ಅಂಗವಿಕಲರಿಗಾಗಿ ನಿರ್ಮಿಸಿದ ಶೌಚಾಲಯಕ್ಕೆ ಬೀಗ

 ಬಳಕೆಗೆ ಅವಕಾಶವಿಲ್ಲ; ರಸ್ತೆಯಲ್ಲೇ ಮೂತ್ರ ವಿಸರ್ಜನೆ

Team Udayavani, Feb 11, 2020, 5:30 AM IST

394014485409265220200107_144502

ಉಡುಪಿ: ನಗರಸಭೆ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ನಾರ್ತ್‌ ಶಾಲೆ ಬಳಿ ವಿಶೇಷವಾಗಿ ಅಂಗವಿಕಲರಿಗಾಗಿ ನಿರ್ಮಿಸಲಾದ ಶೌಚಾಲಯ ಬಳಕೆಗೆ ಅವಕಾಶ ನೀಡದೆ ಬೀಗ ಹಾಕಲಾಗಿದೆ.

4.30 ಲಕ್ಷ ರೂ. ವೆಚ್ಚದ ಶೌಚಾಲಯ
2013-14ನೇ ಸಾಲಿನ ಎಸ್‌ಎಫ್ಸಿ ಶೇ. 3ರಷ್ಟು ನಿಧಿ ಬಳಸಿಕೊಂಡು ಸುಮಾರು 4.30 ಲ.ರೂ ವೆಚ್ಚದಲ್ಲಿ ಒಂದೇ ಕಟ್ಟಡದಲ್ಲಿ ಪುರುಷರಿಗೆ, ಮಹಿಳೆಯರಿಗೆ ಹಾಗೂ ಅಂಗವಿಕಲರಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಲಾಗಿತ್ತು. ಅದರೆ ಈ ಶೌಚಾಲಯ ಯಾರಿಗಾಗಿ ನಿರ್ಮಿಸಲಾಗಿತ್ತೋ ಅವರಿಗೆ ಬಳಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅಂಗವಿಕಲರು ಬೀಗ ಕಂಡು ಹಿಂದಿರುಗುತ್ತಿದ್ದಾರೆ.

ರಸ್ತೆಯಲ್ಲಿ ಮೂತ್ರ ವಿಸರ್ಜನೆ
ಶ್ರೀಕೃಷ್ಣ ಮಠ ಹಾಗೂ ಉಡುಪಿ ನಗರ ಸಂಪರ್ಕಿಸುವ ಮಧ್ಯ ಭಾಗದಲ್ಲಿ ಅಂಗವಿಕಲರಿಗೆ 2018ರಲ್ಲಿ ಶೌಚಾಲಯ ನಿರ್ಮಿಸಲಾಗಿತ್ತು. ಆದರೆ ಕಟ್ಟಡ ಉದ್ಘಾಟನೆಯಾದ ತಿಂಗಳಲ್ಲಿ ಬೀಗ ಹಾಕಿದ್ದು, ಶೌಚಾಲಯದ ಪಹರೆ ಕಾಯುವ ಸಿಬಂದಿ ನಿತ್ಯ ಬಳಕೆಯ ವಸ್ತುಗಳನ್ನು ಕೊಠಡಿಯಲ್ಲಿ ಇಟ್ಟಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಬೀಗ ಹಾಕಿದ್ದರಿಂದ ಹಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ.

ಮದ್ಯ ವ್ಯಸನಿ ಸಿಬಂದಿ
ಶೌಚಾಲಯ ಉಸ್ತುವಾರಿಗೆ ಗುತ್ತಿಗೆದಾರಿಂದ ನೇಮಕಗೊಂಡ ವ್ಯಕ್ತಿ ಮದ್ಯ ಸೇವಿಸಿ ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ದೂರುಗಳಿವೆ. ಅಂಗವಿಕಲರು ಏನಾದರೂ ಬಂದರೆ ಅವರನ್ನು 5ರಿಂದ 10 ನಿಮಿಷ ಕಾಯಿಸುತ್ತಿರುವ ಬಗ್ಗೆಯೂ ದೂರುಗಳಿವೆ. ಸಿಬಂದಿ ಮದ್ಯ ಸೇವನೆ ಮಾಡುವುದರಿಂದ ರಾತ್ರಿ ವೇಳೆ ಶೌಚಾಲಯಕ್ಕೆ ಹೋಗಲು ಜನರು ಭಯಪಡುತ್ತಾರೆ ಎಂದು ಸ್ಥಳೀಯರು ಹೇಳುತ್ತಾರೆ.

ನೀರಿನ ಸಮಸ್ಯೆ- ದುರ್ನಾತ
ಕಟ್ಟಡಕ್ಕೆ ಅಗತ್ಯವಿರುವ ನೀರು ಸರಬರಾಜು ಸರಿಯಾಗಿ ಆಗದೆ ಇರುವುದರಿಂದ ದುರ್ನಾತ ದಿಂದ ಶೌಚಾಲಯ ಕಟ್ಟಡ ಸಮೀಪ ತೆರಳಲು ಸಾಧ್ಯವಾಗುತ್ತಿಲ್ಲ. ಈ ಮಾರ್ಗವಾಗಿ ಶ್ರೀಕೃಷ್ಣ ಮಠಕ್ಕೆ ತೆರಳುವ ಪ್ರವಾಸಿಗರು ಮೂಗು ಮುಚ್ಚಿಕೊಂಡು ಹೋಗಬೇಕಾಗಿದೆ. ಪರಿಸರ ಸುತ್ತಮುತ್ತಲಿನಲ್ಲಿ ಸ್ವತ್ಛತೆಯ ಕೊರತೆಯಿಂದ ಸೊಳ್ಳೆ ಉತ್ಪಾದನ ಕೇಂದ್ರವಾಗಿ ಪರಿವರ್ತನೆಯಾಗಿದೆ.

ಅಧಿಕಾರಿಗಳು ಕ್ರಮ ಕೈಗೊಳ್ಳಿ
ಅಂಗವಿಕಲರಿಗಾಗಿ ನಿರ್ಮಾಣವಾದ ಶೌಚಾಲಯ ಇದೀಗ ಅವರ ಬಳಕೆಗೆ ಅವಕಾಶ ನೀಡದೆ ಬೀಗ ಹಾಕಿರುವುದು ಸರಿಯಲ್ಲ. ನಗರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ತೆಗೆದುಕೊಳ್ಳಬೇಕು.
-ಮೀನಾಕ್ಷಿ ಮಾಧವ ಬನ್ನಂಜೆ, ಮಾಜಿ ನಗರಸಭೆ ಅಧ್ಯಕ್ಷೆ.

ಟಾಪ್ ನ್ಯೂಸ್

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.