ಕೆರೆಗಳ ನಿರ್ವಹಣೆ ಇಲ್ಲದೆ ನೀರು ಪೂರೈಕೆಗೆ ಅಡ್ಡಿ


Team Udayavani, Feb 11, 2020, 3:07 AM IST

keregala

ಬೆಂಗಳೂರು: ರಾಜ್ಯದಲ್ಲಿ 35 ಸಾವಿರ ಕೆರೆಗಳಿದ್ದರೂ ನಿರ್ವಹಣೆ ಸಮರ್ಪಕವಾಗಿಲ್ಲದ ಕಾರಣ ಜನರಿಗೆ ಸುಸ್ಥಿರ ಹಾಗೂ ಶುದ್ಧ ಕುಡಿಯುವ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಮಹಿಳಾ ವಾಣಿಜ್ಯೋದ್ಯಮಿಗಳ ಸಂಘಗಳ ಒಕ್ಕೂಟವು ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ “ರಾಷ್ಟ್ರೀಯ ಸುರಕ್ಷಿತ ನೀರು ಮತ್ತು ನೈರ್ಮಲ್ಯ’ ಸಮ್ಮೇಳನದ ಪೂರ್ವಭಾವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್‌ ಎಂ. ವಿಶ್ವೇಶ್ವರಯ್ಯ ಅವರ ತವರು ಜಿಲ್ಲೆ ಕೋಲಾರದಲ್ಲಿ 2,500 ಕೆರೆಗಳಿವೆ. ಕೆರೆಗಳ ಜಲಾನಯನ ಪ್ರದೇಶ ಒತ್ತುವರಿಯಾಗಿ ನಾಶವಾಗುತ್ತಿದೆ. ಕೆರೆಯಲ್ಲಿ ಹೂಳು ತುಂಬಿವೆ.

ಭೂಮಿಯ ಮೇಲ್ಭಾಗದಲ್ಲಿರುವ ನೀರು ಶುದ್ಧವಾಗಿರುತ್ತದೆ. ಕೊಳವೆ ಬಾವಿಯ ನೀರು ಪರಿಶುದ್ಧವಾಗಿರುವುದಿಲ್ಲ. ಹಾಗಾಗಿ ಜಲಾನಯನ ಪ್ರದೇಶಗಳು ಒತ್ತುವರಿಯಾಗದಂತೆ ಕ್ರಮ ವಹಿಸಬೇಕು ಹಾಗೂ ಹಳ್ಳಗಳನ್ನು ಸ್ವತ್ಛಗೊಳಿಸಬೇಕು ಎಂದು ತಿಳಿಸಿದರು.

ಪ್ರತಿ ಜಿಲ್ಲೆಗೊಂದು ಮಾದರಿ ಗ್ರಾಮವನ್ನು ಆಯ್ಕೆ ಮಾಡಿ ಮಳೆ ನೀರು ಕೊಯ್ಲು ಅಳವಡಿಕೆ, ಬಯಲು ಬಹಿರ್ದೆಸೆ ಮುಕ್ತವಾಗಿಸುವ ಬಗ್ಗೆ ಜಾಗೃತಿ ಮೂಡಿಸಬೇಕು. ಈ ಕಾರ್ಯಕ್ಕೆ ಸರ್ಕಾರದ ಸಹಭಾಗಿತ್ವವಿರಲಿದೆ. ಇಸ್ರೇಲ್‌ನಲ್ಲಿ ಕೇವಲ 50 ಮಿ.ಮೀ. ಮಳೆಯಾದರೂ ನೀರನ್ನು ಸದ್ಬಳಕೆ ಮಾಡಿಕೊಂಡು ತರಕಾರಿ ಬೆಳೆದು ರಫ್ತು ಮಾಡುತ್ತಿದೆ.

ಇಸ್ರೇಲ್‌ನಲ್ಲಿ ಜನಸಂಖ್ಯೆ ಕಡಿಮೆಯಿರುವ ಹಿನ್ನೆಲೆಯಲ್ಲಿ ಹೊರದೇಶಗಳ ನಾಗರಿಕರು ಕೃಷಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ರಾಜ್ಯದಲ್ಲಿ ವಾರ್ಷಿಕ 900 ಮಿ.ಮೀ. ಮಳೆಯಾಗುವ ಪ್ರದೇಶದಲ್ಲೂ ಬರದ ಪರಿಸ್ಥಿತಿ ಸೃಷ್ಟಿಯಾಗುತ್ತದೆ ಎಂದು ಹೇಳಿದರು.

ಮನೆ ಮನೆಗೆ ನಲ್ಲಿಗಳ ಮೂಲಕವೇ ನೀರು ಪೂರೈಸಬೇಕು. ಮೀಟರ್‌ ಅಳವಡಿಸಿದಾಗ ಮಾತ್ರ ನೀರನ್ನು ಮಿತವಾಗಿ ಬಳಸುತ್ತಾರೆ. ಕೇಂದ್ರ ಸರ್ಕಾರವು ನೀರಾವರಿ ಹಾಗೂ ಕುಡಿಯುವ ನೀರು ಪೂರೈಕೆಗಾಗಿ 3.68 ಲಕ್ಷ ಕೋಟಿ ರೂ. ಅನುದಾನವನ್ನು ಬಜೆಟ್‌ನಲ್ಲಿ ಕಾಯ್ದಿರಿಸಿದೆ. ಇದರಲ್ಲಿ ರಾಜ್ಯದ ಯೋಜನೆಗಳಿಗೆ ಶೇ. 50ರಷ್ಟು ಅನುದಾನ ಸಿಗಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ರಾಜ್ಯದಲ್ಲಿ 48 ಲಕ್ಷ ಶೌಚಾಲಯಗಳನ್ನು ನಿರ್ಮಿಸಿದರೂ ಜನ ಅವುಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸುತ್ತಿಲ್ಲ. ಸ್ಥಳೀಯ ಜನಪ್ರತಿನಿಧಿಗಳ ಸಹಯೋಗದಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಎಲ್ಲರಿಗೂ ಶುದ್ದ ಕುಡಿಯುವ ನೀರು ಹಾಗೂ ನೈರ್ಮಲ್ಯ ಕಾಪಾಡುವತ್ತ ಅರಿವು ಮೂಡಿಸಲು ಶ್ರಮಿಸಬೇಕು ಎಂದು ಹೇಳಿದರು. ವಸತಿ ಸಚಿವ ವಿ.ಸೋಮಣ್ಣ, ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್‌, ಸಂಸ್ಥೆಯ ಅಧ್ಯಕ್ಷೆ ಐಶ್ಚರ್ಯ ನಂಜಪ್ಪ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.