ಮಕ್ಕಳೊಂದಿಗೆ ಸಂವಾದದಲ್ಲಿ ಯೋಧ ಸಂತೋಷ್‌ ಹೇಳಿಕೆ

370ನೇ ವಿಧಿ ರದ್ದತಿ ಬಳಿಕ ಕಲ್ಲೆಸೆತ ನಿಲುಗಡೆ

Team Udayavani, Feb 11, 2020, 6:00 AM IST

kemmu-38

ಸಾಂದರ್ಭಿಕ ಚಿತ್ರ

ಉಡುಪಿ: ಜಮ್ಮು ಕಾಶ್ಮೀರದಲ್ಲಿ ಅಸ್ತಿತ್ವದಲ್ಲಿದ್ದ 370ನೇ ವಿಧಿಯನ್ನು ಕೇಂದ್ರ ಸರಕಾರ ರದ್ದುಗೊಳಿಸಿದ ಅನಂತರ ಸೈನಿಕರ ಮೇಲೆ ಜನರು ಕಲ್ಲೆಸೆಯುವುದು ಸಂಪೂರ್ಣ ನಿಂತಿದೆ. ಸೈನಿಕರಿಗೆ ಸರಕಾರ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿರುವುದರಿಂದ ಜನರು ಸೈನಿಕರಿಗೆ ಪ್ರತಿರೋಧ ಒಡ್ಡುವುದನ್ನು ಬಿಟ್ಟಿದ್ದಾರೆ ಎಂದು ಪಾಕ್‌ ಆಕ್ರಮಿತ ಕಾಶ್ಮೀರ ಭಾಗದ ಸೇನಾ ಕಮಾಂಡರ್‌, ಮೂಲತಃ ವಿಜಯಪುರದ ಸಂತೋಷ್‌ ಹೇಳಿದರು.

ರಜೆಯ ಹಿನ್ನೆಲೆಯಲ್ಲಿ ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ಆಗಮಿಸಿದ್ದ ಅವರು ನಿಟ್ಟೂರು ಪ್ರೌಢಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಸಿಎಎ, ಎನ್‌ಪಿಆರ್‌ ಅನಿವಾರ್ಯ ಪ್ರಪಂಚದ ಬಹುತೇಕ ರಾಷ್ಟ್ರಗಳು ಸಿಎಎ, ಎನ್‌ಪಿಆರ್‌ನಂತಹ ಕಾನೂನುಗಳನ್ನು ಕಡ್ಡಾಯವಾಗಿ ಜಾರಿಗೆ ತಂದಿವೆ. ಭಾರತದಲ್ಲಿ ಮಾತ್ರ ಇದು ಜಾರಿ ಇರಲಿಲ್ಲ. ಪ್ರಸ್ತುತ ಕೇಂದ್ರ ಸರಕಾರ ಇದನ್ನು ಜಾರಿಗೊಳಿಸಲು ಮುಂದಾಗಿರುವುದು ಒಳ್ಳೆಯ ಕೆಲಸ. ಇದು ಆಗಲೇ ಬೇಕು. ಪ್ರತಿಯೊಂದು ದೇಶವೂ ಅಕ್ರಮ ನುಸುಳುಕೋರರನ್ನು, ಭಯೋತ್ಪಾದಕರನ್ನು ಹಿಮ್ಮೆಟ್ಟಿಸದೆ ಹೋದಲ್ಲಿ ಆ ದೇಶಕ್ಕೆ ಉಳಿಗಾಲವಿಲ್ಲ. ಜನರಿಗೆ ನೆಮ್ಮದಿಯಿಂದ ಜೀವನ ಮಾಡಲು ಕಷ್ಟವಾಗುತ್ತದೆ. ಆದ್ದರಿಂದ ಈ ಕಾನೂನು ಬರಲೇಬೇಕಿತ್ತು ಎಂದರು.

ಸೇನೆಗೆ ಸೇರ್ಪಡೆ ಸುಲಭ ಸಾಧ್ಯ
ಯುವಕರು ಸೇನೆಗೆ ಸೇರ್ಪಡೆಗೊಳ್ಳುವುದು ಈಗ ಹಿಂದಿಗಿಂತ ಸರಳ ಮತ್ತು ಸುಲಭವಾಗಿದೆ. ಸೇನೆ ಸೇರ್ಪಡೆಯ ಪ್ರತಿ ಮಾಹಿತಿಗಳನ್ನು ಆನ್‌ಲೈನ್‌ ತಂತ್ರಜ್ಞಾನದಂತಹ ಸುಧಾರಿತ ವ್ಯವಸ್ಥೆಗೆ ಅಳವಡಿಸಲಾಗಿದೆ. ತರಬೇತಿಯೂ ಉತ್ತಮವಾಗಿದ್ದು ಯುವಕರು ಸೇನೆಗೆ ಸೇರ್ಪಡೆಗೊಳ್ಳಲು ಮನಸ್ಸು ಮಾಡಬೇಕು ಎಂದರು.

ಸದ್ಯದಲ್ಲೇ ಯುವತಿಯರೂ ಕಮಾಂಡರ್‌
ಜಗತ್ತಿನ ಅನ್ಯ ರಾಷ್ಟ್ರಗಳಲ್ಲಿ ಈಗಾಗಲೇ ಸೇನೆಯ ಸೇವೆಗೆ ಯುವತಿಯರನ್ನು ಸೇರ್ಪಡೆಗೊಳಿ ಸಲಾಗು ತ್ತಿದೆ. ಇಸ್ರೇಲ್‌ ಸೇನೆಯಲ್ಲಿ ಯುವತಿಯರೇ ಅಧಿಕ ಸಂಖ್ಯೆಯಲ್ಲಿದ್ದಾರೆ. ಸದ್ಯದಲ್ಲೇ ನಮ್ಮ ಯುವತಿ ಯರು ಸೇನೆಯಲ್ಲಿ ಕಮಾಂಡರ್‌ಗಳಾಗಿ ಗಡಿ ಕಾಯುವ ಅವಕಾಶ ಸಿಗಲಿಏಆ ಎಂದರು.

ರಾಜ್ಯದಲ್ಲಿ ನಮ್ಮ ಉತ್ತರ ಕರ್ನಾಟಕ ಭಾಗಕ್ಕೆ ಹೋಲಿಸಿದರೆ ಕರಾವಳಿಯಲ್ಲಿ ಶಿಕ್ಷಣ ವ್ಯವಸ್ಥೆ ಅತ್ಯುತ್ತಮವಾಗಿದೆ. ಆದರೆ ಉತ್ತರ ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿ ಶಿಕ್ಷಣ ಸೇರಿದಂತೆ ಜನಜೀವನ ವ್ಯವಸ್ಥೆ ಇನ್ನೂ ನಿರೀಕ್ಷಿತ ಸುಧಾರಣೆ ಕಾಣದಿರುವುದು ವಿಷಾದನೀಯ. ಹುತಾತ್ಮ ಯೋಧ ಹನುಮಂತಪ್ಪ ಅವರ ಗ್ರಾಮಕ್ಕೆ ಇತ್ತೀಚೆಗೆ ಹೋಗಿದ್ದೆ. ಅಲ್ಲಿನ ರಸ್ತೆ, ಶಾಲೆ ಮತ್ತು ಆ ಯೋಧನ ಮನೆಯ ಗಂಭೀರ ಸ್ಥಿತಿ ಕಂಡು ಕಣ್ಣೀರು ಬಂತು ಎಂದರು. ಮುಖ್ಯೋಪಾಧ್ಯಾಯ ಮುರಳಿ ಕಡೆಕಾರ್‌, ಸಾಮಾಜಿಕ ಕಾರ್ಯಕರ್ತರಾದ ವಾಸುದೇವ ಭಟ್‌ ಪೆರಂಪಳ್ಳಿ ಮತ್ತು ಪ್ರಶಾಂತ್‌ ಶೆಟ್ಟಿ ಅಂಜಾರು ಉಪಸ್ಥಿತರಿದ್ದರು.

ಗುಮಾಸ್ತನಿಂದ ಕಮಾಂಡರ್‌ ತನಕ
ಸೈನಿಕನಾಗಬೇಕೆಂಬ ಹಂಬಲದಿಂದ ಗುಮಾಸ್ತನಾಗಿ ಸೇನೆಗೆ ಸೇರಿಕೊಂಡೆ. ಅನಂತರ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿ ಕಮಾಂಡರ್‌ ಆಗಿ ಭಡ್ತಿ ಪಡೆದ ಅವರು ಸಿಯಾಚಿನ್‌, ಲಡಾಖ್‌, ಪೂಂಛ… ಸುಂದರಬನಿ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಂತಹ ಅತೀ ಕೊರೆಯುವ ಚಳಿ ಇರುವ ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ ಕ್ಷಣಗಳನ್ನು ಎಳೆ ಎಳೆಯಾಗಿ ಮಕ್ಕಳೊಡನೆ ತೆರೆದಿಟ್ಟರು.

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.