ಕುಸಿಯುವ ಭೀತಿಯಲ್ಲಿ ಓವರ್‌ಹೆಡ್‌ ಟ್ಯಾಂಕ್‌

ಕಬ್ಬಿಣದ ರಾಡ್‌ಗಳಿಗೆ ತುಕ್ಕು, ಬಿರುಕುಬಿಟ್ಟ ಕಾಂಕ್ರೀಟ್‌

Team Udayavani, Feb 11, 2020, 5:54 AM IST

1002AJKE01

ಅಜೆಕಾರು: ಮರ್ಣೆ ಗ್ರಾಮ ಪಂಚಾಯತ್‌ ಕಟ್ಟಡದ ಸಮೀಪದಲ್ಲಿರುವ ಓವರ್‌ಹೆಡ್‌ ಟ್ಯಾಂಕ್‌ ಸಂಪೂರ್ಣ ಬಿರುಕು ಬಿಟ್ಟಿದ್ದು, ಆಗಲೋ ಈಗಲೋ ಎಂಬಂತೆ ಕುಸಿಯುವ ಭೀತಿಯಲ್ಲಿದೆ.

ಈ ಟ್ಯಾಂಕ್‌ ಶಿಥಿಲಗೊಂಡು ಹಲವು ವರ್ಷ ಕಳೆದರೂ ದುರಸ್ತಿಯೂ ನಡೆದಿಲ್ಲ, ತೆರವು ಕಾರ್ಯವೂ ನಡೆದಿಲ್ಲ. ಸಂಪೂರ್ಣ ಹಾನಿಗೊಂಡ ಟ್ಯಾಂಕ್‌ ಬೀಳುವ ಭೀತಿ ಸ್ಥಳೀಯರನ್ನು ಕಾಡುತ್ತಿದೆ.

50 ವರ್ಷಗಳ ಹಿಂದೆ ನಿರ್ಮಾಣ
ಸುಮಾರು 50 ವರ್ಷಗಳ ಹಿಂದೆ ನಿರ್ಮಾಣಗೊಂಡಿರುವ ಈ ಟ್ಯಾಂಕ್‌, 50 ಸಾವಿರ ಲೀ. ನೀರು ಶೇಖರಣೆ ಸಾಮರ್ಥ್ಯವನ್ನು ಹೊಂದಿದೆ. ಮರ್ಣೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸುಮಾರು 520 ಮನೆಗಳಿಗೆ ಈ ಟ್ಯಾಂಕ್‌ ಮೂಲಕವೇ ಕುಡಿಯುವ ನೀರು ಒದಗಿಸಲಾಗುತ್ತದೆ.

ಹಾನಿ ಭೀತಿ
ಪಂಚಾಯತ್‌ ಕಟ್ಟಡಕ್ಕೆ ಹೊಂದಿಕೊಂಡಂತೆ ಇರುವ ಈ ಟ್ಯಾಂಕ್‌ ಕುಸಿತಗೊಂಡಲ್ಲಿ ಅಪಾರ ಪ್ರಮಾಣದಲ್ಲಿ ಹಾನಿ ಜತೆಗೆ ಜೀವ ಹಾನಿಗೂ ಕಾರಣವಾಗುವ ಸಾಧ್ಯತೆ ಇದೆ. ಸುಮಾರು 50 ಅಡಿ ಎತ್ತರದಲ್ಲಿರುವ ಈ ಟ್ಯಾಂಕ್‌ ಕುಸಿತಗೊಂಡರೆ ಸಮೀಪದಲ್ಲಿರುವ ಸುಮಾರು 30,000 ಲೀಟರ್‌ ಸಾಮರ್ಥ್ಯದ ಇನ್ನೊಂದು ಓವರ್‌ಹೆಡ್‌ ಟ್ಯಾಂಕ್‌, ಪಂಚಾಯತ್‌ ಕಟ್ಟಡ, ಪಂಚಾಯತ್‌ ವಾಣಿಜ್ಯ ಮಳಿಗೆಗಳು, ಗ್ರಾಮಕರಣಿಕರ ಕಟ್ಟಡಗಳಿಗೆ ಭಾರೀ ಪ್ರಮಾಣದ ಹಾನಿಯಾಗಲಿದೆ.

ಟ್ಯಾಂಕ್‌ನ ಎಲ್ಲ ಸ್ಲಾéಬ್‌ಗಳು ಬಿರುಕು ಬಿಟ್ಟಿವೆ. ಸಿಮೆಂಟ್‌ ತುಂಡು ತುಂಡಾಗಿ ಬೀಳುತ್ತಿದೆ. ಕಬ್ಬಿಣದ ರಾಡ್‌ಗಳು ಗೋಚರಿಸುತ್ತಿದ್ದು ಶಿಥಿಲವಾಗಿರುವುದನ್ನು ಸಾರಿ ಹೇಳುತ್ತಿವೆ.

ಟ್ಯಾಂಕ್‌ ಬಿದ್ದರೆ ನೀರೂ ಇಲ್ಲ!
ಒಂದು ವೇಳೆ ಟ್ಯಾಂಕ್‌ ಕುಸಿದರೆ ಪಂಚಾಯತ್‌ ವ್ಯಾಪ್ತಿಯ ಅಜೆಕಾರು ಪೇಟೆ, ಕೊಂಬಗುಡ್ಡೆ, ಕೈಕಂಬ, ನೂಜಿ ವಠಾರ, ಕುರ್ಪಾಡಿ ಪ್ರದೇಶ, ಪ.ಜಾತಿ, ಪ.ಪಂಗಡದ ಹಲವು ಕಾಲೊನಿಗಳ ಗ್ರಾಮಸ್ಥರಿಗೆ ಕುಡಿಯುವ ನೀರಿಗೂ ಸಂಕಷ್ಟಪಡಬೇಕಾದ ಪರಿಸ್ಥಿತಿ ನಿರ್ಮಾಣಗೊಳ್ಳಲಿದೆ.

ಹೊಸ ಟ್ಯಾಂಕ್‌ ನಿರುಪಯುಕ್ತ
ಕುಸಿಯುವ ಭೀತಿಯಲ್ಲಿರುವ ಟ್ಯಾಂಕ್‌ ಬಳಿಯಲ್ಲಿಯೇ ಸುಮಾರು 10 ವರ್ಷಗಳ ಹಿಂದೆ ಇನ್ನೊಂದು ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಾಣ ಮಾಡಲಾಗಿದ್ದು, ಇದರ ಎತ್ತರವೂ ಕಡಿಮೆ ಇದೆ. ನೀರಿನ ಶೇಖರಣ ಸಾಮರ್ಥ್ಯವೂ ಕಡಿಮೆ ಇದೆ. ಇದರಿಂದ ಸಂಪೂರ್ಣ ನೀರು ಒದಗಿಸುವುದು ಕಷ್ಟಕರ.

ಈ ನಿಟ್ಟಿನಲ್ಲಿ ಪಂಚಾಯತ್‌ ಆಡಳಿತವು ಹಳೆಯ ಟ್ಯಾಂಕನ್ನೇ ಇನ್ನೂ ನೆಚ್ಚಿಕೊಂಡಿದೆ. ಇದರಿಂದಾಗಿ ಲಕ್ಷಾಂತರ ರೂ. ವೆಚ್ಚ ಮಾಡಿ ನಿರ್ಮಾಣ ಮಾಡಿರುವ ಹೊಸ ಓವರ್‌ ಹೆಡ್‌ ಟ್ಯಾಂಕ್‌ ನಿಷ್ಪ್ರಯೋಜಕವಾಗಿದೆ.

ಹಲವು ಬಾರಿ ನಿರ್ಣಯ
ಗ್ರಾಮಸ್ಥರ ಮನವಿಯಂತೆ ಹಲವು ಬಾರಿ ಗ್ರಾಮಸಭೆಗಳಲ್ಲಿ ಓವರ್‌ ಹೆಡ್‌ ಟ್ಯಾಂಕ್‌ ದುರಸ್ತಿ ಅಥವಾ ತೆರವುಗೊಳಿಸುವ ಬಗ್ಗೆ ನಿರ್ಣಯ ಕೈಗೊಂಡು ಕಾರ್ಕಳ ಎಂಜಿನಿಯರಿಂಗ್‌ ಉಪ ವಿಭಾಗದ ಅಧಿಕಾರಿಗಳಿಗೆ ಪಂಚಾಯತ್‌ ಆಡಳಿತ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಿಲ್ಲವಾಗಿದೆ.

ಪಂಚಾಯತ್‌ ವ್ಯಾಪ್ತಿಯಲ್ಲಿ ಶೀಘ್ರ ಇನ್ನೊಂದು ಟ್ಯಾಂಕ್‌ ನಿರ್ಮಾಣ ಮಾಡಿ ಕುಸಿಯುವ ಹಂತದಲ್ಲಿರುವ ಟ್ಯಾಂಕ್‌ ಅನ್ನು ತೆರವುಗೊಳಿಸುವುದು ತುರ್ತು ಅಗತ್ಯವಾಗಿದೆ. ಜತೆಗೆ ನಿರುಪಯುಕ್ತ ಟ್ಯಾಂಕ್‌ ಅನ್ನು ಪರ್ಯಾಯವಾಗಿ ಬಳಕೆ ಮಾಡಲೂ ಚಿಂತಿಸಬೇಕಿದೆ.

ಪ್ರತಿಕ್ರಿಯೆ ಬಂದಿಲ್ಲ
ಪಂಚಾಯತ್‌ ಕಟ್ಟಡದ ಸಮೀಪದಲ್ಲಿಯೇ ಓವರ್‌ ಹೆಡ್‌ ಟ್ಯಾಂಕ್‌ ಶಿಥಿಲಾವಸ್ಥೆಯಲ್ಲಿದ್ದು ಈಗಾಗಲೇ ಹಲವು ಬಾರಿ ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಲಾಗಿದೆ. ಆದರೆ ಇಲಾಖೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
-ದಿನೇಶ್‌ ಕುಮಾರ್‌, ಅಧ್ಯಕ್ಷರು, ಮರ್ಣೆ ಗ್ರಾ.ಪಂ.

ಮತ್ತೆ ಮನವಿ
ಅತ್ಯಂತ ಅಪಾಯಕಾರಿ ಸ್ಥಿತಿಯಲ್ಲಿರುವ ಓವರ್‌ಹೆಡ್‌ ಟ್ಯಾಂಕನ್ನು ಪರಿಶೀಲಿಸುವಂತೆ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಎಂಜಿನಿಯರಿಂಗ್‌ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ಮನವಿ ಮಾಡಲಾಗಿದೆ. ಕಳೆದ 5 ವರ್ಷಗಳ ಹಿಂದೆ ಸ್ವಲ್ಪ ಮಟ್ಟಿನ ದುರಸ್ತಿ ಕಾರ್ಯ ನಡೆದಿದ್ದು ತ್ವರಿತವಾಗಿ ಟ್ಯಾಂಕ್‌ ಪರಿಶೀಲನೆ ಮಾಡುವಂತೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಲಾಗುವುದು.
-ತಿಲಕ್‌ರಾಜ್‌, ಪಿಡಿಒ, ಮರ್ಣೆ ಗ್ರಾಮ ಪಂಚಾಯತ್‌

ಸೂಕ್ತ ಕ್ರಮ
ಪಂಚಾಯತ್‌ ಆಡಳಿತದ ಮನವಿಯಂತೆ ಈ ಹಿಂದೆಯೇ ಪರಿಶೀಲನೆ ಮಾಡಲಾಗಿದ್ದು ಶಿಥಿಲಾವಸ್ಥೆಯಲ್ಲಿರುವ ಟ್ಯಾಂಕ್‌ ಸಮೀಪ ಹಲವು ಕಟ್ಟಡಗಳು ಇರುವ ಬಗ್ಗೆ ನೀರು ನೈರ್ಮಲ್ಯ ಇಲಾಖೆಯ ಮೇಲಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಅನುಮತಿ ಸಿಕ್ಕ ತತ್‌ಕ್ಷಣ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
-ಸತ್ಯನಾರಾಯಣ, ಸ.ಕಾ. ಎಂಜಿನಿಯರ್‌,
ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಉಪವಿಭಾಗ ಕಾರ್ಕಳ

-ಜಗದೀಶ ಅಜೆಕಾರು

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.