ಜೋಕಟ್ಟೆ : ನದಿ ಒಡಲು ಸೇರುತ್ತಿದೆ ಮಾಂಸದ ತ್ಯಾಜ್ಯ!

ಜನ, ಜಾನುವಾರುಗಳ ಆರೋಗ್ಯದ ಮೇಲೆ ದುಷ್ಪರಿಣಾಮ

Team Udayavani, Feb 11, 2020, 4:40 AM IST

kemmu-29

ಸುರತ್ಕಲ್‌: ಸ್ಥಳೀಯರಿಗೆ ಮೀನುಗಾರಿಕೆಗೆ, ಕೃಷಿಗೆ ಆಧಾರವಾಗಿರುವ ಫ‌ಲ್ಗುಣಿ ನದಿ ನೀರು ಇದೀಗ ಕಲ್ಮಶವಾಗುತ್ತಿದ್ದು, ಒಡಲಿಗೆ ನೇರವಾಗಿ ಮತ್ತು ಪರೋಕ್ಷವಾಗಿ ಮಾಂಸದ ತ್ಯಾಜ್ಯ ಸೇರುತ್ತಿದೆ. ಇದು ಜನ, ಜಾನುವಾರುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.

ಬೈಕಂಪಾಡಿ-ಜೋಕಟ್ಟೆಗೆ ಸಾಗುವ ಕೈಗಾರಿಕಾ ಪ್ರದೇಶದ ಜೋಕಟ್ಟೆ ಬ್ರಿಡ್ಜ್ ಬಳಿ ಭಾರೀ ಪ್ರಮಾಣದಲ್ಲಿ ಕೋಳಿ ತ್ಯಾಜ್ಯ ತಂದು ಸುರಿಯಲಾಗುತ್ತಿದೆ. ಇಲ್ಲಿನ ನೀರಿನ ಹರಿವಿಗಾಗಿ ನಿರ್ಮಿಸಿದ ಸಂಕವೊಂದು ಕೋಳಿ ತ್ಯಾಜ್ಯದಿಂದ ಮುಚ್ಚಿ ಹೋಗಿದ್ದು, ಸ್ಥಳದಲ್ಲಿ ದುರ್ವಾಸನೆ ಹರಡಿದೆ.

ಇನ್ನು ಹಳ್ಳಿಗಳ ಬಳಿ ಇರುವ ಮನೆಗಳ, ಕಂಪೆನಿಗಳ ತ್ಯಾಜ್ಯ, ಕೊಳಚೆ ನೀರು ರಾಜಕಾಲುವೆ ಮೂಲಕ ನೇರವಾಗಿ ನದಿಗೆ ಸೇರುತ್ತಿದ್ದು, ಆತಂಕಕ್ಕೆ ಕಾರಣವಾಗುತ್ತಿದೆ. ಫ‌ಲ್ಗುಣಿ ನದಿಯನ್ನು ಕಲುಷಿತಗೊಳಿಸುತ್ತಿದ್ದರೂ ಸಂಬಂಧಿ ಸಿದವರು ಕಣ್ಮುಚ್ಚಿ ಕುಳಿತಿರುವುದು ಅಚ್ಚರಿಗೆ ಕಾರಣವಾಗಿದೆ.

ಸತ್ತ ಪ್ರಾಣಿ, ಕೋಳಿ ತ್ಯಾಜ್ಯ
ಇಲ್ಲಿನ ಸ್ಥಳೀಯ ಗ್ರಾ.ಪಂ. ತ್ಯಾಜ್ಯ ವಿಲೇವಾರಿಗೆ ಒದ್ದಾಡುತ್ತಿದರೆ, ಮತ್ತೂಂದೆಡೆ ಕೆಲವರು ಸತ್ತಪ್ರಾಣಿಗಳು, ಕೋಳಿತ್ಯಾಜ್ಯ, ಹಳೆಯ ಬಟ್ಟೆ, ಕಸಕಡ್ಡಿಗಳನ್ನು ಚೀಲದಲ್ಲಿ ತುಂಬಿಸಿ ಇಲ್ಲಿನ ಸಂಕದ ಬಳಿ ನದಿಗೆ ಎಸೆಯುತ್ತಿದ್ದಾರೆ. ಸ್ಥಳೀಯ ಪ್ರಾಣಿ ಪಕ್ಷಿಗಳಿಗೂ ಈ ನೀರು ಕುಡಿಯಲು ಅಯೋಗ್ಯವಾಗಿದೆ. ಒಂದು ಕಾಲಕ್ಕೆ ಸಾವಿರಾರು ವಲಸೆ ಪಕ್ಷಿಗಳು ಆಶ್ರಯ ಕಂಡುಕೊಂಡು ಸಂತಾನೋತ್ಪತ್ತಿ ನಡೆಸುತ್ತಿದ್ದವು. ಆದರೆ ಇದೀಗ ಕಲ್ಮಶ ನೀರು ಇವುಗಳಿಗೂ ಕಂಟಕರವಾಗಿದೆ.

ಕಪ್ಪು ಬಣ್ಣಕ್ಕೆ ತಿರುಗಿದ ನೀರು
ಇಲ್ಲಿ ಅಗಾಧ ಪ್ರಮಾಣದಲ್ಲಿ ನೀರಿನ ಸೆಲೆಯಿದ್ದು ಇದು ಮರವೂರು ಬಳಿ ಫ‌ಲ್ಗುಣಿ ನದಿಯನ್ನು ಸೇರುತ್ತದೆ. ಈ ಹಿಂದೆ ಹಚ್ಚ ಹಸುರಿನ ತಿಳಿ ನೀರು ಕಂಗೊಳಿಸುತ್ತಿದ್ದರೆ ಇದೀಗ ಮಾಲಿನ್ಯ ಗೊಂಡು ಕಪ್ಪು ಬಣ್ಣಕ್ಕೆ ತಿರುಗಿದೆ. ಮೀನುಗಳ, ಮಾಂಸದ ತುಂಡಿಗಾಗಿ ಹುಡುಕಾಟಕ್ಕೆ ಪ್ರಾಣಿಗಳು ನೀರಿಗಿಳಿದರೆ ತೈಲ ಮಿಶ್ರೀತ ಕಪ್ಪು ಬಣ್ಣ ಮೈ ಎಲ್ಲ ಮೆತ್ತಿಕೊಳ್ಳತ್ತದೆ.

ಪಟ್ಟಣದಲ್ಲಿರುವ ಜನರಿಗೆ ಮಳವೂರು ನದಿಯಿಂದ ನೀರನ್ನು ಶುದ್ಧೀಕರಿಸಿ ಸರಬರಾಜು ಮಾಡಲಾಗುತ್ತಿದೆ. ಆದರೂ ಕೊಳಚೆ ನೀರು ಸೇರುತ್ತಿದ್ದರೂ ಅದನ್ನು ತಡೆದು ಪಾವಿತ್ರ್ಯ ಕಾಪಾಡುವ ನಿಟ್ಟಿನಲ್ಲಿ ಯಾರೊಬ್ಬರೂ ಗಮನಹರಿಸುತ್ತಿಲ್ಲ. ಇಂತಹ ಕೊಳಕು ನೀರಿನಿಂದ ಹಿಡಿಯುವ ಮೀನುಗಳ ಕೂಡ ಆರೋಗ್ಯಕ್ಕೆ ಮಾರಕವಾಗುವ ಸಾಧ್ಯತೆ ಇದೆ.

ಸುರಕ್ಷಾ ಬೇಲಿಯಲ್ಲೂ ನೇತಾಡುತ್ತದೆ ತ್ಯಾಜ್ಯ!
ಬೈಕಂಪಾಡಿಯಿಂದ ಕೈಗಾರಿಕಾ ಪ್ರದೇಶದ ಇಕ್ಕೆಲಗಳಲ್ಲೂ ತ್ಯಾಜ್ಯ ತಂದು ರಾಶಿ ಹಾಕದಂತೆ ಅರಣ್ಯ ಇಲಾಖೆ ಮತ್ತು ಇತರ ಇಲಾಖೆ ಸೇರಿ ರಸ್ತೆಯ ಎರಡೂ ಬದಿ ತಂತಿ ಬೇಲಿ ನಿರ್ಮಿಸಿ ಸಸಿಗಳನ್ನು ನೆಟ್ಟಿತ್ತು. ಇದರಿಂದ ತ್ಯಾಜ್ಯ ಸುರಿಯುವ ಘಟನೆ ಕೆಲವೆಡೆ ಕಡಿಮೆಯಾದರೂ ನೀರಿನ ಒರತೆ ಇರುವ ಪ್ರದೇಶದಲ್ಲಿ ತಂತಿ ಬೇಲಿ ಲೆಕ್ಕಿಸದೆ ಸುರಿಯುತ್ತಿದ್ದಾರೆ.

ನಿಗಾ ವಹಿಸಿ ಕ್ರಮ ಕೈಗೊಳ್ಳಲಾಗುವುದು
ಈ ಭಾಗದಲ್ಲಿ ತ್ಯಾಜ್ಯ ಎಸೆಯುವ ಬಗ್ಗೆ ಪರಿಶೀಲಿಸಿ ಸಂಬಂಧ ಪಟ್ಟ ಗ್ರಾಮ ಪಂಚಾಯತ್‌ಗೆ ಕಾರಣ ಕೇಳಿ ಪತ್ರ ಬರೆಯಲಾಗಿದೆ. ಹೆದ್ದಾರಿ ಬದಿ ತ್ಯಾಜ್ಯ ಎಸೆಯದಂತೆ ತಂತಿ ಬೇಲಿ ಹಾಕಲಾಗಿದೆ. ರಾತ್ರಿ ವೇಳೆ ಎಲ್ಲಿಂದಲೋ ಬಂದು ತ್ಯಾಜ್ಯ ಎಸೆದು ಹೋಗುವವರ ಬಗ್ಗೆ ನಿಗಾ ವಹಿಸಿ ಕ್ರಮ ಕೈಗೊಳ್ಳಬೇಕಿದೆ.
-ಕೀರ್ತಿ ಕುಮಾರ್‌,
ಪರಿಸರ ಅಧಿಕಾರಿ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ

ಲಕ್ಷ್ಮೀನಾರಾಯಣ ರಾವ್‌

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.