ಸ್ನೇಹಲೋಕ; ಕ್ಲಬ್‌ ಒಂದು, ಕೆಲಸು ನೂರು…


Team Udayavani, Feb 12, 2020, 5:00 AM IST

sds-1

ಲೇಡಿಸ್‌ ಕ್ಲಬ್‌ ಅಂದಾಕ್ಷಣ, ಹರಟೆ ಹೊಡೆಯಲು, ಮೋಜು ಮಸ್ತಿ ಮಾಡಲು ಮಹಿಳೆಯರು ಒಂದೆಡೆ ಸೇರುವ ತಾಣ ಎಂಬ ಕಲ್ಪನೆ ಕೆಲವರಿಗೆ ಇದೆ. ಅಂಥ ಕ್ಲಬ್‌ಗಳಿಂದ ಏನೂ ಪ್ರಯೋಜನವಿಲ್ಲ ಅಂತ ಮೂಗು ಮುರಿಯುವವರೂ ಇದ್ದಾರೆ. ಆದರೆ, ಈ ಮಾತಿಗೆ ಅಪವಾದ ಎನ್ನುವಂತೆ ಬಾಗಲಕೋಟೆ ಜಿಲ್ಲೆಯ ಮುಧೋಳದ “ಸ್ನೇಹಲೋಕ ಲೇಡಿಸ್‌ ಕ್ಲಬ್‌’ ಕೆಲಸ ಮಾಡುತ್ತಿದೆ. ಚೈನ್‌ವರ್ಕ್‌ ಮೂಲಕ, ಮಹಿಳಾ ಸಬಲೀಕರಣದ ಹಾದಿಯಲ್ಲಿ ಶ್ರಮಿಸುತ್ತಿರುವ ಈ ಕ್ಲಬ್‌ನ ಕೆಲಸಗಳು ಶ್ಲಾಘನೀಯ.

ಕ್ಲಬ್‌ ಹಿಂದಿನ ಶಕ್ತಿ
2010ರಲ್ಲಿ ಪ್ರಾರಂಭವಾದ ಈ ಕ್ಲಬ್‌, ಇದುವರೆಗೆ ಐದು ಸಾವಿರಕ್ಕೂ ಹೆಚ್ಚು ಮಹಿಳೆಯರನ್ನು ಆರ್ಥಿಕವಾಗಿ ಗಟ್ಟಿಗೊಳಿಸಿದೆ. ಸರ್ಕಾರದ ಅನುದಾನ, ಬೆಂಬಲದ ನಿರೀಕ್ಷೆಯಿಲ್ಲದೆ ಕೆಲಸ ಮಾಡುತ್ತಿರುವ ಈ ಕ್ಲಬ್‌ನ ಸ್ಥಾಪಕಿ ಸ್ನೇಹಾ ಹಿರೇಮಠ ಎಂಬ ಬಡ ಹೆಣ್ಣುಮಗಳು. 8ನೇ ತರಗತಿಯವರೆಗೆ ಓದಿ, ನಂತರ ಕೂಲಿ ಮಾಡುತ್ತಲೇ ಬಾಹ್ಯವಾಗಿ ಎಸ್ಸೆಸ್ಸೆಲ್ಸಿ ಹಾಗೂ ಎನ್‌ಟಿಸಿ ಕೋರ್ಸ್‌ ಮುಗಿಸಿರುವ ಸ್ನೇಹಾಳ ಕೈ ಹಿಡಿದಿದ್ದು ಹೊಲಿಗೆ ಕೆಲಸ. ಹೊಟ್ಟೆಪಾಡಿಗಾಗಿ ಟೇಲರಿಂಗ್‌ ಕೆಲಸ ಪ್ರಾರಂಭಿಸಿದ ಈಕೆ, ತನ್ನಂತೆಯೇ ಇತರೆ ಹೆಣ್ಣುಮಕ್ಕಳೂ ದುಡಿಯುವಂತಾಗಲಿ ಎಂದು ಹೊಲಿಗೆ ತರಬೇತಿಯನ್ನೂ ನೀಡತೊಡಗಿದರು.

ಆದರೆ, ಸ್ನೇಹಾರ ಬಳಿ ತರಬೇತಿಗೆ ಬರುತ್ತಿದ್ದ ಕೆಲವರು, ಕನಿಷ್ಠ ಶುಲ್ಕವನ್ನೂ ಭರಿಸಲಾಗದೆ, ಅರ್ಧದಲ್ಲಿಯೇ ಕಲಿಕೆ ನಿಲ್ಲಿಸುತ್ತಿದ್ದರು. ಅಂಥವರಿಗೆ ಉಚಿತವಾಗಿ ಹೊಲಿಗೆ ಕಲಿಸತೊಡಗಿದ ಸ್ನೇಹಾ, ಬಡ ಮಹಿಳೆಯರನ್ನು ಒಗ್ಗೂಡಿಸಿಕೊಂಡು ಕ್ಲಬ್‌ ಸ್ಥಾಪಿಸಲು ನಿರ್ಧರಿಸಿದರು. ಹಾಗೆ ಶುರುವಾಗಿದ್ದೇ, “ಸ್ನೇಹಲೋಕ ಲೇಡಿಸ್‌ ಕ್ಲಬ್‌’.

ಸ್ವ ಉದ್ಯೋಗ ತರಬೇತಿ
ಪ್ರಾರಂಭದಲ್ಲಿ ಕೆಲವೇ ಮಹಿಳೆಯರಿಂದ ಶುರುವಾದ ಕ್ಲಬ್‌, ಈಗ ಮುಧೋಳ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಸ್ವ ಉದ್ಯೋಗ ತರಬೇತಿ ನೀಡುವಷ್ಟು ಬೆಳೆದಿದೆ. ಬಡ ಹೆಣ್ಣು ಮಕ್ಕಳಿಗೆ ಉಚಿತವಾಗಿ ಕಸೂತಿ, ಕ್ಯಾಂಡಲ್‌ ತಯಾರಿಕೆ, ಹ್ಯಾಂಡ್‌ ಪರ್ಸ್‌ ಮತ್ತು ಗೊಂಬೆ ತಯಾರಿಕೆ, ಮುತ್ತಿನ ಅಲಂಕಾರ, ಮೆಹಂದಿ, ಬ್ಯೂಟಿಷಿಯನ್‌ ಕೋರ್ಸ್‌ ಸೇರಿದಂತೆ ಅನೇಕ ಸ್ವ ಉದ್ಯೋಗ ತರಬೇತಿ ನೀಡಲಾಗುತ್ತಿದೆ.

ಸಮಾಜಮುಖಿ ಕೆಲಸ
ಬಾಲ್ಯವಿವಾಹದ ಕುರಿತು ಜಾಗೃತಿ, ರಕ್ತದಾನ ಶಿಬಿರ, ನೆರೆ-ಬರ ಪರಿಹಾರ ಸಂಗ್ರಹದಲ್ಲಿಯೂ ಈ ಕ್ಲಬ್‌ ಹಿಂದೆ ಬಿದ್ದಿಲ್ಲ. ಸಭೆ- ಸಮಾರಂಭದಲ್ಲಿ ಮಿಕ್ಕಿದ ಆಹಾರವನ್ನು ಸಂಗ್ರಹಿಸಿ ಸ್ಲಂ ನಿವಾಸಿಗಳಿಗೆ, ಕೂಲಿ ಕಾರ್ಮಿಕರಿಗೆ ವಿತರಿಸುವ ಕೆಲಸವನ್ನೂ ಕ್ಲಬ್‌ ಮಾಡುತ್ತಿದೆ. ಸದಸ್ಯರೆಲ್ಲ ಒಟ್ಟಾಗಿ ಪಟ್ಟಣದ ಬೀದಿಗಳನ್ನು ತಿಂಗಳಿಗೊಂದು ಬಾರಿ ಸ್ವತ್ಛಗೊಳಿಸುತ್ತಾರೆ. ಈ ಕ್ಲಬ್‌ನಲ್ಲಿ ಪದಾಧಿಕಾರಿಗಳೇ ಇಲ್ಲ. ನಾವೆಲ್ಲರೂ ಸಮಾನರು ಎಂದು ಹೇಳುವ ಸ್ನೇಹಾ ಮತ್ತು ಅವರ ತಂಡದ ಕೆಲಸಕ್ಕೊಂದು ಸಲಾಂ ಹೇಳಲೇಬೇಕು.

-ಟಿ.ಶಿವಕುಮಾರ್‌

ಟಾಪ್ ನ್ಯೂಸ್

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.