ನಾಪತ್ತೆಯಾಗಿದ್ದ ಪೆರುವಾಜೆ ಗ್ರಾಮದ ಬಾಲಕ ಪತ್ತೆ
Team Udayavani, Feb 11, 2020, 3:00 PM IST
ಬೆಳ್ಳಾರೆ: ಮನೆಯ ಶೌಚಾಲಯಕ್ಕೆ ತೆರಳುವುದಾಗಿ ಹೇಳಿ ಬೆಳಿಗ್ಗೆ ನಾಪತ್ತೆಯಾಗಿದ್ದ ಬಾಲಕ ಪುತ್ತೂರು ಬಸ್ಸು ನಿಲ್ದಾಣದಲ್ಲಿ ಪತ್ತೆಯಾಗಿದ್ದಾನೆ.
ಬೆಳ್ಳಾರೆ ಸನಿಹದ ಪೆರುವಾಜೆ ಗ್ರಾಮದ ಕುಂಡಡ್ಕ ನಿವಾಸಿ ಕುಂಞ ಅವರ ಪುತ್ರ, ಚೆನ್ನಾವರ ಕಿ.ಪ್ರಾ.ಶಾಲೆಯ ಐದನೇ ತರಗತಿ ವಿದ್ಯಾರ್ಥಿ ಪ್ರಜ್ವಲ್ (11) ಪತ್ತೆಯಾದ ಬಾಲಕ.
ಬೆಳಗ್ಗೆ 7 ಗಂಟೆ ಹೊತ್ತಿಗೆ ತಾಯಿಯ ಬಳಿ ಶೌಚಾಲಯಕ್ಕೆ ತೆರಳುವುದಾಗಿ ಹೇಳಿ ಹೋಗಿದ್ದ. ತುಂಬಾ ಹೊತ್ತಾದರೂ ಬಾರದಿರುವ ಕಾರಣ ಮನೆ ಮಂದಿ ಹುಡುಕಾಟ ನಡೆಸಿದ್ದಾರೆ. ಆದರೆ ಆತ ಪತ್ತೆಯಾಗಿರಲಿಲ್ಲ. ಕೊನೆಗೆ ಆತ ಬೆಳ್ಳಾರೆ- ಸವಣೂರು-ಪುತ್ತೂರು ಬಸ್ ನಲ್ಲಿ ತೆರಳಿರುವ ಮಾಹಿತಿ ದೊರೆತು, ಪುತ್ತೂರು ಬಸ್ ನಿಲ್ದಾಣದಲ್ಲಿ ಹುಡುಕಾಟ ನಡೆಸಲಾಯಿತು. ಅಲ್ಲಿ ಆತ ಪತ್ತೆಯಾಗಿದ್ದಾನೆ. ಬೆಳ್ಳಾರೆ ಪೊಲೀಸ್ ಠಾಣಾ ಸಿಬಂದಿಗಳು ಹಾಗೂ ಸಾರ್ವಜನಿಕರು ಹುಡುಕಾಟದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ