TikTok ವೀಡಿಯೋ ಶೇರ್ ಮಾಡಿದ ತಂಗಿ; ಯುವಕನ ಬೆತ್ತಲೆಗೊಳಿಸಿ ಮೆರವಣಿಗೆ, ಥಳಿತ!
ಯುವಕ ತನ್ನ ತಂಗಿಗೆ ಲೈಂಗಿಕವಾಗಿ ಕಿರುಕುಳ ನೀಡಿರುವುದಾಗಿಯೂ ಆರೋಪಿಸಿ, ಪ್ರತಿ ದೂರು
Team Udayavani, Feb 10, 2020, 6:52 PM IST
ರಾಜಸ್ಥಾನ್: 20 ವರ್ಷದ ಯುವಕನನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿ ಸಹೋದರಿ ಜತೆ ನಿಲ್ಲಿಸಿ ಟಿಕ್ ಟಾಕ್ ವೀಡಿಯೋ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಜೈಪುರದಲ್ಲಿ ನಡೆದಿದೆ.
ಜೈಪುರ್ ಆದರ್ಶನಗರದ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಪುಷ್ಪೇಂದ್ರಾ ಸಿಂಗ್ ಈ ಕುರಿತು ವಿವರ ನೀಡಿದ್ದು, ಆರೋಪಿಗಳು ಮತ್ತು ಸಂತ್ರಸ್ತ ಯುವಕ ನೆರೆಹೊರೆಯವರಾಗಿದ್ದರು. ಸಂತ್ರಸ್ತ ಯುವಕ ಟಿಕ್ ಟಾಕ್ ವೀಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ಇದನ್ನು ಆರೋಪಿಗಳಲ್ಲಿ ಒಬ್ಬನ ತಂಗಿ ಶೇರ್ ಮಾಡಿದ್ದಳು. ಇದನ್ನು ವೀಕ್ಷಿಸಿದ ಗೆಳೆಯನೊಬ್ಬ ಆರೋಪಿಗೆ ವಿಷಯ ತಿಳಿಸಿ, ಇಬ್ಬರ ನಡುವೆ ಪ್ರೇಮಸಂಬಂಧವಿದೆ. ನಾವು ಆತನಿಗೊಂದು ಪಾಠ ಕಲಿಸಬೇಕೆಂದು ನಿರ್ಧರಿಸಿದ್ದರು ಎಂದು ತಿಳಿಸಿದ್ದಾರೆ.
ಶುಕ್ರವಾರ ಸಂಜೆ ಆರೋಪಿ ಹಾಗೂ ಇತರ ಒಂಬತ್ತು ಮಂದಿ ಗೆಳೆಯರು ಯುವಕನ ಮನೆಗೆ ಬಂದು ಕರೆದಿದ್ದರು. ಹೊರ ಬಂದ ಆತನನ್ನು ಹಿಗ್ಗಾಮುಗ್ಗಾ ಥಳಿಸಿದ್ದರು. ಯುವಕನ ಬಟ್ಟೆ ಕಳಚಿ ನಗ್ನಗೊಳಿಸಿ ಮೆರವಣಿಗೆ ಮಾಡಿಸಿ, ಟಿಕ್ ಟಾಕ್ ವೀಡಿಯೋ ಮಾಡಿರುವುದಾಗಿ ಸಿಂಗ್ ವಿವರಿಸಿದ್ದಾರೆ.
ಯುವಕ ಆರಂಭದಲ್ಲಿ ಎಫ್ ಐಆರ್ ದಾಖಲಿಸಲಿಲ್ಲವಾಗಿತ್ತು. ಶನಿವಾರ ಸಂತ್ರಸ್ತ ಯುವಕ ಎಫ್ ಐಆರ್ ದಾಖಲಿಸಿದ್ದ, ಆದರೆ ಆರೋಪಿಗಳಲ್ಲಿ ಒಬ್ಬ ಯುವಕನ ಟಿಕ್ ಟಾಕ್ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದ. ಇದು ಪೊಲೀಸ್ ಠಾಣೆವರೆಗೂ ತಲುಪಿತ್ತು. ಯುವಕ ತನ್ನ ತಂಗಿಗೆ ಲೈಂಗಿಕವಾಗಿ ಕಿರುಕುಳ ನೀಡಿರುವುದಾಗಿಯೂ ಆರೋಪಿಸಿ, ಪ್ರತಿ ದೂರು ನೀಡಿರುವುದಾಗಿ ವರದಿ ತಿಳಿಸಿದೆ.
ಸಂತ್ರಸ್ತ ಯುವಕನ ಮೇಲೆ ಪೋಸ್ಕೋ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಗಿದೆ. ಆರೋಪಿ ವಿರುದ್ಧ ಐಟಿ ಕಾಯ್ದೆ 341, 342, 323 ಹಾಗೂ 147 ಕಲಂ ಅನ್ವಯ ದೂರು ದಾಖಲಾಗಿದೆ. ಯುವಕನನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ರಾತ್ರಿ ಆರೋಪಿಯನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸ್ ತಂಡ ರಚಿಸಲಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ