ಹಸಿರುಡುಗೆ ತೊಟ್ಟು ಕಂಗೊಳಿಸಲಿವೆ ರಸ್ತೆಗಳು


Team Udayavani, Feb 12, 2020, 11:20 AM IST

huballi-tdy-3

ಸಾಂಧರ್ಬಿಕ ಚಿತ್ರ

ಹುಬ್ಬಳ್ಳಿ: ಮಹಾನಗರ ಸೌಂದರ್ಯಿಕರಣ ಹಾಗೂ ಹಸಿರು ಪರಿಸರ ನಿರ್ಮಾಣ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ರಸ್ತೆ ವಿಭಜಕ (ಡಿವೈಡರ್‌)ಗಳಲ್ಲಿ ಗಿಡ ನೆಡುವ ಕಾರ್ಯಕ್ಕೆ ಮುಂದಾಗಿದ್ದು, ಮಹಾನಗರ ಪ್ರವೇಶಿಸುವ ಪ್ರಮುಖ ರಸ್ತೆಗಳು ಹಸಿರಿನಿಂದ ಕಂಗೊಳಿಸಲಿವೆ.

ಮಹಾನಗರ ಪ್ರವೇಶಿಸುವ ಪ್ರಮುಖ ರಸ್ತೆಗಳು ಸುಧಾರಣೆ ಕಾಣುತ್ತಿವೆ. ಇದಕ್ಕೆ ಪೂರಕವಾಗಿ ಒಂದಿಷ್ಟು ಹಸಿರು ಸ್ಪರ್ಶ ನೀಡಿದರೆ ರಸ್ತೆಗಳ ಅಂದ ಹೆಚ್ಚಾಗಿ ನಗರದ ಸೌಂದರ್ಯ ಮತ್ತಷ್ಟು ಹೆಚ್ಚಲಿದೆ ಎನ್ನುವ ಕಾರಣಕ್ಕೆ ರಸ್ತೆ ವಿಭಜಕಗಳಲ್ಲಿ ವಿವಿಧ ಜಾತಿಯ ಗಿಡ ನೆಡುವುದರ ಜೊತೆಗೆ ಲಾನ್‌ ಬೆಳೆಸಲು ಪಾಲಿಕೆ ಮುಂದಾಗಿದೆ. ಮೊದಲ ಹಂತದಲ್ಲಿ ಮಹಾನಗರದ ಎರಡು ರಸ್ತೆಗಳನ್ನು ಆಯ್ಕೆ ಮಾಡಿಕೊಂಡು ಬೆಂಗಳೂರು ಮೂಲದ ನರ್ಸರಿಮೆನ್‌ ಕೋ-ಆಪರೇಟಿವ್‌ ಸೊಸೈಟಿ ಸಂಸ್ಥೆಗೆ ಗುತ್ತಿಗೆ ನೀಡಿದೆ. ಈಗಾಗಲೇ ಲ್ಯಾಮಿಂಗ್ಟನ್‌ ರಸ್ತೆ ವಿಭಜಕದಲ್ಲಿ ಗಿಡ ನೆಡಲಾಗಿದೆ.

ಮಹಾನಗರ ಪಾಲಿಕೆಯ “ಹಸಿರು ಉಸಿರು’ ಯೋಜನೆಯಲ್ಲಿ ಈ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಮಹಾನಗರ ಪ್ರಮುಖ ರಸ್ತೆಯಾದ ಲ್ಯಾಮಿಂಗ್ಟನ್‌ ಹಾಗೂ ವಿಮಾನ ನಿಲ್ದಾಣ ರಸ್ತೆ ಆಯ್ಕೆ ಮಾಡಿಕೊಳ್ಳಲಾಗಿದ್ದು, ಗಿಡ ನೆಡುವ ಕಾರ್ಯ ಆರಂಭವಾಗಿದೆ. ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತ, ವಿಮಾನ ನಿಲ್ದಾಣದಿಂದ ಹೊಸೂರು ವೃತ್ತದವರೆಗೆ ಗಿಡ ನೆಡಲು ನಿರ್ಧರಿಸಲಾಗಿದ್ದಾದರೂ ಲೋಕೋಪಯೋಗಿ ಇಲಾಖೆಯಿಂದ ವಿಮಾನ ನಿಲ್ದಾಣ ರಸ್ತೆಯಲ್ಲಿ ರಸ್ತೆ ವಿಭಜಕ ನಿರ್ಮಾಣ ಹಾಗೂ ದುರಸ್ತಿ ಕಾರ್ಯ ಕೈಗೊಂಡಿರುವ ಕಾರಣ ಅಕ್ಷಯ ಪಾರ್ಕ್‌ವರೆಗೆ ನೆಟ್ಟು ನಂತರ ಅದನ್ನು ಮುಂದುವರಿಸುವ ಯೋಜನೆ ಇದೆ.

ಪ್ರಮುಖ ರಸ್ತೆಗಳ ಗುರಿ: ನಗರದ ಎಲ್ಲಾ ಪ್ರಮುಖ ರಸ್ತೆಗಳ ವಿಭಜಕಗಳಲ್ಲಿ ಗಿಡ ನೆಡಲು ಪಾಲಿಕೆ ಯೋಜನೆ ರೂಪಿಸಿದೆ. ಶೀಘ್ರದಲ್ಲಿ ಕುಸಗಲ್ಲ ರಸ್ತೆಯಲ್ಲಿ ಸುಮಾರು 14 ಲಕ್ಷ ರೂ. ವೆಚ್ಚದಲ್ಲಿ ಯೋಜನೆ ಕಾರ್ಯಗತಗೊಳ್ಳಲಿದೆ. ನಂತರದಲ್ಲಿ ಧಾರವಾಡದ ಕೆಸಿಡಿ ಕಾಲೇಜು ರಸ್ತೆ ಹಸಿರೀಕರಣಗೊಳ್ಳಲಿವೆ. ಇದೀಗ ಗಿಡ ನೆಡುತ್ತಿರುವ ರಸ್ತೆ ವಿಭಜಕಗಳಲ್ಲಿ ಹಿಂದೆ ಇದೇ ಯೋಜನೆಯಲ್ಲಿ ನೆಡಲಾಗಿತ್ತಾದರೂ ನಿರ್ವಹಣೆ ಕೊರತೆ, ರಸ್ತೆ ದುರಸ್ತಿ ಕಾರ್ಯಗಳಿಂದ ರಸ್ತೆ ವಿಭಜಕ ಸೇರಿದಂತೆ ಗಿಡಗಳು ಇಲ್ಲದಂತಾಗಿದ್ದವು. ಇದೀಗ ಗುತ್ತಿಗೆ ಪಡೆದಿರುವ ಸಂಸ್ಥೆ ಒಂದು ವರ್ಷ ಕಾಲ ನಿರ್ವಹಣೆ ಕಾರ್ಯ ಮಾಡಲಿದೆ. ಮುಂದೆ ನಿರ್ವಹಣೆ ಭಾರ ಯಾರದ್ದು ಎಂಬ ಪ್ರಶ್ನೆ ಮೂಡಿದೆ. ಪಾಲಿಕೆ ಈ ನಿಟ್ಟಿನಲ್ಲಿ ಮುಂದೆಯೂ ಜವಾಬ್ದಾರಿ ಹೊರಬೇಕಿದೆ.

ಗಿಡಗಳಿಗೆ ಕಳ್ಳರ ಕಾಟ :  ಇತ್ತೀಚೆಗೆ ಉದ್ಘಾಟನೆಗೊಂಡಿರುವ ಟೆಂಡರ್‌ ಶ್ಯೂರ್‌ ರಸ್ತೆಯ ವಿಭಜಕದಲ್ಲಿ ನೆಟ್ಟಿದ್ದ ಗಿಡಗಳಿಗೆ ಕಳ್ಳರ ಕಾಟ ಹೆಚ್ಚಾಗಿತ್ತು. ಆರಂಭದಲ್ಲಿ ಗಿಡಗಳನ್ನು ಕಾಯಲು ಭದ್ರತಾ ಸಿಬ್ಬಂದಿ ನೇಮಿಸುವ ಪರಿಸ್ಥಿತಿ ಒದಗಿಬಂದಿತ್ತು. ರಾತ್ರಿ ವೇಳೆ ಸುತ್ತಮುತ್ತಲಿನ ಜನರು ಗಿಡಗಳನ್ನು ಕಿತ್ತುಕೊಂಡು ಹೋಗುತ್ತಿರುವುದು ಪಾಲಿಕೆ ಅಧಿಕಾರಿಗಳಿಗೆ ತಲೆನೋವಾಗಿತ್ತು. ಇದೀಗ ಇಲ್ಲಿನ ಗಿಡಗಳ ಪರಿಸ್ಥಿತಿ ಹೇಗೆ ಎಂಬುವುದು ಪಾಲಿಕೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಚಿಂತೆಯಾಗಿ ಪರಿಣಮಿಸಿದ್ದು, ಈ ಗಿಡ ಹಾಗೂ ಸಸಿಗಳು ಕಡಿಮೆ ದರದಲ್ಲಿ ಎಲ್ಲಾ ನರ್ಸರಿಗಳಲ್ಲಿ ದೊರೆಯುತ್ತಿದ್ದು, ಪಾಲಿಕೆಯ ಈ ಕಾರ್ಯಕ್ಕೆ ಜನರು ಸಹಕಾರ ನೀಡಬೇಕು ಎಂಬುವುದು ಪಾಲಿಕೆ ಅಧಿಕಾರಿಗಳ ಮನವಿಯಾಗಿದೆ.

38.8 ಲಕ್ಷ ರೂ. ವೆಚ್ಚ :  ಲ್ಯಾಮಿಂಗ್ಟನ್‌ ಹಾಗೂ ವಿಮಾನ ನಿಲ್ದಾಣ ರಸ್ತೆಗಳಲ್ಲಿ ರಾಯಲ್‌ ಫಾಮ್‌, ಫಾಗಸೇrಲ್‌ ತಳಿಯ ಗಿಡಗಳನ್ನು ನೆಟ್ಟು ಅವುಗಳ ಮಧ್ಯದಲ್ಲಿ ಪೊದೆ ರೀತಿಯಲ್ಲಿ ಬೆಳೆಯುವ ಸಸಿಗಳನ್ನು ನೆಡಲಾಗುತ್ತಿದೆ. ಈ ಎರಡು ರಸ್ತೆಗಳಲ್ಲಿ ಸುಮಾರು 14,000ಗಿಡ ಹಾಗೂ ಸಸಿ ನೆಡಲಾಗುತ್ತಿದೆ. ಇದಕ್ಕಾಗಿ ಸುಮಾರು 38.8 ಲಕ್ಷ ರೂ. ಖರ್ಚು ಮಾಡಲಾಗುತ್ತಿದೆ. ಇದೀಗ ಆಯ್ಕೆ ಮಾಡಿಕೊಂಡಿರುವ ಗಿಡ ಹಾಗೂ ಸಸಿಗಳು ರಸ್ತೆ-ವಿಭಜಕಕ್ಕೆ ಯಾವುದೇ ಧಕ್ಕೆ ಮಾಡುವುದಿಲ್ಲ. ಮೇಲಾಗಿ ಜಾನುವಾರುಗಳು ತಿನ್ನದಂತಹ ಗಿಡಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕೆಲವೆಡೆ ರಸ್ತೆ ವಿಭಜಕಗಳು ಹಾಳಾಗಿದ್ದರೆ ಅವುಗಳನ್ನು ದುರಸ್ತಿ ಮಾಡಿಸಿ ಸಸಿ ಬೆಳೆಸುವ ಕಾರ್ಯ ನಡೆದಿದೆ.

ಹಸಿರು ಉಸಿರು ಯೋಜನೆಯಲ್ಲಿ ನಗರದ ಸೌಂದಯೀìಕರಣ ಹಾಗೂ ಹಸಿರೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಮಹಾನಗರದ ಪ್ರಮುಖ ರಸ್ತೆಗಳನ್ನು ಹಸಿರು ಉಸಿರು ಯೋಜನೆಗೆ ಒಳಪಡಿಸುವ ಯೋಜನೆಯಿದೆ. ಪಾಲಿಕೆ ಆಯುಕ್ತರ ಮಾರ್ಗದರ್ಶನದ ಮೇರೆಗೆ ಇನ್ನಷ್ಟು ಕಾರ್ಯ ಕೈಗೊಳ್ಳಲಾಗುವುದು. ಜನರ ಸಹಭಾಗಿತ್ವ ಇಲ್ಲದೆ ಯಾವುದೇ ಯೋಜನೆ ಯಶಸ್ವಿಯಾಗಲು ಸಾಧ್ಯವಿಲ್ಲ. ನೆಟ್ಟಿರುವ ಗಿಡಗಳನ್ನು ಹಾಳು ಮಾಡದೆ ಕಾಪಾಡಿಕೊಳ್ಳಬೇಕು. ಇ. ತಿಮ್ಮಪ್ಪ, ಅಧೀಕ್ಷಕ ಅಭಿಯಂತ, ಹು-ಧಾ ಮಹಾನಗರ ಪಾಲಿಕೆ

 

ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.