ಯುವಜನ ಮೇಳಕ್ಕೆಭರ್ಜರಿ ಸಿದ್ಧತೆ


Team Udayavani, Feb 12, 2020, 1:02 PM IST

gadaga-tdy-1

ಗಜೇಂದ್ರಗಡ: ಕೋಟೆ ನಾಡಿನಲ್ಲಿ ಎರಡನೇ ಬಾರಿಗೆ ಸಾಂಸ್ಕೃತಿಕ ವೈಭವ ಸಾರುವ ಉದ್ದೇಶದಿಂದ ಆಯೋಜಿಸಿರುವ ರಾಜ್ಯಮಟ್ಟದ ಯುವಜನ ಮೇಳಕ್ಕೆ ಭಾವೈಕ್ಯ ನಗರಿ ಗಜೇಂದ್ರಗಡ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ, ರಾಜ್ಯ ಯುವಜನ ಒಕ್ಕೂಟ ಆಶ್ರಯದಲ್ಲಿ 2019-20ನೇ ಸಾಲಿನ ರಾಜ್ಯಮಟ್ಟದಯುವಜನ ಮೇಳವನ್ನು ಫೆ. 14ರಿಂದ 16ರ ವರೆಗೆ ಗಜೇಂದ್ರಗಡದ ಎಪಿಎಂಸಿ ಎದುರಿನ ಬಯಲು ಜಾಗೆಯಲ್ಲಿ ಆಯೋಜಿಸಲಾಗಿದ್ದು, ಈಗಾಗಲೇ ಸಮಾರಂಭದ ಎಲ್ಲ ಸಿದ್ಧತೆಗಳು ಭರದಿಂದ ಸಾಗಿದೆ.

ಗಜೇಂದ್ರಗಡ ಐತಿಹಾಸಿಕವಾಗಿ ತನ್ನದೇ ಆದ ಹಿನ್ನೆಲೆ ಹೊಂದಿದೆ. ಮರಾಠ ಸಾಮಂತರು ಆಳ್ವಿಕೆಗೆ ಒಳಪಟ್ಟಿರುವ ಈ ಪ್ರದೇಶದಲ್ಲಿ ಜಾತಿ, ಮತ, ಭೇದ ಭಾವವಿಲ್ಲದೇ 18 ಮಠಗಳು, 18 ಮಸೀದಿಗಳು, 18 ಬಾವಿಗಳಿರುವುದು ವಿಶೇಷತೆಗೆ ಸಾಕ್ಷಿಯಾಗಿದೆ. ಈ ಹಿಂದೆ ಮೊದಲ ಬಾರಿಗೆ ಆಯ್ಕೆಯಾಗಿದ್ದ ಶಾಸಕ ಕಳಕಪ್ಪ ಬಂಡಿ ಅಧ್ಯಕ್ಷತೆಯಲ್ಲಿ ಡಿ. 20, 2008ರಲ್ಲಿ ಪ್ರಥಮ ಬಾರಿಗೆ ಗಜೇಂದ್ರಗಡದಲ್ಲಿ ರಾಜ್ಯಮಟ್ಟದ ಯುವಜನ ಮೇಳ ನಡೆಸಲಾಗಿತ್ತು. ಇದೀಗ ಎರಡನೇ ಬಾರಿಗೆ ನಡೆಸಲು ಸಿದ್ಧತೆ ನಡೆದಿದೆ.

ಸ್ಪರ್ಧಾಳುಗಳ ವಿವರ: ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಯುವಕ ಹಾಗೂ ಯುವತಿಯರಿಗೆ ಪ್ರತ್ಯೇಕ ಸ್ಪರ್ಧೆ ಏರ್ಪಡಿಸಲಾಗಿದೆ. ಭಾವಗೀತೆ ವೈಯಕ್ತಿಕ, ಲಾವಣಿ ವೈಯಕ್ತಿಕ, ರಂಗಗೀತೆ ವೈಯಕ್ತಿಕ, ಏಕಪಾತ್ರಾಭಿನಯ ವೈಯಕ್ತಿಕ, ಗೀಗಿಪದ 5 ಜನ, ಜಾನಪದ ಗೀತೆ 6 ಜನ, ಜಾನಪದ ನೃತ್ಯ 12 ಜನ, ಕೋಲಾಟ 12 ಜನ, ಭಜನೆ ಸ್ಪರ್ಧೆಯಲ್ಲಿ 8 ಜನ ಭಾಗವಹಿಸಬಹುದಾಗಿದೆ.

ಯುವಕರಿಗಾಗಿ ವೀರಗಾಸೆ 12 ಜನ, ಡೊಳ್ಳು ಕುಣಿತ 12 ಜನ, ದೊಡ್ಡಾಟ 15 ಜನ, ಸಣ್ಣಾಟ 12 ಜನ, ಯಕ್ಷಗಾನ 15 ಜನ, ಚರ್ಮವಾದ್ಯ ಮೇಳ 6 ಜನ ಹಾಗೂ ಯುವತಿಯರಿಗಾಗಿ ರಾಗಿ ಬೀಸುವ ಪದ ಇಬ್ಬರು, ಸೋಬಾನೆ ಪದ ನಾಲ್ವರು ಭಾಗವಹಿಸಬಹುದು. ಬೆಳಗಾವಿ, ಮೈಸೂರ, ಕಲಬುರಗಿ, ಬೆಂಗಳೂರ ವಿಭಾಗಗಳಿಂದ ಸುಮಾರ 784 ಸ್ಪರ್ಧಾಳುಗಳು, ಪ್ರತಿ ವಿಭಾಗದಿಂದ 2 ಜನ ವ್ಯವಸ್ಥಾಪಕರು ಪಾಲ್ಗೊಳ್ಳಲಿದ್ದಾರೆ.

ಸುಮಾರು 4 ಸಾವಿರ ಮಂದಿ ಏಕಕಾಲದಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಆಕರ್ಷಕ ವೇದಿಕೆ ನಿರ್ಮಿಸಲಾಗುತ್ತಿದ್ದು, ಸ್ಪರ್ಧಿಗಳು, ತೀರ್ಪುಗಾರರು, ಅಧಿಕಾರಿಗಳು, ಸ್ವಯಂ ಸೇವಕರು, ಪ್ರೇಕ್ಷಕರು ಸಹಿತ ಸಾವಿರಾರು ಜನ ಭಾಗವಹಿಸುವ ನಿರೀಕ್ಷೆ ಹೊಂದಿದ್ದಾರೆ. ರಾಜ್ಯಮಟ್ಟದ ಯುವಜನ ಮೇಳ ಇದಾಗಿರುವ ಕಾರಣ ಸಾಕಷ್ಟು ವಿಶೇಷತೆಗಳು ಇಲ್ಲಿರಲಿವೆ.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.