ಅಧಿಕಾರದಲ್ಲಿದ್ದಾಗ ವರದಿ ಜಾರಿಗೊಳಿಸದೆ ಕಡಲೇಕಾಯಿ ತಿನ್ನುತ್ತಿದ್ದರೆ: ಸಿ.ಟಿ.ರವಿ


Team Udayavani, Feb 12, 2020, 9:02 PM IST

ct-ravi

ಬೆಂಗಳೂರು: ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಸರ್ಕಾರ ಬದ್ಧತೆ ತೋರಿಸಿದೆ. ಆದರೆ ವರದಿ ಜಾರಿಯಾದಾಗಿನಿಂದ ಬಹು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಪಕ್ಷಗಳಲ್ಲಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರದಿ ಜಾರಿಗೊಳಿಸದೆ ಕಡಲೇಕಾಯಿ ತಿನ್ನುತ್ತಿದ್ದರೆ ಎಂದು ಸಚಿವ ಸಿ.ಟಿ.ರವಿ ಖಾರವಾಗಿ ಪ್ರಶ್ನಿಸಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಲ್ಲಿ ಬದ್ಧತೆ ತೋರಿಸಿದೆ. ಶಿಕ್ಷಣ ಮಾಧ್ಯಮ ಕನ್ನಡವಾಗಿರಬೇಕು ಎಂಬುದು ಸರ್ಕಾರದ ಅಪೇಕ್ಷೆ. ಆದರೆ ಮುಖ್ಯಮಂತ್ರಿಗಳೇ ಹೇಳಿದಂತೆ ಸಮಾಜದ ಸಹಕಾರವಿಲ್ಲದೇ ಯಶಸ್ಸುಗೊಳಿಸಲು ಸಾಧ್ಯವಿಲ್ಲ. ಮಕ್ಕಳಿಗೆ ಶಿಕ್ಷಣ ಮಾಧ್ಯಮವು ಪೋಷಕರ ಆಯ್ಕೆ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದು, ಸರ್ಕಾರವನ್ನು ಅಸಹಾಯಕವನ್ನಾಗಿ ಮಾಡಿದೆ. ಶಿಕ್ಷಣದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸದೆ ಆಡಳಿತದಲ್ಲಿ ಕನ್ನಡ ಉಳಿಸಲು ಹೇಗೆ ಸಾಧ್ಯ. ಹೀಗೇ ಮುಂದುವರಿದರೆ ಮುಂದಿನ 3-4 ತಲೆಮಾರಿನವರಿಗೆ ಕನ್ನಡದಲ್ಲಿ ಮಾತನಾಡಿದರೆ ಅರ್ಥವಾಗದ ಸ್ಥಿತಿ ಬರಬಹುದು. ಇದೊಂದು ಜಟಿಲ ಸಮಸ್ಯೆಯಾಗಿದೆ ಎಂದು ಹೇಳಿದರು.

ಖಾಸಗಿ ವಲಯದಲ್ಲಿ ವರದಿ ಜಾರಿ ಹೇಳುವಷ್ಟು ಸುಲಭವಾಗಿಲ್ಲ. ಹಂತ ಹಂತವಾಗಿ ಜಾರಿಗೊಳಿಸಬೇಕಾಗುತ್ತದೆ. ಉತ್ಪಾದನಾ ವಲಯದ ಮೇಲೆ ಪರಿಣಾಮ ಬೀರರಂತೆ ಮುಂದಡಿ ಇಡಬೇಕಾಗುತ್ತದೆ. ಖಾಸಗಿ ವಲಯಕ್ಕೆ ಕುಶಲ ನೌಕರರ ಅಗತ್ಯವಿದೆ. ಆದರೆ ಹೋಟೆಲ್‌ಗ‌ಳಿಗೆ ನೌಕರರು ಸಿಗದ ಸ್ಥಿತಿ ಇದೆ. ಹಾಗಾಗಿ ಖಾಸಗಿ ವಲಯದಲ್ಲಿ ಜಾರಿಯಿಂದ ಉಂಟಾಗುವ ಪರಿಣಾಮಗಳ ಅವಲೋಕನ ಅಗತ್ಯವಿದೆ. ಸೂಕ್ತ ಕೌಶಲ್ಯ ತರಬೇತಿ ಕೊಡಿಸಿ ಎಲ್ಲೆಡೆ ಲಭ್ಯವಾಗುವ ಸ್ಥಿತಿ ನಿರ್ಮಿಸಬೇಕು. ಇಲ್ಲದಿದ್ದರೆ ಕೈಗಾರಿಕೆ ಮುಚ್ಚಿಸುವುದಷ್ಟೇ ನಡೆಯಲಿದೆ ಎಂದು ತಿಳಿಸಿದರು.

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹೋರಾಟಗಾರರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಬಲ ಸೂಚಿಸಿರುವುದು ಹಾಸ್ಯಾಸ್ಪದ. ವರದಿ ಜಾರಿಯಾದ ದಿನದಿಂದ ಬಹು ವರ್ಷಗಳ ಕಾಲ ಅಧಿಕಾರದಲ್ಲಿ ಇದ್ದುದು ಸಿದ್ದರಾಮಯ್ಯ ಹಾಗೂ ಅವರಿದ್ದ ಜನತಾ ಪಕ್ಷ, ಕಾಂಗ್ರೆಸ್‌ ಪಕ್ಷ. ಆಗೆಲ್ಲಾ ಅವರು ಕಡಲೇಕಾಯಿ ತಿನ್ನುತ್ತಿದ್ದರೆ?ಅಧಿಕಾರ ಕಳೆದುಕೊಂಡ ಕೂಡಲೇ ವರದಿ ಜಾರಿಗೆ ಒತ್ತಾಯಿಸುವವರಿಗೆ ಬೆಂಬಲ ನೀಡುತ್ತಾರೆ. ಅಧಿಕಾರದಲ್ಲಿದ್ದಾಗ ಅವರೇನು ಮೈಮರೆತು ಮಲಗಿದ್ದರೆ ಎಂದು ಪ್ರಶ್ನಿಸಿದರು.

ವರದಿ ಮಂಡನೆಯಾದಾಗ ಅಧಿಕಾರದಲ್ಲಿದ್ದ ಪಕ್ಷಗಳಲ್ಲಿ ಸಿದ್ದರಾಮಯ್ಯ ಅವರಿದ್ದರು. ಉಪಮುಖ್ಯಮಂತ್ರಿ, ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದಾಗೆಲ್ಲಾ ಅವರಿಗೆ ವರದಿ ಜಾರಿಗೊಳಿಸಬೇಕು ಎನ್ನಿಸಲಿಲ್ಲ. ಇದೀಗ ವರದಿ ಜಾರಿ ಹೋರಾಟಕ್ಕೆ ಬೆಂಬಲ ನೀಡಿರುವುದು ಹಾಸ್ಯಾಸ್ಪದ. ಹಾಗೆಯೇ ಅವರ ಮಾತನ್ನು ನಂಬುವುದು ಯಾವುದರ ಪರಮಾವಧಿ ಎಂದು ನಾನು ಬಾಯಿ ಬಿಟ್ಟು ಹೇಳಬೇಕಿಲ್ಲ. ಸಿದ್ದರಾಮಯ್ಯ ಅವರು ಅಧಿಕಾರದಲ್ಲಿದ್ದಾಗ ಸೋನಿಯಮ್ಮನ ಭೂತ ಇತ್ತೆ ಎಂದು ಕೇಳಿದರೆ ಅವರಿಗೆ ಕೋಪ ಬರುತ್ತದೆ ಎಂದು ವ್ಯಂಗ್ಯವಾಡಿದರು.

ಬಂದ್‌ಗೆ ಕರೆ ನೀಡಿರುವ ಚಳವಳಿಗಾರರನ್ನು ನಾನು, ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಸಚಿವರಾದ ಎಸ್‌.ಸುರೇಶ್‌ ಕುಮಾರ್‌ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದೇವೆ. ಮುಖ್ಯಮಂತ್ರಿಗಳು ಕೂಡ ಕರೆಸಿ ಮಾತನಾಡಿದ್ದಾರೆ.

ನಾವು ಎಲ್ಲ ರೀತಿಯ ಪ್ರಯತ್ನ ಮಾಡಿದ್ದೇವೆ. ಕನ್ನಡದ ಬಗ್ಗೆ ನಮ್ಮದು ಸೋಗಲಾಡಿತನದ ಬದ್ಧತೆಯಲ್ಲ. ಸಹಜ ಬದ್ಧತೆ. ಬಂದ್‌ ಕರೆ ಹಿಂಪಡೆಯುವಂತೆ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ ಎಂದು ಹೇಳಿದರು.
ಪುನರ್‌ ಪರಿಶೀಲನೆ ಅರ್ಜಿ ಬಗ್ಗೆ ಪರಿಶೀಲನೆ ಶಿಕ್ಷಣ ಮಾಧ್ಯಮ ಸಂಬಂಧ ಸುಪ್ರೀಂ ಕೋರ್ಟ್‌ ತೀರ್ಪಿಗೆ ಸಂಬಂಧಪಟ್ಟಂತೆ ಪುನರ್‌ ಪರಿಶೀಲನೆಗೆ ಅರ್ಜಿ ಸಲ್ಲಿಸಲು ಅವಕಾಶದ ಸಾಧ್ಯಾಸಾಧ್ಯತೆ ಬಗ್ಗೆ ಪ್ರತಿಪಕ್ಷಗಳ ನಾಯಕರು, ಸಾಹಿತಿಗಳು, ಚಿಂತಕರನ್ನು ಕರೆಸಿ ಚರ್ಚಿಸಲು ನಿರ್ಧರಿಸಲಾಗಿದೆ. ಒಂದೊಮ್ಮೆ ಪುನರ್‌ ಪರಿಶೀಲನೆ ಅರ್ಜಿ ಸಲ್ಲಿಕೆಗೆ ಅವಕಾಶವಿಲ್ಲದಿದ್ದರೆ ಸಂವಿಧಾನದ ತಿದ್ದುಪಡಿಗೆ ಒತ್ತಾಯಿಸಲು ನಾನಾ ರಾಜ್ಯಗಳ ಸಹಕಾರ ಕೋರಲು ಚಿಂತಿಸಲಾಗಿದೆ. ಮಾತೃಭಾಷೆ ಶಿಕ್ಷಣ ಮಾಧ್ಯಮವಾಗದಿದ್ದರೆ ಕನ್ನಡ ಮಾತ್ರವಲ್ಲದೇ ಎಲ್ಲ ಪ್ರಾದೇಶಿಕ ಭಾಷೆಗಳು 3- 4 ದಶಕಗಳ ಬಳಿಕ ಕೇವಲ ಆಡುಭಾಷೆ, ಬೆರಕರೆ ಮಾತಾಗಿ ಉಳಿಯಲಿವೆ. ಇಂಗ್ಲಿಷ್‌ ಭಾಷೆ ಕನ್ನಡಕ್ಕಷ್ಟೇ ಅಪಾಯವಲ್ಲ. ತಮಿಳು, ತೆಲುಗು, ಮಲಯಾಳ ನಂತರ ನಿಧಾನವಾಗಿ ಹಿಂದಿಯನ್ನೂ ಕೊಲ್ಲುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.