪಹಣಿಯಲ್ಲಿರುವುರಿಂದ ನಾಲ್ಕೈದು ಜಿಲ್ಲೆ ಗಳಲ್ಲಿ 95 ವರ್ಷಗಳಿಂದ ಉಳುಮೆ ಮಾಡುತ್ತಿರುವ ರೈತರು ಜಮೀನು ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದಾರೆ. ಇತ್ತೀಚೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್‌ ಪ್ರಸಾದ್‌ ಅವರಿಗೂ ಪತ್ರದ ಮೂಲಕ ಸಮಸ್ಯೆ ಬಗೆಹರಿಸುವಂತೆ ಕೋರಿದ್ದಾರೆ.

ಏನಿದು ಸರ್ಕಾರಿ ಫ‌ಡಾ? :  ಕಂದಾಯ ಜಮೀನುಗಳಲ್ಲಿ ಸರ್ಕಾರಿ ಖರಾಬು, ಸಿ ಖರಾಬು, ನೆಡು ತೋಪು, ಗುಂಡು ತೋಪು, ಸೊಪ್ಪಿನ ಬೆಟ್ಟ, ಕಾನು ಎಂದು ಪಹಣಿಯಲ್ಲಿ ನಮೂದಾಗಿರುತ್ತದೆ. ಹಳೇ ಮೈಸೂರು ಭಾಗದ ಕೆಲವು ಭಾಗಗಳಲ್ಲಿ 1995ರ ಈಚೆಗೆ ಸರ್ಕಾರಿ ಫಡಾ ಎಂದು ಪಹಣಿಯಲ್ಲಿ ನಮೂದಾಗುತ್ತಿದೆ, ಇದು ಸರ್ಕಾರಿ ಭೂಮಿ ಎಂಬ ಅರ್ಥ ಎಂದು ಕಂದಾಯ ಇಲಾಖೆ ಅಧಿಕಾರಿಗಳು ಹೇಳುತ್ತಾರೆ. ತಮ್ಮ ಕುಟುಂಬದ ಪೂರ್ವಿಕರ ಹೆಸರು ಇದ್ದ ಪಹಣಿಯಲ್ಲಿ ಇದ್ದಕ್ಕಿದ್ದಂತೆ ಸರ್ಕಾರಿ ಫ‌ಡಾ ಎಂದು ಬರುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ.

 

ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.