ಬಜೆಟ್‌ನಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡಿ


Team Udayavani, Feb 11, 2020, 3:06 AM IST

bajetnalli

ಬೆಂಗಳೂರು: ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕೈಗಾರಿಕೆ ಅಭಿವೃದ್ಧಿಗೆ ಪೂರಕವಾದ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿವೆ.

ವಿಧಾನಸೌಧದಲ್ಲಿ ಸೋಮವಾರ ಬಜೆಟ್‌ ಪೂರ್ವಭಾವಿ ಸಭೆ ನಡೆಸಿದ ಸಂದರ್ಭದಲ್ಲಿ ಎಫ್ಕೆಸಿಸಿಐ ಅಧ್ಯಕ್ಷ ಸಿ.ಆರ್‌.ಜನಾರ್ದನ್‌, ಕಾಸಿಯಾ ಅಧ್ಯಕ್ಷ ಆರ್‌.ರಾಜು ನೇತೃತ್ವದ ನಿಯೋಗವು ಭೇಟಿಯಾಗಿ, ಕೈಗಾರಿಕೆಗಳ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮ ಹಾಗೂ ಅನುದಾನ ಬಿಡುಗಡೆ ಸಂಬಂಧ ಕೋರಿಕೆ ಪತ್ರ ಸಲ್ಲಿಸಿದವು.

ಎಫ್ಕೆಸಿಸಿಐ ಬೇಡಿಕೆ: ಕೃಷಿ, ತೋಟಗಾರಿಕೆ, ಹೈನುಗಾರಿಕೆ ಕ್ಷೇತ್ರಗಳಲ್ಲಿ ರೈತರ ಆದಾಯ 2022ಕ್ಕೆ ದ್ವಿಗುಣಗೊಳಿಸಲು ಏಪ್ರಿಲ್‌ ತಿಂಗಳಿನಲ್ಲಿ ಅಗ್ರೋಫ‌ುಡ್‌ ಟೆಕ್‌ ಎಕ್ಸ್‌ಪೋ ಆಯೋಜಿಸಿದ್ದು, 3 ಕೋಟಿ ರೂ., ರಾಜ್ಯದಲ್ಲಿ ಎಂಎಸ್‌ಎಂಇ ಕ್ಷೇತ್ರದ ಬೆಳವಣಿಗೆಗೆ ಟೆಕ್ನಾಲಜಿ ಸಮ್ಮಿಟ್‌ ಆಯೋಜಿಸಲು ಉದೇಶಿಸಲಾಗಿದೆ. ಅದಕ್ಕೆ 1.50 ಕೋಟಿ ರೂ., ಬಹುವೃತ್ತಿಯ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪಿಸಲು 10 ಕೋಟಿ ರೂ. ನೀಡಲು ಮನವಿ ನೀಡಲಾಗಿದೆ.

ವಿದ್ಯುತ್‌ ಸರಬರಾಜು ಕಂಪನಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ, ಪ್ರತಿ ವಿದ್ಯುತ್‌ ಕಂಪನಿಯ ಒಂದು ಪ್ರದೇಶ ಪ್ರಯೋಗಿಕವಾಗಿ ಖಾಸಗಿಯವರಿಗೆ ವಹಿಸಬೇಕು, ಕೃಷಿ ಮಾರುಕಟ್ಟೆ ಇಲಾಖೆಯಿಂದ ಜಾರಿಯಾದ 35-ಬಿ ನಮೂನೆ ರದ್ದಾಗಬೇಕು. ಪ್ರವಾಸೋದ್ಯಮ ಇಲಾಖೆಗೆ ಹೆಚ್ಚಿನ ಅನುದಾನ ಮೀಸಲಿಡಬೇಕು, ಘನತ್ಯಾಜ್ಯದಿಂದ ಸಿಮೆಂಟ್‌ ಉತ್ಪಾದನೆಗೆ ಅವಕಾಶ ಕಲ್ಪಿಸಿ ಬೆಂಗಳೂರಿನ ಸುತ್ತಮುತ್ತ ಸಿಮೆಂಟ್‌ ಘಟಕ ಸ್ಥಾಪಿಸಬೇಕು.

ಎಸ್‌ಎಂಇ ಘಟಕಗಳ ಕಾರ್ಮಿಕರಿಗೆ ವೃತ್ತಿ ತೆರಿಗೆಯಿಂದ ವಿನಾಯಿತಿ, ನಗರ ಪ್ರದೇಶಗಳಲ್ಲಿ ಬಹುಮಹಡಿ ಕೈಗಾರಿಕಾ ವಸಾಹತುಗಳ ನಿರ್ಮಾಣಕ್ಕೆ ಅವಕಾಶ, ಕೈಗಾರಿಕಾ ಕಾರ್ಮಿಕರಿಗೆ ವಸತಿ ಯೋಜನೆ ರೂಪಿಸಬೇಕು ಸಣ್ಣ, ಅತಿ ಸಣ್ಣ ಕೈಗಾರಿಕೆಗಳಿಗೆ ಪ್ರತ್ಯೇಕವಾಗಿ ಕನಿಷ್ಠ ವೇತನ ಮಾರ್ಗಸೂಚಿ ನಿಗದಿಪಡಿಸಬೇಕು, ರಾಜ್ಯದಲ್ಲಿ ಇ ವೇ ಬಿಲ್‌ ಮೊಬಲಗು 1 ಲಕ್ಷ ರೂ.ಗೆ ನಿಗದಿ ಮಾಡಬೇಕು ಎಂದು ಮನವಿ ಮಾಡಲಾಗಿದೆ.

ಕಾಸಿಯಾ ಬೇಡಿಕೆ: ದಾಬಸ್‌ಪೇಟೆಯಲ್ಲಿ ನಿರ್ಮಿಸಲಾಗುತ್ತಿರುವ ಶ್ರೇಷ್ಠತಾ ಹಾಗೂ ಅನ್ವೇಷಣಾ ಕೇಂದ್ರಕ್ಕೆ 20 ಕೋಟಿ ರೂ., ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆ ಘಟಕಗಳಿಗೆ ಕೆಎಸ್‌ಎಫ್ಸಿಯಿಂದ ಸಾಲಗಳ ನೀಡಿಕೆಯ ಸಬ್ಸಿಡಿ ಅಂತರ ಸರಿತೂಗಿಸಲು 300 ಕೋಟಿ ರೂ., ರಫ್ತು ವಹಿವಾಟಿಗೆ ಅನುಕೂಲವಾಗುವಂತೆ ಬೆಂಗಳೂರಿನಲ್ಲಿ ಇನ್‌ಲಾಂಡ್‌ ಕಂಟೈನರ್‌ ಡಿಪೋ, ತುಮಕೂರಿನಲ್ಲಿ ಸ್ಥಾಪನೆ,

ನವ ಮಂಗಳೂರು ಬಂದರಿಗೆ ಬೆಂಗಳೂರಿನಿಂದ ಸಮರ್ಪಕ ರಸ್ತೆ ಸಂಪರ್ಕ, ಕೆಐಎಡಿಬಿ ಮತ್ತು ಕೆಎಸ್‌ಎಸ್‌ಐಡಿಸಿ ಕೈಗಾರಿಕೆ ಪ್ರದೇಶ, ವಸಾಹತುಗಳ ಮೂಲಸೌಕರ್ಯ ಅಭಿವೃದ್ಧಿ, ಪೀಣ್ಯ ಕೈಗಾರಿಕಾ ನಗರ ಪ್ರಾಧಿಕಾರ ರಚನೆ, ತಾಜ್ಯ ಸಂಸ್ಕರಣೆ ನಿಟ್ಟಿನಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸಿಇಟಿಗಳ ಸ್ಥಾಪನೆ, ಬೆಳಗಾವಿಯಲ್ಲಿ ಫೌಂಡ್ರಿ ಪಾರ್ಕ್‌ ಸ್ಥಾಪನೆಗೆ 100 ಕೋಟಿ ರೂ. ಅನುದಾನ ಮಂಜೂರು, ಕೈಗಾರಿಕೆಗೆ ಸಂಬಂಧಿಸಿದ ಅರ್ಜಿಗಳ ಇತ್ಯರ್ಥಕ್ಕೆ ಏಕಗವಾಕ್ಷಿ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಮನವಿ ಮಾಡಲಾಗಿದೆ.

ಟಾಪ್ ನ್ಯೂಸ್

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.