ಇನ್ನು ಒಂದೆರಡು ದಿನದಲ್ಲಿ ಕೆಪಿಸಿಸಿ ಅಧ್ಯಕ್ಷರ ಘೋಷಣೆ
Team Udayavani, Feb 11, 2020, 3:06 AM IST
ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ ಘೋಷಣೆ ಒಂದೆರಡು ದಿನದಲ್ಲಿ ಹೊರಬೀಳಲಿದ್ದು ಡಿ.ಕೆ.ಶಿವಕುಮಾರ್ ಅಥವಾ ಎಂ.ಬಿ. ಪಾಟೀಲ್ ನೇಮಕವಾಗಲಿದ್ದಾರೆ ಎಂದು ಹೇಳಲಾಗಿದೆ. ಹೈಕಮಾಂಡ್ ಈಗಾಗಲೇ ಕೆಪಿಸಿಸಿ ಅಧ್ಯಕ್ಷರ ನೇಮಕ ಕುರಿತು ರಾಜ್ಯ ನಾಯಕರ ಅಭಿಪ್ರಾಯ ಸಂಗ್ರಹಿಸಿರುವ ಆಧಾರದ ಮೇಲೆ ಅಂತಿಮವಾಗಿ ನೇಮಕ ಆದೇಶ ಹೊರಡಿಸಲು ತೀರ್ಮಾನಿಸಿದೆ.
ಶಾಸಕಾಂಗ ಪಕ್ಷದ ನಾಯಕ ಹಾಗೂ ಪ್ರತಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಮುಂದುವರಿ ಯಲಿದ್ದಾರೆ. ಈಶ್ವರ್ ಖಂಡ್ರೆ ಕಾರ್ಯಾಧ್ಯಕ್ಷರಾಗಿ ರಲಿದ್ದು, ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಡಾ.ಜಿ.ಪರಮೇಶ್ವರ್ ಸಮನ್ವಯ ಸಮಿತಿ ಅಧ್ಯಕ್ಷರಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಮತ್ತೂಂದು ಮೂಲಗಳ ಪ್ರಕಾರ ಡಿ.ಕೆ.ಶಿವಕುಮಾರ್ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿ ಎಂ.ಬಿ.ಪಾಟೀಲ್ ಅವರಿಗೆ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಲಾಗುವುದು ಎಂದು ಹೇಳಲಾಗಿದೆ. ಫೆ.17 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಹಾಗೂ ಮಾರ್ಚ್ 5 ರಿಂದ ಬಜೆಟ್ ಅಧಿವೇಶನ ಇರುವುದರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಪ್ರತಿಪಕ್ಷ ನಾಯಕ, ಶಾಸಕಾಂಗ ಪಕ್ಷದ ನಾಯಕ ಸ್ಥಾನ ಕುರಿತ ಗೊಂದಲ ನಿವಾರಿಸಲು ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದೆ.
ಕೆಪಿಸಿಸಿ ಅಧ್ಯಕ್ಷರ ನೇಮಕ ಸಂಕ್ರಾಂತಿ ವೇಳೆಗೆ ಘೋಷಿಸಲು ಹೈಕಮಾಂಡ್ ಮುಂದಾಗಿತ್ತಾದರೂ ಕಾರ್ಯಾಧ್ಯಕ್ಷರ ನೇಮಕಕ್ಕೆ ಸಿದ್ದರಾಮಯ್ಯ ಪಟ್ಟು ಹಿಡಿದ ಕಾರಣ ತಡವಾಗಿತ್ತು. ಜತೆಗೆ, ಕೆ.ಎಚ್.ಮುನಿಯಪ್ಪ ಹಾಗೂ ಬಿ.ಕೆ.ಹರಿಪ್ರಸಾದ್ ಅವರೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಮಟ್ಟದಲ್ಲಿ ಒತ್ತಡ ಹಾಕಿದ್ದರು. ಸಿದ್ದರಾಮಯ್ಯ ಅವರಿಗೆ ಪ್ರತಿಪಕ್ಷ ನಾಯಕ ಸ್ಥಾನ ಹಾಗೂ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಎರಡೂ ಬೇಡ. ಎರಡೂ ಪ್ರತ್ಯೇಕಿಸಿ ಎಂದು ಹಿರಿಯ ನಾಯಕರ ಒಂದು ಬಣ ಹೈಕಮಾಂಡ್ ಮೇಲೆ ಒತ್ತಡ ಹಾಕಿತ್ತು. ಇದರಿಂದಾಗಿ ವಿಳಂಬವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Prajwal R case: ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೆ SIT ಮನವಿ: ಏನಿದು?
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
MUST WATCH
ಹೊಸ ಸೇರ್ಪಡೆ
IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ