ಏಕಕಾಲಕ್ಕೆ ಕನ್ನಡ ಮತ್ತು ತೆಲುಗಿನಲ್ಲಿ “ಮೀನಾ ಬಜಾರ್‌’


Team Udayavani, Feb 13, 2020, 7:01 AM IST

Meena-Bazar

ಇಡೀ ಪ್ರಪಂಚವೇ ಒಂದು ಬಜಾರ್‌ ಇದ್ದಂತೆ. ಈ ಬಜಾರ್‌ನಲ್ಲಿ ಒಳ್ಳೆಯದು, ಕೆಟ್ಟದ್ದು ಎರಡೂ ಇದೆ. ಇಲ್ಲಿ ಎಲ್ಲವೂ ಸಿಗುತ್ತೆ. ನೋವಿದೆ, ನಲಿವಿದೆ, ಮೋಸವಿದೆ, ದ್ವೇಷವಿದೆ, ಅಸೂಯೆಯೂ ಇದೆ. ಅಷ್ಟೇ ಯಾಕೆ ಕ್ರೌರ್ಯವೂ ತುಂಬಿದೆ. ಇವೆಲ್ಲಾ ಅಂಶಗಳನ್ನು ಒಳಗೊಂಡ ಚಿತ್ರವನ್ನು ಮಾಡಿರುವ ನಿರ್ದೇಶಕ ರಾಣಾ ಸುನೀಲ್‌ಕುಮಾರ್‌ ಸಿಂಗ್‌, ಇದೀಗ ತಮ್ಮ ಚಿತ್ರವನ್ನು ಬಿಡುಗಡೆ ಮಾಡೋಕೆ ಅಣಿಯಾಗಿದ್ದಾರೆ.

ಅಂದಹಾಗೆ, ಅವರ ನಿರ್ದೇಶನದ ಚಿತ್ರಕ್ಕೆ “ಡಬ್ಲ್ಯು ಡಬ್ಲ್ಯು ಡಬ್ಲ್ಯು.ಮೀನಾ ಬಜಾರ್‌.ಕಾಮ್‌’ ಎಂದು ನಾಮಕರಣ ಮಾಡಿದ್ದಾರೆ. ಇದು ಅವರ ಎರಡನೇ ನಿರ್ದೇಶನದ ಚಿತ್ರ. ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ, ಸಾಹಸದ ಜೊತೆಯಲ್ಲಿ ಅವರು ಚಿತ್ರದಲ್ಲಿ ನಿರ್ದೇಶಕನ ಪಾತ್ರಕ್ಕೂ ಬಣ್ಣ ಹಚ್ಚಿದ್ದಾರೆ. ಚಿತ್ರ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿರುವುದರಿಂದ ಒಂದಷ್ಟು ಮಾಹಿತಿ ಹಂಚಿಕೊಂಡ ನಿರ್ದೇಶಕ ರಾಣಾ ಸುನೀಲ್‌ಕುಮಾರ್‌, ಹೇಳಿದ್ದಿಷ್ಟು.

“ಇದು ಈಗಿನ ವಾಸ್ತವ ಅಂಶಗಳನ್ನು ಹೊಂದಿದೆ. ಪ್ರಪಂಚ ಒಂದು ಬಜಾರ್‌ ಇದ್ದಂತೆ. ಇಲ್ಲಿ ಎಲ್ಲವೂ ಇದೆ. ಆ ವಿಷಯ ಇಟ್ಟುಕೊಂಡೇ ಒಂದಷ್ಟು ಪಾತ್ರಗಳ ಮೂಲಕ ಹೊಸ ವಿಷಯ ಹೇಳಹೊರಟಿದ್ದೇನೆ. ಇಲ್ಲಿ ಐದು ಪ್ರಮುಖ ಪಾತ್ರಗಳಿವೆ. ಪ್ರತಿಯೊಂದು ಪಾತ್ರಕ್ಕೂ ವಿಶೇಷತೆ ಇದೆ. ಚಿತ್ರ ನೋಡಿದವರಿಗೆ ಒಂದು ಸಂದೇಶವೂ ರವಾನೆಯಾಗುತ್ತೆ. ಅದೇನೆಂಬುದನ್ನು ಚಿತ್ರದಲ್ಲೇ ನೋಡಬೇಕು’ ಎಂಬುದು ನಿರ್ದೇಶಕರ ಮಾತು.

ಇನ್ನು, ಮುಂಬೈ ಮೂಲದ ಶ್ರೀಜಿತಾ ಘೋಷ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಅವರಿಲ್ಲಿ ನೇರವಾಗಿ ಮಾತನಾಡುವ, ತುಂಬಾನೇ ಬೋಲ್ಡ್‌ ಆಗಿರುವ ಪಾತ್ರ ಮಾಡಿದ್ದಾರಂತೆ. ಇನ್ನು, ಇದುವರೆಗೆ ಸುಮಾರು ನೂರಾರು ಚಿತ್ರಗಳಲ್ಲಿ ಐಟಂ ಡ್ಯಾನ್ಸರ್‌ ಆಗಿದ್ದ ಆಲಿಷಾ ಅವರು, ಇಲ್ಲಿ ಮೊದಲ ಸಲ ಖಳನಾಯಕಿ ಪಾತ್ರದಲ್ಲಿ ನಟಿಸಿದ್ದಾರಂತೆ. ಚಿತ್ರದಲ್ಲಿ ರಾಜೇಶ್‌ ನಟರಂಗ, ಅರವಿಂದ್‌, ಮಧುಸೂಧನ್‌, ಜೀವಾ, ಭಾಸ್ಕರ್‌, ಲಕ್ಷ್ಮೀ ಹೆಗಡೆ, ರೂಪೇಶ್‌ ಕುಮಾರ್‌ ಸೇರಿದಂತೆ ಹಲವರು ನಟಿಸಿದ್ದಾರೆ.

ಕದ್ರಿ ಮಣಿಕಾಂತ್‌ ಸಂಗೀತ ನೀಡಿದ್ದಾರೆ. ಮ್ಯಾಥುರಾಜನ್‌ ಛಾಯಾಗ್ರಹಣವಿದೆ. ಶ್ರೀಕಾಂತ್‌ ಸಂಕಲನ ಮಾಡಿದರೆ, ಸುಜಿ, ಅನೀ, ಕಲ್ಪನ್‌ ನೃತ್ಯ ಸಂಯೋಜಿಸಿದ್ದಾರೆ. ರಿಯಲ್‌ ಸತೀಶ್‌ ಸಾಹಸ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಈಗಾಗಲೇ ಸೆನ್ಸಾರ್‌ ಪ್ರಮಾಣ ಪತ್ರ ನೀಡಿದ್ದು, ಕನ್ನಡದಲ್ಲಿ ಯು/ಎ ತೆಲುಗಿನಲ್ಲಿ “ಯು’ ಪ್ರಮಾಣ ಪತ್ರ ಪಡೆದುಕೊಂಡಿರುವ ಚಿತ್ರಕ್ಕೆ ನಾಗೇಂದ್ರಸಿಂಗ್‌ ಅವರು ಸಿಂಗ್‌ ಸಿನಿಮಾಸ್‌ ಮೂಲಕ ನಿರ್ಮಾಣ ಮಾಡಿದ್ದಾರೆ.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.